<p><strong>ಕೋಲಾರ</strong>: ಪರಿಸರ ನಿಯಮ ಉಲ್ಲಂಘನೆ, ಲೋಪವೆಸಗಿರುವ ಸಂಬಂಧ ಜಿಲ್ಲೆಯ 8 ಕ್ರಷರ್ಗಳನ್ನು ಮುಚ್ಚಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಸೂಚನೆ ನೀಡಿದೆ ಎಂದು ದೂರುದಾರರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಿ.ಮುನೇಶ್ ಚಂಜಿಮಲೆ ಹಾಗೂ ನವೀನ್ ಕುಮಾರ್ ತಿಳಿಸಿದ್ದಾರೆ.</p>.<p>ಗಂಭೀರ ಪರಿಸರ ನಿಯಮ ಉಲ್ಲಂಘನೆ ಮಾಡುತ್ತಿರುವ ಕೆಲ ಕ್ರಷರ್ಗಳಿಗೆ ಮೂರು ತಿಂಗಳ ಅವಧಿ ನೀಡಲಾಗಿದೆ ಎಂದಿದ್ದಾರೆ.</p>.<p>ಮಾಲೂರು ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 27 ಕ್ರಷರ್ ಘಟಕಗಳನ್ನು ಜಿಲ್ಲಾ ಪರಿಸರ ಅಧಿಕಾರಿಗಳ ವರದಿಯಲ್ಲಿ ಗಂಭೀರ ಪರಿಸರ ನಿಯಮ ಉಲ್ಲಂಘನೆ ಮಾಡಿರುವುದಾಗಿ ಉಲ್ಲೇಖಿಸಲಾಗಿತ್ತು. ಈ ವರದಿ ಆಧಾರದ ಮೇಲೆ ಹಿರಿಯ ಪರಿಸರ ಅಧಿಕಾರಿಗಳು (ಬೆಂಗಳೂರು ಪೂರ್ವ ವಲಯ) ವಿಚಾರಣೆ ನಡೆಸಿ ಕ್ರಮಕ್ಕೆ ಮಂಡಳಿಗೆ ಶಿಫಾರಸ್ಸು ಮಾಡಿದ್ದರು ಎಂದು ಹೇಳಿದ್ದಾರೆ.</p>.<p>27 ಘಟಕಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಿದ್ದರೂ ಮಂಡಳಿಯು ಕೇವಲ 8 ಕ್ರಷರ್ಗಳನ್ನು ಮಾತ್ರ ಮುಚ್ಚಲು ಜಿಲ್ಲಾ ಪರಿಸರ ಅಧಿಕಾರಿಗೆ ಸೂಚನೆ ನೀಡಿರುವುದು ಅನುಮಾನ ಮಾಡಿಸಿದೆ. ಕೆಲವು ಘಟಕಗಳ ವಿರುದ್ಧ ವಿಚಾರಣೆ ನಡೆದು ಆರು ತಿಂಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಎಲ್ಲಾ ಘಟಕಗಳ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಪರಿಸರ ನಿಯಮ ಉಲ್ಲಂಘನೆ, ಲೋಪವೆಸಗಿರುವ ಸಂಬಂಧ ಜಿಲ್ಲೆಯ 8 ಕ್ರಷರ್ಗಳನ್ನು ಮುಚ್ಚಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ಪಿಸಿಬಿ) ಸೂಚನೆ ನೀಡಿದೆ ಎಂದು ದೂರುದಾರರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಿ.ಮುನೇಶ್ ಚಂಜಿಮಲೆ ಹಾಗೂ ನವೀನ್ ಕುಮಾರ್ ತಿಳಿಸಿದ್ದಾರೆ.</p>.<p>ಗಂಭೀರ ಪರಿಸರ ನಿಯಮ ಉಲ್ಲಂಘನೆ ಮಾಡುತ್ತಿರುವ ಕೆಲ ಕ್ರಷರ್ಗಳಿಗೆ ಮೂರು ತಿಂಗಳ ಅವಧಿ ನೀಡಲಾಗಿದೆ ಎಂದಿದ್ದಾರೆ.</p>.<p>ಮಾಲೂರು ಸೇರಿದಂತೆ ಜಿಲ್ಲೆಯಾದ್ಯಂತ ಒಟ್ಟು 27 ಕ್ರಷರ್ ಘಟಕಗಳನ್ನು ಜಿಲ್ಲಾ ಪರಿಸರ ಅಧಿಕಾರಿಗಳ ವರದಿಯಲ್ಲಿ ಗಂಭೀರ ಪರಿಸರ ನಿಯಮ ಉಲ್ಲಂಘನೆ ಮಾಡಿರುವುದಾಗಿ ಉಲ್ಲೇಖಿಸಲಾಗಿತ್ತು. ಈ ವರದಿ ಆಧಾರದ ಮೇಲೆ ಹಿರಿಯ ಪರಿಸರ ಅಧಿಕಾರಿಗಳು (ಬೆಂಗಳೂರು ಪೂರ್ವ ವಲಯ) ವಿಚಾರಣೆ ನಡೆಸಿ ಕ್ರಮಕ್ಕೆ ಮಂಡಳಿಗೆ ಶಿಫಾರಸ್ಸು ಮಾಡಿದ್ದರು ಎಂದು ಹೇಳಿದ್ದಾರೆ.</p>.<p>27 ಘಟಕಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಿದ್ದರೂ ಮಂಡಳಿಯು ಕೇವಲ 8 ಕ್ರಷರ್ಗಳನ್ನು ಮಾತ್ರ ಮುಚ್ಚಲು ಜಿಲ್ಲಾ ಪರಿಸರ ಅಧಿಕಾರಿಗೆ ಸೂಚನೆ ನೀಡಿರುವುದು ಅನುಮಾನ ಮಾಡಿಸಿದೆ. ಕೆಲವು ಘಟಕಗಳ ವಿರುದ್ಧ ವಿಚಾರಣೆ ನಡೆದು ಆರು ತಿಂಗಳಾಗಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಎಲ್ಲಾ ಘಟಕಗಳ ವಿರುದ್ಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>