<p><strong>ಕೋಲಾರ:</strong> ‘ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟ್ಯಾಚ್ಮೆಂಟ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿದೆ. ಈ ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕು’ ಎಂದು ಒತ್ತಾಯಿಸಿ ಸಿಪಿಎಂನಿಂದ ನಗರದ ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.</p><p>ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಮಾತನಾಡಿ, ‘ಸುಮಾರು 2006 ರಲ್ಲಿ ಒಂದು ಸಣ್ಣ ಶೆಡ್ನಲ್ಲಿ ಆರಂಭವಾದ ವೆರ್ಗಾ ಕಂಪನಿಯು 2019 ರಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆ ಪಡೆದಿದೆ’ ಎಂದರು.</p><p>ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್ಸ್ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್ ಮತ್ತು ಕಪ್ಲರ್ಸ್ 200 ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದೆ. ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ. ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19 ರಲ್ಲಿ ವೆರ್ಗಾ 2, ವೆರ್ಗಾ 3 ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಲಾಗಿದೆ. 2023 ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಬದಲಾವಣೆ ಮಾಡಲಾಗಿದೆ. ವೆರ್ಗಾ 1 ಘಟಕದಲ್ಲಿ 2019 ರಲ್ಲಿ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮಿ ನೀಡಿ ಹಂತ ಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.</p><p>ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಕಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕ ವಾಗಿರುವ ಕೈಗಾರಿಕೆಯನ್ನು ನಷ್ಟ ಎಂದು ತೋರಿಸಲಾಗುತ್ತಿದೆ ಎಂದು<br>ದೂರಿದರು.</p><p>ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ, ‘ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹ<br>ವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು’ ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಒತ್ತಾಯಿಸಿದರು,</p><p>ಪ್ರತಿಭಟನೆಯ ನೇತೃತ್ವವನ್ನು ಸಿಪಿಎಂ ತಾಲ್ಲೂಕು ಮುಖಂಡರಾದ ಎಂ.ಭೀಮರಾಜ್, ಎನ್.ಎನ್.ಶ್ರೀರಾಮ್, ಎಸ್.ಆಶಾ, ವಿ.ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ.ವಿ.ಮಂಜುನಾಥ್, ಚಿನ್ನಮ್ಮ, ಡಿ.ಎಸ್.ವೆಂಕಟರವಣ<br>ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟ್ಯಾಚ್ಮೆಂಟ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿದೆ. ಈ ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕು’ ಎಂದು ಒತ್ತಾಯಿಸಿ ಸಿಪಿಎಂನಿಂದ ನಗರದ ತಹಶೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.</p><p>ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಟಿ.ಎಂ.ವೆಂಕಟೇಶ್ ಮಾತನಾಡಿ, ‘ಸುಮಾರು 2006 ರಲ್ಲಿ ಒಂದು ಸಣ್ಣ ಶೆಡ್ನಲ್ಲಿ ಆರಂಭವಾದ ವೆರ್ಗಾ ಕಂಪನಿಯು 2019 ರಲ್ಲಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದೇಶಕ್ಕೆ ರಪ್ತು ಮಾಡಿದ ಲಾಭದಾಯಕ ಕಂಪನಿ ಎಂಬ ಹೆಗ್ಗಳಿಕೆ ಪಡೆದಿದೆ’ ಎಂದರು.</p><p>ಈ ಕೈಗಾರಿಕೆಯು ಬುಲ್ಡೋಜರ್ ಬಕೆಟ್ಸ್ಗೆ ಬೇಕಾಗುವ ಎಕ್ಸ್ ಕವೇಟರ್ ಬಕೆಟ್ಸ್, ರಿಫ್ ಮತ್ತು ಕಪ್ಲರ್ಸ್ 200 ರಿಂದ 1800 ವಿವಿಧ ಸಾಮಗ್ರಿಗಳನ್ನು ತಯಾರಿ ಮಾಡಿ, ಸುಮಾರು 58 ದೇಶಗಳಿಗೆ ರಪ್ತು ಮಾಡುತ್ತಿದೆ. ಲಾಭದಾಯಕವಾಗಿ ನಡೆಯುತ್ತಿರುವ ಕೈಗಾರಿಕೆಯಾಗಿದೆ. ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19 ರಲ್ಲಿ ವೆರ್ಗಾ 2, ವೆರ್ಗಾ 3 ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಲಾಗಿದೆ. 2023 ರಲ್ಲಿ ವೆರ್ಗಾ 2 ಮತ್ತು ವೆರ್ಗಾ 3 ಘಟಕದ ಹೆಸರನ್ನು ವೀರ್ಯ 1 ಮತ್ತು ವೀರ್ಯ 2 ಎಂದು ಬದಲಾವಣೆ ಮಾಡಲಾಗಿದೆ. ವೆರ್ಗಾ 1 ಘಟಕದಲ್ಲಿ 2019 ರಲ್ಲಿ ದುಡಿಯುತ್ತಿದ್ದ 182 ಕಾರ್ಮಿಕರಿಗೆ ಹಲವು ಆಸೆ ಆಮಿ ನೀಡಿ ಹಂತ ಹಂತವಾಗಿ ಕಡಿಮೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.</p><p>ವೆರ್ಗಾ ಕಂಪನಿಯಲ್ಲಿ ಪ್ರಸ್ತುತ ದುಡಿಯುತ್ತಿರುವ 81 ಕಾಯಂ ಕಾರ್ಮಿಕರನ್ನು ಮನೆಗೆ ಕಳುಹಿಸಿ ಗುತ್ತಿಗೆ ಕಾರ್ಮಿಕರಿಗೆ ಕಡಿಮೆ ವೇತನವನ್ನು ನೀಡಿ ಕೆಲಸ ಮಾಡಿಸಿಕೊಳ್ಳುವ ದುರುದ್ದೇಶದಿಂದ ಲಾಭದಾಯಕ ವಾಗಿರುವ ಕೈಗಾರಿಕೆಯನ್ನು ನಷ್ಟ ಎಂದು ತೋರಿಸಲಾಗುತ್ತಿದೆ ಎಂದು<br>ದೂರಿದರು.</p><p>ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ವಿಜಯಕೃಷ್ಣ ಮಾತನಾಡಿ, ‘ಆಡಳಿತ ಮಂಡಳಿಯು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗದೇ ಇರುವುದು ಸರಿಯಲ್ಲ. 10 ದಿನಗಳಿಂದ ಸರದಿ ಉಪವಾಸ ಸತ್ಯಾಗ್ರಹ<br>ವನ್ನು ಅಲ್ಲಿನ ಕಾರ್ಮಿಕರು ನಡೆಸುತ್ತಿದ್ದರೂ ಜಿಲ್ಲಾಡಳಿತ ಮತ್ತು ಜಿಲ್ಲೆಯ ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನ ನಡೆಸದೇ ಇರುವುದು ಸರಿಯಲ್ಲ. ತಕ್ಷಣ ಮಧ್ಯ ಪ್ರವೇಶ ಮಾಡಿ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು’ ಎಂದು ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಒತ್ತಾಯಿಸಿದರು,</p><p>ಪ್ರತಿಭಟನೆಯ ನೇತೃತ್ವವನ್ನು ಸಿಪಿಎಂ ತಾಲ್ಲೂಕು ಮುಖಂಡರಾದ ಎಂ.ಭೀಮರಾಜ್, ಎನ್.ಎನ್.ಶ್ರೀರಾಮ್, ಎಸ್.ಆಶಾ, ವಿ.ನಾರಾಯಣರೆಡ್ಡಿ, ಗಂಗಟ್ಟ ಯಲ್ಲಪ್ಪ, ಕೆ.ವಿ.ಮಂಜುನಾಥ್, ಚಿನ್ನಮ್ಮ, ಡಿ.ಎಸ್.ವೆಂಕಟರವಣ<br>ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>