<p>ಕೋಲಾರ: ಮಾಲೂರು ತಾಲ್ಲೂಕಿನ ಅಗಲಕೋಟೆ ಗ್ರಾಮದಲ್ಲಿ ಸರ್ಕಾರಿ ಶಾಲೆಗೆಂದು ದಾನವಾಗಿ ನೀಡಿದ್ದ 50 ಎಕರೆ 26 ಗುಂಟೆ ಜಮೀನನ್ನು ಉಳಿಸುವಂತೆ ಶಾಸಕ ಹಾಗೂ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರಿಗೆ ಮನವಿ ಸಲ್ಲಿಸಿತು.</p>.<p>ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ಬುಧವಾರ ಭೇಟಿಯಾದ ಮುಖಂಡರು, ಕಡತಗಳನ್ನು ತೋರಿಸಿ ಮನದಟ್ಟಲು ಮಾಡಲು ಪ್ರಯತ್ನಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ‘1955ರಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಟಿ.ಜಿ.ಶ್ರೀನಿವಾಸುಲು ಎಂಬುವರು 50 ಎಕರೆ 26 ಗುಂಟೆ ಜಮೀನನ್ನು ದಾನ ಮಾಡಿದ್ದರು. ಅದೀಗ ಪರಭಾರೆ ಮಾಡಿಕೊಂಡು, ಕೆಲ ರಿಯಲ್ ಎಸ್ಟೇಟ್ ಶಕ್ತಿಗಳು ಆ ಜಾಗ ಲಪಟಾಯಿಸಲು ಪ್ರಯತ್ನಿಸುತ್ತಿವೆ. ಶಿಕ್ಷಣಾಧಿಕಾರಿಗಳು ಕೂಡ ತಹಶೀಲ್ದಾರ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ’ ಎಂದರು.</p>.<p>ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ್ ಕೇಳಿದ ಪ್ರಶ್ನೆಗೆ ಸತ್ಯಕ್ಕೆ ದೂರವಿರುವ ಉತ್ತರ ಸಿಕ್ಕಿದೆ. ಈ ವಿಚಾರವನ್ನೂ ಸಮಿತಿ ಮುಂದೆ ಪ್ರಸ್ತಾಪಿಸುತ್ತೇನೆ. ನ್ಯಾಯಾಲಯದಲ್ಲೂ ಹೋರಾಡಲು ಸಿದ್ಧ ಎಂದು ಹೇಳಿದರು.</p>.<p>ಮಾಲೂರಿನ ಮಾಜಿ ಶಾಸಕ ಕೆ.ಎಸ್.ಮಂಜುನಾಥಗೌಡ ಮಾತನಾಡಿ, ‘ಅಗಲಕೋಟೆ ವಿಚಾರವಾಗಿ ನ್ಯಾಯ ಸಿಗುವವರೆಗೆ ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಗ್ರಾಮ ಠಾಣಾವನ್ನು ಒಂದೇ ಕುಟುಂಬದವರು ಸುಮಾರು ಏಳು ಎಕರೆ ಜಮೀನನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ’ ಎಂದರು.</p>.<p>ಗ್ರಾಮದ ನಕ್ಷೆಯಲ್ಲಿ ಬಂಡಿದಾರಿ, ಕೆರೆ ಕುಂಟೆ, ರಾಜಕಾಲುವೆ, ಸ್ಮಶಾನ, ಗುಂಡುತೋಪು ಇವೆ. ಅಷ್ಟಕ್ಕೂ ಸೇರಿ ಕಾಂಪೌಂಡ್ ಹಾಕಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿ, ತಹಶೀಲ್ದಾರ್, ಬಿಇಒ ಗಮನಕ್ಕೆ ತಂದಿದ್ದೇನೆ. ಈವರೆಗೆ ಯಾವುದೇ ಕ್ರಮವಾಗಿಲ್ಲ. ಅಧಿಕಾರಿಗಳು ಶಾಮೀಲಾಗದೆ ಇದೆಲ್ಲಾ ನಡೆಯುತ್ತದೆಯೇ ಎಂದು ಪ್ರಶ್ನಿಸಿದರು.</p>.<p>ಸುಮಾರು ₹ 200ರಿಂದ 300 ಕೋಟಿ ಮೌಲ್ಯದ ಅವ್ಯವಹಾರವಿದೆ. ಅಷ್ಟು ಬೆಲೆ ಬಾಳುವ ಜಮೀನು ಇದಾಗಿದೆ. ಬರೀ 50 ಎಕರೆ ಅಲ್ಲ; ಇಲ್ಲಿರುವ 250 ಎಕರೆಯೂ ಸಮಸ್ಯೆಯಾತ್ಮಕವಾಗಿದೆ. ಮಂಜೂರಾಗಿರುವುದೇ ಬೋಗಸ್, ಇನಾಂ ಡಿ.ಸಿ ಆದೇಶವೂ ಬೋಗಸ್ ಎಂದು ಆರೋಪಿಸಿದರು.</p>.<p>ಈ ವಿಚಾರದಲ್ಲಿ ಸದನಕ್ಕೆ ತಪ್ಪು ಮಾಹಿತಿ ನೀಡಿದವರಾರು ಎಂಬುದು ಗೊತ್ತಾಗಬೇಕು. ಕಂದಾಯ ಸಚಿವ ಕೃಷ್ಣಬೈರೇಗೌಡ ಇಂಥ ವಿಚಾರಕ್ಕೆ ಕೈಹಾಕುವವರಲ್ಲ. ಇಲಾಖೆಯಲ್ಲಿ ಸುಧಾರಣೆಗೆ ಪ್ರಯತ್ನಿಸುತ್ತಿದ್ದಾರೆ. ಅಂಥವರ ಕೈಯಲ್ಲಿ ಸುಳ್ಳು ಹೇಳಿಸಿದ್ದಾರೆ ಎಂದು ದೂರಿದರು.</p>.<p>ಪರಿಶೀಲನೆ ನಡೆಸಿ ಕ್ರಮ: ಅಗಲಕೋಟೆ ಜಮೀನು ಪ್ರಕರಣ ಈಗಾಗಲೇ ನಮ್ಮ ಗಮನದಲ್ಲಿದ್ದು, ಪರಿಶೀಲನೆ ನಡೆಸಿ ಕ್ರಮ ವಹಿಸುವುದಾಗಿ ಜಿಲ್ಲಾಧಿಕಾರಿ ಎಂ.ಆರ್.ರವಿ ಭರವಸೆ ನೀಡಿದರು.</p>.<p>ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಸಂಸದ ಎಸ್.ಮುನಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್, ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ರಾಜೇಶ್ ಸಿಂಗ್, ಮಮತಮ್ಮ, ವಕೀಲರು ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-18-1944222046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಮಾಲೂರು ತಾಲ್ಲೂಕಿನ ಅಗಲಕೋಟೆ ಗ್ರಾಮದಲ್ಲಿ ಸರ್ಕಾರಿ ಶಾಲೆಗೆಂದು ದಾನವಾಗಿ ನೀಡಿದ್ದ 50 ಎಕರೆ 26 ಗುಂಟೆ ಜಮೀನನ್ನು ಉಳಿಸುವಂತೆ ಶಾಸಕ ಹಾಗೂ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಜಿಲ್ಲಾಧಿಕಾರಿ ಎಂ.ಆರ್.ರವಿ ಅವರಿಗೆ ಮನವಿ ಸಲ್ಲಿಸಿತು.</p>.<p>ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ಬುಧವಾರ ಭೇಟಿಯಾದ ಮುಖಂಡರು, ಕಡತಗಳನ್ನು ತೋರಿಸಿ ಮನದಟ್ಟಲು ಮಾಡಲು ಪ್ರಯತ್ನಿಸಿದರು.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, ‘1955ರಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಟಿ.ಜಿ.ಶ್ರೀನಿವಾಸುಲು ಎಂಬುವರು 50 ಎಕರೆ 26 ಗುಂಟೆ ಜಮೀನನ್ನು ದಾನ ಮಾಡಿದ್ದರು. ಅದೀಗ ಪರಭಾರೆ ಮಾಡಿಕೊಂಡು, ಕೆಲ ರಿಯಲ್ ಎಸ್ಟೇಟ್ ಶಕ್ತಿಗಳು ಆ ಜಾಗ ಲಪಟಾಯಿಸಲು ಪ್ರಯತ್ನಿಸುತ್ತಿವೆ. ಶಿಕ್ಷಣಾಧಿಕಾರಿಗಳು ಕೂಡ ತಹಶೀಲ್ದಾರ್ಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ’ ಎಂದರು.</p>.<p>ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಕೇಶವಪ್ರಸಾದ್ ಕೇಳಿದ ಪ್ರಶ್ನೆಗೆ ಸತ್ಯಕ್ಕೆ ದೂರವಿರುವ ಉತ್ತರ ಸಿಕ್ಕಿದೆ. ಈ ವಿಚಾರವನ್ನೂ ಸಮಿತಿ ಮುಂದೆ ಪ್ರಸ್ತಾಪಿಸುತ್ತೇನೆ. ನ್ಯಾಯಾಲಯದಲ್ಲೂ ಹೋರಾಡಲು ಸಿದ್ಧ ಎಂದು ಹೇಳಿದರು.</p>.<p>ಮಾಲೂರಿನ ಮಾಜಿ ಶಾಸಕ ಕೆ.ಎಸ್.ಮಂಜುನಾಥಗೌಡ ಮಾತನಾಡಿ, ‘ಅಗಲಕೋಟೆ ವಿಚಾರವಾಗಿ ನ್ಯಾಯ ಸಿಗುವವರೆಗೆ ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ, ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಗ್ರಾಮ ಠಾಣಾವನ್ನು ಒಂದೇ ಕುಟುಂಬದವರು ಸುಮಾರು ಏಳು ಎಕರೆ ಜಮೀನನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ’ ಎಂದರು.</p>.<p>ಗ್ರಾಮದ ನಕ್ಷೆಯಲ್ಲಿ ಬಂಡಿದಾರಿ, ಕೆರೆ ಕುಂಟೆ, ರಾಜಕಾಲುವೆ, ಸ್ಮಶಾನ, ಗುಂಡುತೋಪು ಇವೆ. ಅಷ್ಟಕ್ಕೂ ಸೇರಿ ಕಾಂಪೌಂಡ್ ಹಾಕಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿ, ತಹಶೀಲ್ದಾರ್, ಬಿಇಒ ಗಮನಕ್ಕೆ ತಂದಿದ್ದೇನೆ. ಈವರೆಗೆ ಯಾವುದೇ ಕ್ರಮವಾಗಿಲ್ಲ. ಅಧಿಕಾರಿಗಳು ಶಾಮೀಲಾಗದೆ ಇದೆಲ್ಲಾ ನಡೆಯುತ್ತದೆಯೇ ಎಂದು ಪ್ರಶ್ನಿಸಿದರು.</p>.<p>ಸುಮಾರು ₹ 200ರಿಂದ 300 ಕೋಟಿ ಮೌಲ್ಯದ ಅವ್ಯವಹಾರವಿದೆ. ಅಷ್ಟು ಬೆಲೆ ಬಾಳುವ ಜಮೀನು ಇದಾಗಿದೆ. ಬರೀ 50 ಎಕರೆ ಅಲ್ಲ; ಇಲ್ಲಿರುವ 250 ಎಕರೆಯೂ ಸಮಸ್ಯೆಯಾತ್ಮಕವಾಗಿದೆ. ಮಂಜೂರಾಗಿರುವುದೇ ಬೋಗಸ್, ಇನಾಂ ಡಿ.ಸಿ ಆದೇಶವೂ ಬೋಗಸ್ ಎಂದು ಆರೋಪಿಸಿದರು.</p>.<p>ಈ ವಿಚಾರದಲ್ಲಿ ಸದನಕ್ಕೆ ತಪ್ಪು ಮಾಹಿತಿ ನೀಡಿದವರಾರು ಎಂಬುದು ಗೊತ್ತಾಗಬೇಕು. ಕಂದಾಯ ಸಚಿವ ಕೃಷ್ಣಬೈರೇಗೌಡ ಇಂಥ ವಿಚಾರಕ್ಕೆ ಕೈಹಾಕುವವರಲ್ಲ. ಇಲಾಖೆಯಲ್ಲಿ ಸುಧಾರಣೆಗೆ ಪ್ರಯತ್ನಿಸುತ್ತಿದ್ದಾರೆ. ಅಂಥವರ ಕೈಯಲ್ಲಿ ಸುಳ್ಳು ಹೇಳಿಸಿದ್ದಾರೆ ಎಂದು ದೂರಿದರು.</p>.<p>ಪರಿಶೀಲನೆ ನಡೆಸಿ ಕ್ರಮ: ಅಗಲಕೋಟೆ ಜಮೀನು ಪ್ರಕರಣ ಈಗಾಗಲೇ ನಮ್ಮ ಗಮನದಲ್ಲಿದ್ದು, ಪರಿಶೀಲನೆ ನಡೆಸಿ ಕ್ರಮ ವಹಿಸುವುದಾಗಿ ಜಿಲ್ಲಾಧಿಕಾರಿ ಎಂ.ಆರ್.ರವಿ ಭರವಸೆ ನೀಡಿದರು.</p>.<p>ಈ ವೇಳೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮಾಜಿ ಸಂಸದ ಎಸ್.ಮುನಿಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್, ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ರಾಜೇಶ್ ಸಿಂಗ್, ಮಮತಮ್ಮ, ವಕೀಲರು ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-18-1944222046</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>