<p><strong>ಕೋಲಾರ:</strong> ನಗರದ ಕ್ಲಾಕ್ ಟವರ್ ಸಮೀಪದ ಶಾಹೀ ಮಸೀದಿ ಬಳಿ ಜಿಲ್ಲೆಯಲ್ಲಿ ರಂಜಾನ್ ಪ್ರಯುಕ್ತ ಮೊದಲ ಬಾರಿ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷದ ಮುಖಂಡರನ್ನು ಒಳಗೊಂಡು ಆಯೋಜಿಸಿದ್ದ ಇಫ್ತಿಯಾರ್ ಕೂಟ ಸೌಹಾರ್ದಕ್ಕೆ ಸಾಕ್ಷಿಯಾಯಿತು.</p>.<p>ಭಾನುವಾರ ಸಂಜೆ ಸಮಿತಿಯಿಂದ ಶಾಹೀ ಮಸೀದಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮುಖಂಡರು ಭಾಗಿಯಾದ್ದರು. ಸಮುದಾಯ ಕೇವಲ ಒಂದು ಪಕ್ಷಕ್ಕೆ ಸೀಮಿತ ಎಂಬ ಭಾವನೆ ಹೋಗಲಾಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಕರು ಎಲ್ಲಾ ಪಕ್ಷದವರನ್ನು ಆಹ್ವಾನಿಸಿದ್ದರು.</p>.<p>ಜೆಡಿಎಸ್ ಪಕ್ಷದಿಂದ ಸಂಸದ ಎಂ.ಮಲ್ಲೇಶ್ ಬಾಬು, ಸಿಎಂಆರ್ ಶ್ರೀನಾಥ್, ತೂಪಲ್ಲಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಕಾಂಗ್ರೆಸ್ ಪಕ್ಷದಿಂದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಹಾಗೂ ವಿವಿಧ ಸಂಘಟನೆ ಮುಖಂಡರು ಭಾಗಿಯಾಗಿದ್ದರು.</p>.<p>ಇದಕ್ಕೂ ಮೊದಲು ಮುಸ್ಲಿಂ ಸಮುದಾಯದ ಮೌಲ್ವಿಗಳಿಂದ ಹಾಗೂ ಮೆಥೋಡಿಸ್ಟ್ ದೇವಾಲಯದ ಪಾದ್ರಿಯಿಂದ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು. </p>.<p>ಸಿಎಂಆರ್ ಶ್ರೀನಾಥ್ ಮಾತನಾಡಿ, ‘ಕೋಲಾರ ವಿಶೇಷ ನಗರ, ಇಲ್ಲಿ ಎಲ್ಲಾ ಸಮುದಾಯದವರು ಒಟ್ಟಿಗೆ ಇದ್ದೇವೆ, ಇರುತ್ತೇವೆ, ಎಲ್ಲಾ ಸಮುದಾಯಗಳಲ್ಲಿ ಒಂದಷ್ಟು ಯುವಕರು ದಾರಿ ತಪ್ಪುತ್ತಿರುತ್ತಾರೆ. ಅಂತಹವರನ್ನು ಹಿರಿಯರು ಸರಿದಾರಿಗೆ ತರುವ ಕೆಲಸ ಆಗಲಿ’ ಎಂದು ಆಶಿಸಿದರು.</p>.<p>ಓಂಶಕ್ತಿ ಚಲಪತಿ ಮಾತನಾಡಿ, ‘ಎಲ್ಲರೂ ಸೌಹಾರ್ದದಿಂದ ಒಗ್ಗಟ್ಟಾಗಿರಬೇಕೆಂಬ ಉದ್ದೇಶದಿಂದ ಆಯೋಜಿಸಿರುವ ಕಾರ್ಯಕ್ರಮ ನಿಜಕ್ಕೂ ಮೆಚ್ಚುವಂತದ್ದು. ನಾನು ಇದೇ ಮೊದಲ ಬಾರಿ ಇಫ್ತಿಯಾರ್ ಕೂಟದಲ್ಲಿ ಬಾಗಿ ಆಗಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ನಗರದ ಕ್ಲಾಕ್ ಟವರ್ ಸಮೀಪದ ಶಾಹೀ ಮಸೀದಿ ಬಳಿ ಜಿಲ್ಲೆಯಲ್ಲಿ ರಂಜಾನ್ ಪ್ರಯುಕ್ತ ಮೊದಲ ಬಾರಿ ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷದ ಮುಖಂಡರನ್ನು ಒಳಗೊಂಡು ಆಯೋಜಿಸಿದ್ದ ಇಫ್ತಿಯಾರ್ ಕೂಟ ಸೌಹಾರ್ದಕ್ಕೆ ಸಾಕ್ಷಿಯಾಯಿತು.</p>.<p>ಭಾನುವಾರ ಸಂಜೆ ಸಮಿತಿಯಿಂದ ಶಾಹೀ ಮಸೀದಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮುಖಂಡರು ಭಾಗಿಯಾದ್ದರು. ಸಮುದಾಯ ಕೇವಲ ಒಂದು ಪಕ್ಷಕ್ಕೆ ಸೀಮಿತ ಎಂಬ ಭಾವನೆ ಹೋಗಲಾಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಕರು ಎಲ್ಲಾ ಪಕ್ಷದವರನ್ನು ಆಹ್ವಾನಿಸಿದ್ದರು.</p>.<p>ಜೆಡಿಎಸ್ ಪಕ್ಷದಿಂದ ಸಂಸದ ಎಂ.ಮಲ್ಲೇಶ್ ಬಾಬು, ಸಿಎಂಆರ್ ಶ್ರೀನಾಥ್, ತೂಪಲ್ಲಿ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ, ಕಾಂಗ್ರೆಸ್ ಪಕ್ಷದಿಂದ ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಹಾಗೂ ವಿವಿಧ ಸಂಘಟನೆ ಮುಖಂಡರು ಭಾಗಿಯಾಗಿದ್ದರು.</p>.<p>ಇದಕ್ಕೂ ಮೊದಲು ಮುಸ್ಲಿಂ ಸಮುದಾಯದ ಮೌಲ್ವಿಗಳಿಂದ ಹಾಗೂ ಮೆಥೋಡಿಸ್ಟ್ ದೇವಾಲಯದ ಪಾದ್ರಿಯಿಂದ ವಿಶೇಷ ಪ್ರಾರ್ಥನೆ ನೆರವೇರಿಸಲಾಯಿತು. ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು. </p>.<p>ಸಿಎಂಆರ್ ಶ್ರೀನಾಥ್ ಮಾತನಾಡಿ, ‘ಕೋಲಾರ ವಿಶೇಷ ನಗರ, ಇಲ್ಲಿ ಎಲ್ಲಾ ಸಮುದಾಯದವರು ಒಟ್ಟಿಗೆ ಇದ್ದೇವೆ, ಇರುತ್ತೇವೆ, ಎಲ್ಲಾ ಸಮುದಾಯಗಳಲ್ಲಿ ಒಂದಷ್ಟು ಯುವಕರು ದಾರಿ ತಪ್ಪುತ್ತಿರುತ್ತಾರೆ. ಅಂತಹವರನ್ನು ಹಿರಿಯರು ಸರಿದಾರಿಗೆ ತರುವ ಕೆಲಸ ಆಗಲಿ’ ಎಂದು ಆಶಿಸಿದರು.</p>.<p>ಓಂಶಕ್ತಿ ಚಲಪತಿ ಮಾತನಾಡಿ, ‘ಎಲ್ಲರೂ ಸೌಹಾರ್ದದಿಂದ ಒಗ್ಗಟ್ಟಾಗಿರಬೇಕೆಂಬ ಉದ್ದೇಶದಿಂದ ಆಯೋಜಿಸಿರುವ ಕಾರ್ಯಕ್ರಮ ನಿಜಕ್ಕೂ ಮೆಚ್ಚುವಂತದ್ದು. ನಾನು ಇದೇ ಮೊದಲ ಬಾರಿ ಇಫ್ತಿಯಾರ್ ಕೂಟದಲ್ಲಿ ಬಾಗಿ ಆಗಿದ್ದೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>