<p><strong>ಮಾಲೂರು (ಕೋಲಾರ):</strong> ತಾಲ್ಲೂಕಿನ ಮಾಸ್ತಿ ಹೋಬಳಿಯ ಕೊತ್ತೂರು ಗ್ರಾಮದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಸೋಮವಾರ ಮತ್ತಿಬ್ಬರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ಗ್ರಾಮದ ವೆಂಕಟೇಶಪ್ಪ ಎಂಬುವರ ಮೊಮ್ಮಕ್ಕಳಾದ ದೇವಕಿರಣ್ (12) ಹಾಗೂ ವಿನೀತ್ ಕುಮಾರ್ (9) ನೀರು ಪಾಲಾದವರು. ಶಾಲೆಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈ ಮಕ್ಕಳು ತಾತನ ಮನೆಗೆ ಬಂದಿದ್ದರು. ಬಿಸಿಲಧಗೆ ಕಾರಣ ಈ ಹೊಂಡದಲ್ಲಿ ಈಜಲು ಹೋಗಿದ್ದರು ಎಂಬುದು ಗೊತ್ತಾಗಿದೆ.</p>.<p>ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಸಮೀಪದ ಬಗ್ಗಟ್ಟಿ ಗ್ರಾಮದ ವಾಸಿಗಳಾದ ಭಾಗ್ಯಮ್ಮ ಹಾಗೂ ಚಂದ್ರಪ್ಪ ಎಂಬುವರ ಪುತ್ರನಾದ ದೇವಕಿರಣ್ ಬೆಂಗಳೂರಿನ ರಾಮಮೂರ್ತಿ ನಗರದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದ.</p>.<p>ಅಶ್ವತಪ್ಪ ಮತ್ತು ಗೌರಮ್ಮ ಪುತ್ರನಾದ ವಿನೀತ್ ಕುಮಾರ್ ಬಂಗಾರಪೇಟೆ ಸರ್ಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ.</p>.<p>ಜಿಲ್ಲೆಯಲ್ಲಿ ಈಚೆಗೆ ಕೃಷಿ ಹೊಂಡಕ್ಕೆ ಬಿದ್ದು ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 20 ದಿನಗಳಲ್ಲಿ ಏಳು ಮಂದಿ ನೀರು ಪಾಲಾಗಿದ್ದರು. ಈಗ ಮತ್ತಿಬ್ಬರ ಮಕ್ಕಳು ಮೃತಪಟ್ಟಿದ್ದಾರೆ. ಆದರೆ, ಈ ಮಕ್ಕಳು ಬಿದ್ದು ಮೃತಪಟ್ಟಿರುವುದು ಕೃಷಿ ಹೊಂಡದಲ್ಲಿ ಅಲ್ಲ; ಇಂಗು ಗುಂಡಿಯಲ್ಲಿ ಎಂದು ಸ್ಥಳೀಯರು ಹೇಳಿದ್ದಾರೆ.</p>.<p>ವಾರದ ಹಿಂದೆಯಷ್ಟೇ ತಾಲ್ಲೂಕಿನ ಟೇಕಲ್ ಹೋಬಳಿಯ ನಕ್ಕನಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ತಂದೆ ಹಾಗೂ ಗಂಡು ಮಕ್ಕಳಿಬ್ಬರು ನೀರು ಪಾಲಾಗಿದ್ದರು.</p>.<p>ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಆರ್.ರವಿ ಎಚ್ಚರಿಕೆ ನೀಡಿದ್ದರು. ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-18-2041525241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು (ಕೋಲಾರ):</strong> ತಾಲ್ಲೂಕಿನ ಮಾಸ್ತಿ ಹೋಬಳಿಯ ಕೊತ್ತೂರು ಗ್ರಾಮದಲ್ಲಿ ನೀರಿನ ಹೊಂಡಕ್ಕೆ ಬಿದ್ದು ಸೋಮವಾರ ಮತ್ತಿಬ್ಬರು ಮಕ್ಕಳು ಮೃತಪಟ್ಟಿದ್ದಾರೆ.</p>.<p>ಗ್ರಾಮದ ವೆಂಕಟೇಶಪ್ಪ ಎಂಬುವರ ಮೊಮ್ಮಕ್ಕಳಾದ ದೇವಕಿರಣ್ (12) ಹಾಗೂ ವಿನೀತ್ ಕುಮಾರ್ (9) ನೀರು ಪಾಲಾದವರು. ಶಾಲೆಗೆ ಬೇಸಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈ ಮಕ್ಕಳು ತಾತನ ಮನೆಗೆ ಬಂದಿದ್ದರು. ಬಿಸಿಲಧಗೆ ಕಾರಣ ಈ ಹೊಂಡದಲ್ಲಿ ಈಜಲು ಹೋಗಿದ್ದರು ಎಂಬುದು ಗೊತ್ತಾಗಿದೆ.</p>.<p>ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಸಮೀಪದ ಬಗ್ಗಟ್ಟಿ ಗ್ರಾಮದ ವಾಸಿಗಳಾದ ಭಾಗ್ಯಮ್ಮ ಹಾಗೂ ಚಂದ್ರಪ್ಪ ಎಂಬುವರ ಪುತ್ರನಾದ ದೇವಕಿರಣ್ ಬೆಂಗಳೂರಿನ ರಾಮಮೂರ್ತಿ ನಗರದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ಓದುತ್ತಿದ್ದ.</p>.<p>ಅಶ್ವತಪ್ಪ ಮತ್ತು ಗೌರಮ್ಮ ಪುತ್ರನಾದ ವಿನೀತ್ ಕುಮಾರ್ ಬಂಗಾರಪೇಟೆ ಸರ್ಕಾರಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ.</p>.<p>ಜಿಲ್ಲೆಯಲ್ಲಿ ಈಚೆಗೆ ಕೃಷಿ ಹೊಂಡಕ್ಕೆ ಬಿದ್ದು ಮೃತರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ 20 ದಿನಗಳಲ್ಲಿ ಏಳು ಮಂದಿ ನೀರು ಪಾಲಾಗಿದ್ದರು. ಈಗ ಮತ್ತಿಬ್ಬರ ಮಕ್ಕಳು ಮೃತಪಟ್ಟಿದ್ದಾರೆ. ಆದರೆ, ಈ ಮಕ್ಕಳು ಬಿದ್ದು ಮೃತಪಟ್ಟಿರುವುದು ಕೃಷಿ ಹೊಂಡದಲ್ಲಿ ಅಲ್ಲ; ಇಂಗು ಗುಂಡಿಯಲ್ಲಿ ಎಂದು ಸ್ಥಳೀಯರು ಹೇಳಿದ್ದಾರೆ.</p>.<p>ವಾರದ ಹಿಂದೆಯಷ್ಟೇ ತಾಲ್ಲೂಕಿನ ಟೇಕಲ್ ಹೋಬಳಿಯ ನಕ್ಕನಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ತಂದೆ ಹಾಗೂ ಗಂಡು ಮಕ್ಕಳಿಬ್ಬರು ನೀರು ಪಾಲಾಗಿದ್ದರು.</p>.<p>ಕೃಷಿ ಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಆರ್.ರವಿ ಎಚ್ಚರಿಕೆ ನೀಡಿದ್ದರು. ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-18-2041525241</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>