<p><strong>ಕೋಲಾರ:</strong> ಕನ್ನಡ ಭಾಷೆ ಕುರಿತು ಚಿತ್ರ ನಟ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಟನ ಭಾವಚಿತ್ರವನ್ನು ತುಳಿದು ಆಕ್ರೋಶ ವ್ಯಕ್ತಪಡಿಸಿ, ಬೆಂಕಿ ಹಚ್ಚಲು ಮುಂದಾಗುತ್ತಿದ್ದಂತೆಯೇ ಪೊಲೀಸರು ತಡೆದರು.</p>.<p>ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ಮಾತನಾಡಿ, ‘ನಟ ಕಮಲ್ ಹಾಸನ್ ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು ಎಂದು ತಪ್ಪು ಹೇಳಿಕೆ ನೀಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ಮಾಡಿರುವುದು ದುರುದ್ದೇಶಪೂರಿತ’ ಎಂದು ದೂರಿದರು.</p>.<p>‘ವೇದಿಕೆಗಳಲ್ಲಿ ಮಾತನಾಡುವಾಗ ಜವಾಬ್ದಾರಿಯುತವಾಗಿ ಹೇಳಿಕೆ ನೀಡಬೇಕು. ಭಾಷೆಯನ್ನು ಗುರಿಯಾಗಿಸಿಕೊಂಡು ಮಾತನಾಡಿದರೆ ಸುಮ್ಮನಿರಲು ಅಸಾಧ್ಯ’ ಎಂದು ಎಚ್ಚರಿಸಿದರು.</p>.<p>‘ಕಮಲ್ ಹಾಸನ್ ನಟಿಸಿರುವ ಹೊಸ ಚಿತ್ರ ಥಗ್ಲೈಫ್ ಬಿಡುಗಡೆಗೆ ಸಿದ್ಧವಾಗಿದ್ದು, ರಾಜ್ಯದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರವನ್ನು ಕರವೇ ಕೈಗೊಂಡಿದೆ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕರ್ನಾಟಕದಲ್ಲಿ ಈ ಚಿತ್ರದ ಬಿಡುಗಡೆಗೆ ಯಾವುದೇ ರೀತಿ ಸಹಕಾರ ನೀಡಬಾರದು’ ಎಂದು ಕೋರಿದರು.</p>.<p>ಪ್ರತಿಭಟನೆಯಲ್ಲಿ ವೇದಿಕೆಯ ಪದಾಧಿಕಾರಿಗಾಳದ ವಿ.ಮುನಿರಾಜು, ತಾಲ್ಲೂಕು ಅಧ್ಯಕ್ಷರಾದ ಮಾಲೂರು ಎಂ.ಶ್ರೀನಿವಾಸ, ಕೋಲಾರ ಶಶಿಕುಮಾರ್, ಬಂಗಾರಪೇಟೆ ರಾಮಪ್ರಸಾದ್, ಮಹಬೂಬ್, ಮಂಜುನಾಥ, ಶೆಂಕರ್ ರೆಡ್ಡಿ, ಡಿ.ವಿ.ಮಂಜುನಾಥ, ಹುಸೇನ್, ಕೋದಂಡರಾಮಯ್ಯ, ಗಣೇಶ್, ಲೋಕೇಶ್, ಕೆ.ನವೀನ್, ಸಂತೋಷ್, ರಾಮಕೃಷ್ಣಪ್ಪ, ನವೀನ್, ರಂಜಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕನ್ನಡ ಭಾಷೆ ಕುರಿತು ಚಿತ್ರ ನಟ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ನಟನ ಭಾವಚಿತ್ರವನ್ನು ತುಳಿದು ಆಕ್ರೋಶ ವ್ಯಕ್ತಪಡಿಸಿ, ಬೆಂಕಿ ಹಚ್ಚಲು ಮುಂದಾಗುತ್ತಿದ್ದಂತೆಯೇ ಪೊಲೀಸರು ತಡೆದರು.</p>.<p>ಕರವೇ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ.ಕೆ.ರಾಘವೇಂದ್ರ ಮಾತನಾಡಿ, ‘ನಟ ಕಮಲ್ ಹಾಸನ್ ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು ಎಂದು ತಪ್ಪು ಹೇಳಿಕೆ ನೀಡುವ ಮೂಲಕ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ ಮಾಡಿರುವುದು ದುರುದ್ದೇಶಪೂರಿತ’ ಎಂದು ದೂರಿದರು.</p>.<p>‘ವೇದಿಕೆಗಳಲ್ಲಿ ಮಾತನಾಡುವಾಗ ಜವಾಬ್ದಾರಿಯುತವಾಗಿ ಹೇಳಿಕೆ ನೀಡಬೇಕು. ಭಾಷೆಯನ್ನು ಗುರಿಯಾಗಿಸಿಕೊಂಡು ಮಾತನಾಡಿದರೆ ಸುಮ್ಮನಿರಲು ಅಸಾಧ್ಯ’ ಎಂದು ಎಚ್ಚರಿಸಿದರು.</p>.<p>‘ಕಮಲ್ ಹಾಸನ್ ನಟಿಸಿರುವ ಹೊಸ ಚಿತ್ರ ಥಗ್ಲೈಫ್ ಬಿಡುಗಡೆಗೆ ಸಿದ್ಧವಾಗಿದ್ದು, ರಾಜ್ಯದಲ್ಲಿ ಬಿಡುಗಡೆಯಾಗದಂತೆ ತಡೆಯುವ ನಿರ್ಧಾರವನ್ನು ಕರವೇ ಕೈಗೊಂಡಿದೆ. ಈ ಚಿತ್ರದ ವಿತರಕರು ತಮ್ಮ ಹೂಡಿಕೆಯನ್ನು ರಕ್ಷಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕರ್ನಾಟಕದಲ್ಲಿ ಈ ಚಿತ್ರದ ಬಿಡುಗಡೆಗೆ ಯಾವುದೇ ರೀತಿ ಸಹಕಾರ ನೀಡಬಾರದು’ ಎಂದು ಕೋರಿದರು.</p>.<p>ಪ್ರತಿಭಟನೆಯಲ್ಲಿ ವೇದಿಕೆಯ ಪದಾಧಿಕಾರಿಗಾಳದ ವಿ.ಮುನಿರಾಜು, ತಾಲ್ಲೂಕು ಅಧ್ಯಕ್ಷರಾದ ಮಾಲೂರು ಎಂ.ಶ್ರೀನಿವಾಸ, ಕೋಲಾರ ಶಶಿಕುಮಾರ್, ಬಂಗಾರಪೇಟೆ ರಾಮಪ್ರಸಾದ್, ಮಹಬೂಬ್, ಮಂಜುನಾಥ, ಶೆಂಕರ್ ರೆಡ್ಡಿ, ಡಿ.ವಿ.ಮಂಜುನಾಥ, ಹುಸೇನ್, ಕೋದಂಡರಾಮಯ್ಯ, ಗಣೇಶ್, ಲೋಕೇಶ್, ಕೆ.ನವೀನ್, ಸಂತೋಷ್, ರಾಮಕೃಷ್ಣಪ್ಪ, ನವೀನ್, ರಂಜಿತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>