ರಾಜ್ಯದಲ್ಲಿ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಎಚ್ಪಿವಿ ಲಸಿಕೆ ಪಡೆದರೆ ಬಂಜೆತನ ಬರುತ್ತದೆ ಎಂಬ ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಹೀಗಾಗಿ, ಈ ಲಸಿಕೆ ಪಡೆಯಲು ಕೆಲವರು ಭಯಪಡುತ್ತಿದ್ದಾರೆ. ಈ ಸಂಬಂಧ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಯಾರೂ ಅಪಪ್ರಚಾರಕ್ಕೆ ಕಿವಿಗೊಡಬಾರದು. ಎಚ್ಪಿವಿ ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆ ಇಲ್ಲ. ಬದಲಾಗಿ ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುತ್ತದೆ, ರಕ್ಷಣೆ ಒದಗಿಸುತ್ತದೆ