ಪ್ರತ್ಯೇಕ ದೇಶ ಕುರಿತು ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ, ‘ದೇಶದ ಅಖಂಡತೆ, ಐಕ್ಯತೆ ಎತ್ತಿ ಹಿಡಿಯುವುದಾಗಿ ಸಂಸದರಾಗಿ ಪ್ರಮಾಣವಚನ ಸ್ವೀಕರಿಸುತ್ತೇವೆ. ಆದರೆ, ಕಾಂಗ್ರೆಸ್ನವರದ್ದು ಒಡೆದು ಆಳುವ ನೀತಿ. ನೆಹರೂ, ಇಂದಿರಾ ಗಾಂಧಿ ಕಾಲದಿಂದಲೂ ಚೀನಾ, ಪಾಕಿಸ್ತಾನ, ಬಾಂಗ್ಲಾದೇಶ ಜೊತೆ ಹೊಂದಾಣಿಕೆ ಮಾಡಿಕೊಂಡೇ ಬಂದಿದ್ದಾರೆ. ಹೀಗಾಗಿ, ದಕ್ಷಿಣ ಭಾರತ, ಉತ್ತರ ಭಾರತ ವಿಭ್ಭಾಗ ಮಾಡಬೇಕೆಂದು ಈಗ ಸುರೇಶ್ ಮಾತನಾಡುತ್ತಿದ್ದಾರೆ. ಇದನ್ನು ನಾವು ಬಲವಾಗಿ ಖಂಡಿಸುತ್ತೇವೆ’ ಎಂದರು.