<p><strong>ಬೇತಮಂಗಲ:</strong> ಕೃಷ್ಣಾವರಂನಿಂದ ಕೆಜಿಎಫ್ಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಹಾಗೂ ಸೇತುವೆಯನ್ನು ಬುಧವಾರ ಎಇಇ ರಾಜಶೇಖರ್ ಖುದ್ದಾಗಿ ಪರಿಶೀಲನೆ ನಡೆಸಿದರು.</p>.<p>ಕೃಷ್ಣಾವರಂನಿಂದ ಸ್ಕೂಲ್ ಆಫ್ ಮೈನ್ಸ್ವರೆಗಿನ ಮಾರ್ಗದಲ್ಲಿರುವ ತಿರುವು ಅತ್ಯಂತ ಅಪಾಯಕಾರಿಯಾಗಿದ್ದು, ಇಲ್ಲಿ ಈ ಹಿಂದೆ ಸಂಭವಿಸಿದ ಅಪಘಾತಗಳಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಾವಿನ ಸರಣಿಗೆ ಬ್ರೇಕ್ ಹಾಕಲು ಲೋಕೋಪಯೋಗಿ ಇಲಾಖೆಯು ಈ ರಸ್ತೆಯನ್ನು ಆಧುನೀಕರಿಸಲು ಮುಂದಾಗಿದ್ದು, ಇತ್ತೀಚೆಗೆ ಶಾಸಕಿ ಕಾಮಗಾರಿಗೆ ಚಾಲನೆ ನೀಡಿದ್ದರು. ಇದೀಗ ಕಾಮಗಾರಿಯು ಭರದಿಂದ ಸಾಗುತ್ತಿದೆ ಎಂದು ತಿಳಿಸಿದರು.</p>.<p>ಸಂಚಾರ ಸುಗಮಗೊಳಿಸಲು ರಸ್ತೆ ವಿಸ್ತರಣೆ ಹಾಗೂ ಮಳೆಗಾಲದಲ್ಲಿ ನೀರು ಹರಿಯಲು ಅನುಕೂಲವಾಗುವಂತೆ ವೈಜ್ಞಾನಿಕವಾಗಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇನ್ನು ಎರಡು-ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-18-959923746</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ:</strong> ಕೃಷ್ಣಾವರಂನಿಂದ ಕೆಜಿಎಫ್ಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿ ಹಾಗೂ ಸೇತುವೆಯನ್ನು ಬುಧವಾರ ಎಇಇ ರಾಜಶೇಖರ್ ಖುದ್ದಾಗಿ ಪರಿಶೀಲನೆ ನಡೆಸಿದರು.</p>.<p>ಕೃಷ್ಣಾವರಂನಿಂದ ಸ್ಕೂಲ್ ಆಫ್ ಮೈನ್ಸ್ವರೆಗಿನ ಮಾರ್ಗದಲ್ಲಿರುವ ತಿರುವು ಅತ್ಯಂತ ಅಪಾಯಕಾರಿಯಾಗಿದ್ದು, ಇಲ್ಲಿ ಈ ಹಿಂದೆ ಸಂಭವಿಸಿದ ಅಪಘಾತಗಳಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಾವಿನ ಸರಣಿಗೆ ಬ್ರೇಕ್ ಹಾಕಲು ಲೋಕೋಪಯೋಗಿ ಇಲಾಖೆಯು ಈ ರಸ್ತೆಯನ್ನು ಆಧುನೀಕರಿಸಲು ಮುಂದಾಗಿದ್ದು, ಇತ್ತೀಚೆಗೆ ಶಾಸಕಿ ಕಾಮಗಾರಿಗೆ ಚಾಲನೆ ನೀಡಿದ್ದರು. ಇದೀಗ ಕಾಮಗಾರಿಯು ಭರದಿಂದ ಸಾಗುತ್ತಿದೆ ಎಂದು ತಿಳಿಸಿದರು.</p>.<p>ಸಂಚಾರ ಸುಗಮಗೊಳಿಸಲು ರಸ್ತೆ ವಿಸ್ತರಣೆ ಹಾಗೂ ಮಳೆಗಾಲದಲ್ಲಿ ನೀರು ಹರಿಯಲು ಅನುಕೂಲವಾಗುವಂತೆ ವೈಜ್ಞಾನಿಕವಾಗಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇನ್ನು ಎರಡು-ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-18-959923746</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>