<p><strong>ಮಾಲೂರು</strong>: ಐದು ವರ್ಷಗಳ ಹಿಂದೆ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ದೊಡ್ಡ ಕಲ್ಲಹಳ್ಳಿ ಗ್ರಾಮದಿಂದ ಮಾಸ್ತಿ ಮುಖ್ಯರಸ್ತೆಗೆ ಸಂಪರ್ಕಿಸುವ ರಸ್ತೆ ಅಗೆದು ಒಂದು ವರ್ಷದ ಹಿಂದೆ ಜಲ್ಲಿಕಲ್ಲು ಹಾಕಿದ್ದು, ಕಾಮಗಾರಿ ಪೂರ್ಣಗೊಳ್ಳದ ಕಾರಣ ಗ್ರಾಮಸ್ಥರು ಹಾಗೂ ವಾಹನ ಸವಾರರು ಹೈರಾಣಾಗಿದ್ದಾರೆ.</p>.<p>ದೊಡ್ಡ ಕಲ್ಲಹಳ್ಳಿ ಗ್ರಾಮದಿಂದ ಮಾಸ್ತಿ ಗ್ರಾಮದ ಮುಖ್ಯರಸ್ತೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಗುತ್ತಿಗೆಗೆ ಪಡೆದ ಗುತ್ತಿಗೆದಾರ ಕಳೆದ ವರ್ಷ ರಸ್ತೆ ಅಗೆದು ಜಲ್ಲಿ ಹಾಕಿದ್ದರು. ನಂತರ, ಇದುವರೆಗೂ ಈ ಕಡೆ ಮುಖ ಮಾಡಿಲ್ಲ. ಪ್ರತಿದಿನ ಈ ಜಲ್ಲಿ ಕಲ್ಲುಗಳ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ. ಈಗಾಗಲೇ ಈ ರಸ್ತೆಯಲ್ಲಿ ಹಲವು ಮಂದಿ ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ. ಆದರೂ ಯಾರೂ ಎಚ್ಚೆತ್ತು ರಸ್ತೆ ಅಭಿವೃದ್ಧಿಪಡಿಸಿಲ್ಲ. ಈಗಾಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-18-1106645178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ಐದು ವರ್ಷಗಳ ಹಿಂದೆ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ದೊಡ್ಡ ಕಲ್ಲಹಳ್ಳಿ ಗ್ರಾಮದಿಂದ ಮಾಸ್ತಿ ಮುಖ್ಯರಸ್ತೆಗೆ ಸಂಪರ್ಕಿಸುವ ರಸ್ತೆ ಅಗೆದು ಒಂದು ವರ್ಷದ ಹಿಂದೆ ಜಲ್ಲಿಕಲ್ಲು ಹಾಕಿದ್ದು, ಕಾಮಗಾರಿ ಪೂರ್ಣಗೊಳ್ಳದ ಕಾರಣ ಗ್ರಾಮಸ್ಥರು ಹಾಗೂ ವಾಹನ ಸವಾರರು ಹೈರಾಣಾಗಿದ್ದಾರೆ.</p>.<p>ದೊಡ್ಡ ಕಲ್ಲಹಳ್ಳಿ ಗ್ರಾಮದಿಂದ ಮಾಸ್ತಿ ಗ್ರಾಮದ ಮುಖ್ಯರಸ್ತೆಯವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಗುತ್ತಿಗೆಗೆ ಪಡೆದ ಗುತ್ತಿಗೆದಾರ ಕಳೆದ ವರ್ಷ ರಸ್ತೆ ಅಗೆದು ಜಲ್ಲಿ ಹಾಕಿದ್ದರು. ನಂತರ, ಇದುವರೆಗೂ ಈ ಕಡೆ ಮುಖ ಮಾಡಿಲ್ಲ. ಪ್ರತಿದಿನ ಈ ಜಲ್ಲಿ ಕಲ್ಲುಗಳ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುತ್ತಿದ್ದಾರೆ. ಈಗಾಗಲೇ ಈ ರಸ್ತೆಯಲ್ಲಿ ಹಲವು ಮಂದಿ ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ. ಆದರೂ ಯಾರೂ ಎಚ್ಚೆತ್ತು ರಸ್ತೆ ಅಭಿವೃದ್ಧಿಪಡಿಸಿಲ್ಲ. ಈಗಾಲಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಎಂದು ಗ್ರಾಮಸ್ಥರು ಒತ್ತಾಯಿಸಿ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-18-1106645178</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>