<p>ಕೋಲಾರ: ನಗರದ ಹೊರವಲಯದ ಇತಿಹಾಸ ಪ್ರಸಿದ್ಧ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.</p>.<p>ಶುಕ್ರವಾರ ಶ್ರೀರಾಮನವಮಿ ಪ್ರಯುಕ್ತ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ದೇವಾಲಯದ ಆವರಣದಲ್ಲಿ ಈಗಾಗಲೇ ₹ 5 ಲಕ್ಷ ವೆಚ್ಚದಲ್ಲಿ ಹೈಮಾಸ್ಟ್ ಲೈಟ್ ಅಳವಡಿಸಲಾಗಿದೆ, ₹5ಲಕ್ಷ ಅನುದಾನದಲ್ಲಿ ಸಾದರಹಳ್ಳಿ ಗ್ರಾನೆಟ್ ಅಳವಡಿಸುವ ಕೆಲಸ ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಇನ್ನೂ ₹25 ಲಕ್ಷ ಅನುದಾನ ಮಂಜೂರು ಮಾಡಿ ದೇವಾಲಯದ ಕಾಂಪೌಂಡ್, ಕಲ್ಯಾಣಿ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.</p>.<p>ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕೊಂಡರಾಜನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ವಿಜಯನಗರ ಮಂಜುನಾಥ್, ನಿರ್ಮಿತಿ ಕೇಂದ್ರದ ನಿರ್ದೇಶಕ ಅಶ್ವಿನ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಾಬರ್, ನದೀಂ, ಹೂಹಳ್ಳಿ ಪ್ರಮೋದ್ ಅರ್ಚಕರಾದ ಮಧು ಕುಮಾರ್ ಇದ್ದರು.</p>.<p>ತಾಲ್ಲೂಕಿನ ಚೋಳಘಟ್ಟ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಪ್ರತಿಷ್ಠಾಪನೆಯಲ್ಲಿ ಶಾಸಕರು ಭಾಗವಹಿಸಿದ್ದರು.</p>.<p>ಈ ವೇಳೆ ಗ್ರಾಮಸ್ಥರು ರಸ್ತೆ ಅಭಿವೃದ್ಧಿಗೆ ಮನವಿ ಮಾಡಿದರು. ಅದಕ್ಕೆ ಉತ್ತರಿಸಿದ ಕೊತ್ತೂರು, ‘ಛತ್ರಕೋಡಿಹಳ್ಳಿಯಿಂದ ಬೆಗ್ಲಿಬೆಣಜೇನಹಳ್ಳಿ ಮಾರ್ಗವಾಗಿ ಚೋಳಘಟ್ಟದವರಗಿನ ರಸ್ತೆಗೆ ಈಗಾಗಲೇ ₹4.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಇದ್ದು, ಆದಷ್ಟು ಬೇಗ ಕಾಮಗಾರಿ ಪ್ರಾರಂಬಿಸಲಾಗುತ್ತದೆ’ ಎಂದು ಭರವಸೆ ನೀಡಿದರು</p>.<p>ದಕ್ಷಿಣ ಕಸಬಾ ಸೊಸೈಟಿ ಮಾಜಿ ಅಧ್ಯಕ್ಷ ಚೋಳಘಟ್ಟ ಶ್ರೀನಿವಾಸ್, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯ ಭರತ್ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-18-974836542</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ನಗರದ ಹೊರವಲಯದ ಇತಿಹಾಸ ಪ್ರಸಿದ್ಧ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿಗೆ ₹ 25 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.</p>.<p>ಶುಕ್ರವಾರ ಶ್ರೀರಾಮನವಮಿ ಪ್ರಯುಕ್ತ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.</p>.<p>ದೇವಾಲಯದ ಆವರಣದಲ್ಲಿ ಈಗಾಗಲೇ ₹ 5 ಲಕ್ಷ ವೆಚ್ಚದಲ್ಲಿ ಹೈಮಾಸ್ಟ್ ಲೈಟ್ ಅಳವಡಿಸಲಾಗಿದೆ, ₹5ಲಕ್ಷ ಅನುದಾನದಲ್ಲಿ ಸಾದರಹಳ್ಳಿ ಗ್ರಾನೆಟ್ ಅಳವಡಿಸುವ ಕೆಲಸ ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಇನ್ನೂ ₹25 ಲಕ್ಷ ಅನುದಾನ ಮಂಜೂರು ಮಾಡಿ ದೇವಾಲಯದ ಕಾಂಪೌಂಡ್, ಕಲ್ಯಾಣಿ ಸೇರಿದಂತೆ ಸಮಗ್ರವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.</p>.<p>ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕೊಂಡರಾಜನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ವಿಜಯನಗರ ಮಂಜುನಾಥ್, ನಿರ್ಮಿತಿ ಕೇಂದ್ರದ ನಿರ್ದೇಶಕ ಅಶ್ವಿನ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಾಬರ್, ನದೀಂ, ಹೂಹಳ್ಳಿ ಪ್ರಮೋದ್ ಅರ್ಚಕರಾದ ಮಧು ಕುಮಾರ್ ಇದ್ದರು.</p>.<p>ತಾಲ್ಲೂಕಿನ ಚೋಳಘಟ್ಟ ಗ್ರಾಮದಲ್ಲಿ ಆಂಜನೇಯ ಸ್ವಾಮಿ ದೇವಾಲಯದ ಪ್ರತಿಷ್ಠಾಪನೆಯಲ್ಲಿ ಶಾಸಕರು ಭಾಗವಹಿಸಿದ್ದರು.</p>.<p>ಈ ವೇಳೆ ಗ್ರಾಮಸ್ಥರು ರಸ್ತೆ ಅಭಿವೃದ್ಧಿಗೆ ಮನವಿ ಮಾಡಿದರು. ಅದಕ್ಕೆ ಉತ್ತರಿಸಿದ ಕೊತ್ತೂರು, ‘ಛತ್ರಕೋಡಿಹಳ್ಳಿಯಿಂದ ಬೆಗ್ಲಿಬೆಣಜೇನಹಳ್ಳಿ ಮಾರ್ಗವಾಗಿ ಚೋಳಘಟ್ಟದವರಗಿನ ರಸ್ತೆಗೆ ಈಗಾಗಲೇ ₹4.50 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಟೆಂಡರ್ ಪ್ರಕ್ರಿಯೆಯಲ್ಲಿ ಇದ್ದು, ಆದಷ್ಟು ಬೇಗ ಕಾಮಗಾರಿ ಪ್ರಾರಂಬಿಸಲಾಗುತ್ತದೆ’ ಎಂದು ಭರವಸೆ ನೀಡಿದರು</p>.<p>ದಕ್ಷಿಣ ಕಸಬಾ ಸೊಸೈಟಿ ಮಾಜಿ ಅಧ್ಯಕ್ಷ ಚೋಳಘಟ್ಟ ಶ್ರೀನಿವಾಸ್, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯ ಭರತ್ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-18-974836542</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>