<p>ಮಾಲೂರು: ನಗರದ ಮಾರುತಿ ಬಡಾವಣೆಯಲ್ಲಿ ಶುಕ್ರವಾರ ಸಿಐಯುಟಿ ವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.</p>.<p>ಈ ವೇಳೆ ಸಿಐಯುಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ ಮಾತನಾಡಿ, ಕಾರ್ಮಿಕರ ಪರಿಶ್ರಮದಿಂದ ಜಗತ್ತು ಬೆಳೆದು ನಿಂತಿದೆ. ಕಾರ್ಮಿಕರಿಲ್ಲದೆ ಸಮಾಜದ ಚಕ್ರ ತಿರುಗದು ಎಂದು ತಿಳಿಸಿದರು.</p>.<p>ಪ್ರಾರಂಭದಲ್ಲಿ ಕಾರ್ಮಿಕರು ದಿನಕ್ಕೆ 10 ರಿಂದ 14 ಗಂಟೆ ಕೆಲಸ ಮಾಡಬೇಕಿತ್ತು. ಇದಕ್ಕೆ ವಿರೋಧವಾಗಿ 8 ಗಂಟೆಗಳ ಕೆಲಸದ ಅವಧಿ ನಿಗದಿಪಡಿಸಬೇಕೆಂದು 1886ರ ಮೇ 1ರಂದು ಭಾರೀ ಮಟ್ಟದಲ್ಲಿ ಪ್ರತಿಭಟನೆಗಳು ನಡೆದವು. ವಿಶೇಷವಾಗಿ ಶಿಕಾಗೋ ನಗರದಲ್ಲಿ ನಡೆದ ಹೋರಾಟಗಳು ಇತಿಹಾಸ ಪ್ರಸಿದ್ಧವಾದವು. ಈ ಚಳವಳಿಯ ವೇಳೆ ಅನೇಕ ಕಾರ್ಮಿಕರು ತಮ್ಮ ಜೀವ ತ್ಯಾಗ ಮಾಡಿದರು. ಈ ಹೋರಾಟದ ಪರಿಣಾಮವಾಗಿ ನಂತರ ಹಲವು ದೇಶಗಳಲ್ಲಿ 8 ಗಂಟೆಗಳ ಕೆಲಸದ ನಿಯಮ ಜಾರಿಗೆ ಬಂತು. ಕಾರ್ಮಿಕರ ಜೀವನಮಟ್ಟ ಸುಧಾರಿಸಲು ಮತ್ತು ಅವರ ಹಕ್ಕುಗಳನ್ನು ಕಾಪಾಡಲು ವಿವಿಧ ಕಾನೂನುಗಳು ರೂಪುಗೊಂಡವು. ಹಾಗಾಗಿ, ಕಾರ್ಮಿಕರ ದಿನವು ಕೇವಲ ಆಚರಣೆ ಮಾತ್ರವಲ್ಲ, ನ್ಯಾಯಯುತ ಕೆಲಸದ ಪರಿಸರಕ್ಕಾಗಿ ನಡೆದ ಹೋರಾಟದ ಸಂಕೇತ ಎಂದು ನೆನೆದರು.</p>.<p>ಸಿಐಯುಟಿ ತಾಲ್ಲೂಕು ಸಂಚಾಲಕ ಐ.ಸಿ.ವೀರಭದ್ರ, ರಾಜ್ಯ ಉಪಾಧ್ಯಕ್ಷ ಎಚ್.ಎನ್.ಗೋಪಾಲಗೌಡ, ಎನ್.ಅಶೋಕ್, ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಸುಜಾತ, ಶ್ರೀನಿವಾಸ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-18-916413718</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಲೂರು: ನಗರದ ಮಾರುತಿ ಬಡಾವಣೆಯಲ್ಲಿ ಶುಕ್ರವಾರ ಸಿಐಯುಟಿ ವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.</p>.<p>ಈ ವೇಳೆ ಸಿಐಯುಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮಿ ಮಾತನಾಡಿ, ಕಾರ್ಮಿಕರ ಪರಿಶ್ರಮದಿಂದ ಜಗತ್ತು ಬೆಳೆದು ನಿಂತಿದೆ. ಕಾರ್ಮಿಕರಿಲ್ಲದೆ ಸಮಾಜದ ಚಕ್ರ ತಿರುಗದು ಎಂದು ತಿಳಿಸಿದರು.</p>.<p>ಪ್ರಾರಂಭದಲ್ಲಿ ಕಾರ್ಮಿಕರು ದಿನಕ್ಕೆ 10 ರಿಂದ 14 ಗಂಟೆ ಕೆಲಸ ಮಾಡಬೇಕಿತ್ತು. ಇದಕ್ಕೆ ವಿರೋಧವಾಗಿ 8 ಗಂಟೆಗಳ ಕೆಲಸದ ಅವಧಿ ನಿಗದಿಪಡಿಸಬೇಕೆಂದು 1886ರ ಮೇ 1ರಂದು ಭಾರೀ ಮಟ್ಟದಲ್ಲಿ ಪ್ರತಿಭಟನೆಗಳು ನಡೆದವು. ವಿಶೇಷವಾಗಿ ಶಿಕಾಗೋ ನಗರದಲ್ಲಿ ನಡೆದ ಹೋರಾಟಗಳು ಇತಿಹಾಸ ಪ್ರಸಿದ್ಧವಾದವು. ಈ ಚಳವಳಿಯ ವೇಳೆ ಅನೇಕ ಕಾರ್ಮಿಕರು ತಮ್ಮ ಜೀವ ತ್ಯಾಗ ಮಾಡಿದರು. ಈ ಹೋರಾಟದ ಪರಿಣಾಮವಾಗಿ ನಂತರ ಹಲವು ದೇಶಗಳಲ್ಲಿ 8 ಗಂಟೆಗಳ ಕೆಲಸದ ನಿಯಮ ಜಾರಿಗೆ ಬಂತು. ಕಾರ್ಮಿಕರ ಜೀವನಮಟ್ಟ ಸುಧಾರಿಸಲು ಮತ್ತು ಅವರ ಹಕ್ಕುಗಳನ್ನು ಕಾಪಾಡಲು ವಿವಿಧ ಕಾನೂನುಗಳು ರೂಪುಗೊಂಡವು. ಹಾಗಾಗಿ, ಕಾರ್ಮಿಕರ ದಿನವು ಕೇವಲ ಆಚರಣೆ ಮಾತ್ರವಲ್ಲ, ನ್ಯಾಯಯುತ ಕೆಲಸದ ಪರಿಸರಕ್ಕಾಗಿ ನಡೆದ ಹೋರಾಟದ ಸಂಕೇತ ಎಂದು ನೆನೆದರು.</p>.<p>ಸಿಐಯುಟಿ ತಾಲ್ಲೂಕು ಸಂಚಾಲಕ ಐ.ಸಿ.ವೀರಭದ್ರ, ರಾಜ್ಯ ಉಪಾಧ್ಯಕ್ಷ ಎಚ್.ಎನ್.ಗೋಪಾಲಗೌಡ, ಎನ್.ಅಶೋಕ್, ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷೆ ಸುಜಾತ, ಶ್ರೀನಿವಾಸ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-18-916413718</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>