<p><strong>ಮಾಲೂರು (ಕೋಲಾರ)</strong>: ತಾಲ್ಲೂಕಿನ ಲಕ್ಷ್ಮಿಸಾಗರದ ಬಳಿ ಚೆನ್ನೈ–ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಮಂಗಳವಾರ ಸಂಭವಿಸಿದ ಕಾರು ಅಪಘಾತದಲ್ಲಿ ಬಾಲಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.</p>.<p>ಸೈಯದ್ ಮುಜಾಮಿಲ್ (9) ಮೃತ ಬಾಲಕ ಎಂದು ಗುರುತಿಸಲಾಗಿದೆ. ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿದೆ.</p>.<p>ಕಾರಿನಲ್ಲಿ ಏಳು ಮಂದಿ ಇದ್ದರು ಎಂಬುದು ಗೊತ್ತಾಗಿದೆ. ಗಾಯಗೊಂಡಿರುವ ಯಾಸ್ಮಿನ್ ನಾಜ್, ಸೈಯದ್ ಹಜೀರಾ ಮರಿಯಮ್, ಸೈಯದ್ ಆತಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಬಂದು ಬಂಗಾರಪೇಟೆ ಕಡೆ ತೆರಳುತ್ತಿದ್ದರು. ಇವರಲ್ಲಿ ಕೆಲವರು ಬೆಂಗಳೂರಿನ ನಿವಾಸಿಗಳಾಗಿದ್ದು, ಸೈಯದ್ ಸಹೀದ್ ಅನ್ವರ್ ಎಂಬುವರು ಕಾರು ಚಲಾಯಿಸುತ್ತಿದ್ದರು ಎಂಬುದು ಗೊತ್ತಾಗಿದೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-18-684561236</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು (ಕೋಲಾರ)</strong>: ತಾಲ್ಲೂಕಿನ ಲಕ್ಷ್ಮಿಸಾಗರದ ಬಳಿ ಚೆನ್ನೈ–ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಮಂಗಳವಾರ ಸಂಭವಿಸಿದ ಕಾರು ಅಪಘಾತದಲ್ಲಿ ಬಾಲಕ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.</p>.<p>ಸೈಯದ್ ಮುಜಾಮಿಲ್ (9) ಮೃತ ಬಾಲಕ ಎಂದು ಗುರುತಿಸಲಾಗಿದೆ. ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿಯಾಗಿದೆ.</p>.<p>ಕಾರಿನಲ್ಲಿ ಏಳು ಮಂದಿ ಇದ್ದರು ಎಂಬುದು ಗೊತ್ತಾಗಿದೆ. ಗಾಯಗೊಂಡಿರುವ ಯಾಸ್ಮಿನ್ ನಾಜ್, ಸೈಯದ್ ಹಜೀರಾ ಮರಿಯಮ್, ಸೈಯದ್ ಆತಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಬಂದು ಬಂಗಾರಪೇಟೆ ಕಡೆ ತೆರಳುತ್ತಿದ್ದರು. ಇವರಲ್ಲಿ ಕೆಲವರು ಬೆಂಗಳೂರಿನ ನಿವಾಸಿಗಳಾಗಿದ್ದು, ಸೈಯದ್ ಸಹೀದ್ ಅನ್ವರ್ ಎಂಬುವರು ಕಾರು ಚಲಾಯಿಸುತ್ತಿದ್ದರು ಎಂಬುದು ಗೊತ್ತಾಗಿದೆ. ಮಾಸ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260527-18-684561236</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>