<p>ವೇಮಗಲ್: ಹೋಬಳಿಯ ಮದ್ದೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕದರೀಪುರ ಗ್ರಾಮದಲ್ಲಿ ಗುರುವಾರ ಯೋಗ ನರಸಿಂಹಸ್ವಾಮಿ ಜಯಂತಿ ನಡೆಯಿತು.</p>.<p>ಜಯಂತಿ ಅಂಗವಾಗಿ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. 10.30ಕ್ಕೆ ಲಕ್ಷ್ಮಿ ನರಸಿಂಹಸ್ವಾಮಿಯ ತಿರುಕಲ್ಯಾಣೋತ್ಸವ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ ನೆರವೇರಿತು.</p>.<p>ಜಯಂತಿಯ ಅಂಗವಾಗಿ ದಿ.ಕೆ.ಆರ್.ಲಕ್ಷ್ಮಿ ನರಸಿಂಹಚಾರ್ ಅವರ ಸ್ಮರಣಾರ್ಥ ಕದರೀಪುರ, ದೇವರಹಳ್ಳಿ ಮತ್ತು ಇರಗಸಂದ್ರ ಗ್ರಾಮಗಳ ಮಹಿಳೆಯರಿಗೆ ದೇವಾಲಯದ ಆವರಣದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.</p>.<p>ಸ್ಪರ್ಧೆಯಲ್ಲಿ ಆಕರ್ಷಕವಾಗಿ ರಂಗೋಲಿ ಬಿಡಿಸಿದ ಪಲ್ಲವಿ ಜಿ. ಮತ್ತು ಸಾರಿಕ ಜಿ. ಪ್ರಥಮ ಸ್ಥಾನ ಪಡೆದು ₹3 ನಗದು ಬಹುಮಾನ ಪಡೆದರು. ದ್ವಿತೀಯ ಸ್ಥಾನ ಪಡೆದ ಚಂದ್ರಿಕಾ ಮತ್ತು ಸುನಿತಾ ₹ 2 ಬಹುಮಾನ ತನ್ನದಾಗಿಸಿಕೊಂಡರು. ತೃತೀಯ ಸ್ಥಾನ ಗಳಿಸಿದ ಸ್ವಾತಿ ಮತ್ತು ಐಶ್ವರ್ಯ ಅವರಿಗೆ ₹1 ನಗದು ಬಹುಮಾನ ನೀಡಲಾಯಿತು. ನಾಲ್ಕನೇ ಸ್ಥಾನ ಪಡೆದ ಅನುಸೂಯ ಮತ್ತು ಕವಿತಾ ಅವರಿಗೆ ₹500 ನಗದು ಬಹುಮಾನ ನೀಡಿ ಗೌರವಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರಭಾವತಿ ಅವರಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-18-1645359168</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವೇಮಗಲ್: ಹೋಬಳಿಯ ಮದ್ದೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕದರೀಪುರ ಗ್ರಾಮದಲ್ಲಿ ಗುರುವಾರ ಯೋಗ ನರಸಿಂಹಸ್ವಾಮಿ ಜಯಂತಿ ನಡೆಯಿತು.</p>.<p>ಜಯಂತಿ ಅಂಗವಾಗಿ ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. 10.30ಕ್ಕೆ ಲಕ್ಷ್ಮಿ ನರಸಿಂಹಸ್ವಾಮಿಯ ತಿರುಕಲ್ಯಾಣೋತ್ಸವ ನಡೆಯಿತು. ಮಧ್ಯಾಹ್ನ ಮಹಾಮಂಗಳಾರತಿ ನೆರವೇರಿತು.</p>.<p>ಜಯಂತಿಯ ಅಂಗವಾಗಿ ದಿ.ಕೆ.ಆರ್.ಲಕ್ಷ್ಮಿ ನರಸಿಂಹಚಾರ್ ಅವರ ಸ್ಮರಣಾರ್ಥ ಕದರೀಪುರ, ದೇವರಹಳ್ಳಿ ಮತ್ತು ಇರಗಸಂದ್ರ ಗ್ರಾಮಗಳ ಮಹಿಳೆಯರಿಗೆ ದೇವಾಲಯದ ಆವರಣದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.</p>.<p>ಸ್ಪರ್ಧೆಯಲ್ಲಿ ಆಕರ್ಷಕವಾಗಿ ರಂಗೋಲಿ ಬಿಡಿಸಿದ ಪಲ್ಲವಿ ಜಿ. ಮತ್ತು ಸಾರಿಕ ಜಿ. ಪ್ರಥಮ ಸ್ಥಾನ ಪಡೆದು ₹3 ನಗದು ಬಹುಮಾನ ಪಡೆದರು. ದ್ವಿತೀಯ ಸ್ಥಾನ ಪಡೆದ ಚಂದ್ರಿಕಾ ಮತ್ತು ಸುನಿತಾ ₹ 2 ಬಹುಮಾನ ತನ್ನದಾಗಿಸಿಕೊಂಡರು. ತೃತೀಯ ಸ್ಥಾನ ಗಳಿಸಿದ ಸ್ವಾತಿ ಮತ್ತು ಐಶ್ವರ್ಯ ಅವರಿಗೆ ₹1 ನಗದು ಬಹುಮಾನ ನೀಡಲಾಯಿತು. ನಾಲ್ಕನೇ ಸ್ಥಾನ ಪಡೆದ ಅನುಸೂಯ ಮತ್ತು ಕವಿತಾ ಅವರಿಗೆ ₹500 ನಗದು ಬಹುಮಾನ ನೀಡಿ ಗೌರವಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಪ್ರಭಾವತಿ ಅವರಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-18-1645359168</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>