<p><strong>ಕೋಲಾರ</strong>: ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸದ್ಯದಲ್ಲೇ ಟಾಟಾ–ಏರ್ ಬಸ್ ಹೆಲಿಕಾಪ್ಟರ್ ಅಸೆಂಬ್ಲಿ ಲೈನ್ ಘಟಕ ತಲೆ ಎತ್ತಲಿದೆ. ಆರಂಭಿಕವಾಗಿ 500 ಹೆಲಿಕಾಪ್ಟರ್ ತಯಾರಿಸಲು ಬೇಡಿಕೆ ಬಂದಿದೆ.</p>.<p>ಈ ವಿಚಾರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.</p>.<p>‘ಕರ್ನಾಟಕ ರಾಜ್ಯವು ಆಂಧ್ರ ಪ್ರದೇಶ, ಗುಜರಾತ್, ಉತ್ತರ ಪ್ರದೇಶ ಹಿಂದಿಕ್ಕಿ ಈ ಅವಕಾಶ ಗಿಟ್ಟಿಸಿಕೊಂಡಿದೆ. ಏರೋಸ್ಪೇಸ್ ತಯಾರಿಕಾ ಕ್ಷೇತ್ರದಲ್ಲಿ ಈ ಮೂಲಕ ರಾಜ್ಯದ ಪಾರಮ್ಯ ಮುಂದುವರಿದಿದೆ. ಏರೋಸ್ಪೇಸ್ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಶೇ 65ರಷ್ಟು ಕೊಡುಗೆಯೊಂದಿಗೆ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ವಿಶ್ವದಲ್ಲಿ ಇಂಥ ನಾಲ್ಕು ಅಸೆಂಬ್ಲಿ ಘಟಕಗಳು ಮಾತ್ರ ಇವೆ. ಅದರಲ್ಲಿ ಕರ್ನಾಟಕವೂ ಸ್ಥಾನ ಪಡೆದಿದೆ. ಈ ಕ್ಷೇತ್ರದಲ್ಲಿ ಕರ್ನಾಟಕ ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿ ನಿಲ್ಲಲಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಇದರೊಂದಿಗೆ ಮತ್ತಷ್ಟು ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ತಯಾರಿಕಾ ಕ್ಷೇತ್ರದಲ್ಲಿ ಮತ್ತಷ್ಟು ಸಾಮರ್ಥ್ಯ ಹೆಚ್ಚಿಸಲಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸದ್ಯದಲ್ಲೇ ಟಾಟಾ–ಏರ್ ಬಸ್ ಹೆಲಿಕಾಪ್ಟರ್ ಅಸೆಂಬ್ಲಿ ಲೈನ್ ಘಟಕ ತಲೆ ಎತ್ತಲಿದೆ. ಆರಂಭಿಕವಾಗಿ 500 ಹೆಲಿಕಾಪ್ಟರ್ ತಯಾರಿಸಲು ಬೇಡಿಕೆ ಬಂದಿದೆ.</p>.<p>ಈ ವಿಚಾರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.</p>.<p>‘ಕರ್ನಾಟಕ ರಾಜ್ಯವು ಆಂಧ್ರ ಪ್ರದೇಶ, ಗುಜರಾತ್, ಉತ್ತರ ಪ್ರದೇಶ ಹಿಂದಿಕ್ಕಿ ಈ ಅವಕಾಶ ಗಿಟ್ಟಿಸಿಕೊಂಡಿದೆ. ಏರೋಸ್ಪೇಸ್ ತಯಾರಿಕಾ ಕ್ಷೇತ್ರದಲ್ಲಿ ಈ ಮೂಲಕ ರಾಜ್ಯದ ಪಾರಮ್ಯ ಮುಂದುವರಿದಿದೆ. ಏರೋಸ್ಪೇಸ್ ಹಾಗೂ ರಕ್ಷಣಾ ಕ್ಷೇತ್ರದಲ್ಲಿ ಶೇ 65ರಷ್ಟು ಕೊಡುಗೆಯೊಂದಿಗೆ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ. ವಿಶ್ವದಲ್ಲಿ ಇಂಥ ನಾಲ್ಕು ಅಸೆಂಬ್ಲಿ ಘಟಕಗಳು ಮಾತ್ರ ಇವೆ. ಅದರಲ್ಲಿ ಕರ್ನಾಟಕವೂ ಸ್ಥಾನ ಪಡೆದಿದೆ. ಈ ಕ್ಷೇತ್ರದಲ್ಲಿ ಕರ್ನಾಟಕ ಮುಂದಿನ ದಿನಗಳಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿ ನಿಲ್ಲಲಿದೆ’ ಎಂದು ಅವರು ಹೇಳಿದ್ದಾರೆ.</p>.<p>‘ಇದರೊಂದಿಗೆ ಮತ್ತಷ್ಟು ಉದ್ಯೋಗಾವಕಾಶ ಸೃಷ್ಟಿಯಾಗಲಿದೆ. ತಯಾರಿಕಾ ಕ್ಷೇತ್ರದಲ್ಲಿ ಮತ್ತಷ್ಟು ಸಾಮರ್ಥ್ಯ ಹೆಚ್ಚಿಸಲಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>