<p>ಕೋಲಾರ: ಮಾಲೂರು ತಾಲ್ಲೂಕಿನ ಕಸಬಾ ಹೋಬಳಿ ಬೆಳ್ಳಾವಿ ಗ್ರಾಮದಲ್ಲಿ ಸರ್ಕಾರಿ ಜಮೀನು ಸಂಬಂಧ ಅಕ್ರಮವಾಗಿ ದಾಖಲೆ ಸೃಷ್ಟಿಸಿಕೊಂಡು ಕಬಳಿಸಲು ಯತ್ನಿಸಿರುವ ಆರೋಪದಡಿ ಮೂವರ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಮಾಲೂರು ತಹಶೀಲ್ದಾರ್ ರೂಪಾ ದೂರು ನೀಡಿದ್ದಾರೆ. ಬೆಳ್ಳಾವಿ ನಿವಾಸಿಗಳಾದ ಅಬ್ದುಲ್ ಗಫಾರ್, ಜ್ಯೋತಿ ಪ್ರಕಾಶ್, ಮಂಜುನಾಥಚಾರಿ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಬೆಳ್ಳಾವಿ ಗ್ರಾಮದಲ್ಲಿ ಮೂರು ಎಕರೆ ಜಮೀನನ್ನು ಆರೋಪಿಗಳು ತಲಾ 1 ಎಕರೆ ಮಂಜೂರು ಆಗಿರುವುದಾಗಿ ದುರಸ್ತಿ ಮಾಡುವ ಸಲುವಾಗಿ ಅಲಾಯಿದೆಯಾಗಿ ಅರ್ಜಿಗಳನ್ನು ತಹಶೀಲ್ದಾರ್ ಕಚೇರಿಗೆ ಸಲ್ಲಿಸಿದ್ದರು. ಈ ಸಂಬಂಧ ಶಿರಸ್ತೇದಾರ್, ರಾಜಸ್ವ ನಿರೀಕ್ಷ, ಗ್ರಾಮ ಲೆಕ್ಕಾಧಿಕಾರಿ ಮಂಜೂರು ಮಾಡಿ, ದುರಸ್ತಿ ಮಾಡಿದಂತೆ ಎಲ್ಲಾ ದಾಖಲೆಗಳನ್ನು ತಾಲೂಕು ಕಚೇರಿ ಎಲ್ಎನ್ಡಿ/ಸಿಆರ್/7845 / 85 & 86 ಕಡತ ಮತ್ತು ಸರ್ವೇ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ದಾಖಲೆಗಳಲ್ಲಿರುವ ಸಹಿಗಳು ಸಹ ಪೋರ್ಜರಿಯಾಗಿದ್ದು ಯಾವುದೇ ಪತ್ರ ವ್ಯವಹಾರ ಸಹ ನಡೆದಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಜಮೀನು ಕಬಳಿಸಲು ಯತ್ನಿಸಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಲು ರೂಪಾ ಮೇ 14ರಂದು ದೂರು ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-18-865994572</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಮಾಲೂರು ತಾಲ್ಲೂಕಿನ ಕಸಬಾ ಹೋಬಳಿ ಬೆಳ್ಳಾವಿ ಗ್ರಾಮದಲ್ಲಿ ಸರ್ಕಾರಿ ಜಮೀನು ಸಂಬಂಧ ಅಕ್ರಮವಾಗಿ ದಾಖಲೆ ಸೃಷ್ಟಿಸಿಕೊಂಡು ಕಬಳಿಸಲು ಯತ್ನಿಸಿರುವ ಆರೋಪದಡಿ ಮೂವರ ವಿರುದ್ಧ ಮಾಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಮಾಲೂರು ತಹಶೀಲ್ದಾರ್ ರೂಪಾ ದೂರು ನೀಡಿದ್ದಾರೆ. ಬೆಳ್ಳಾವಿ ನಿವಾಸಿಗಳಾದ ಅಬ್ದುಲ್ ಗಫಾರ್, ಜ್ಯೋತಿ ಪ್ರಕಾಶ್, ಮಂಜುನಾಥಚಾರಿ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಬೆಳ್ಳಾವಿ ಗ್ರಾಮದಲ್ಲಿ ಮೂರು ಎಕರೆ ಜಮೀನನ್ನು ಆರೋಪಿಗಳು ತಲಾ 1 ಎಕರೆ ಮಂಜೂರು ಆಗಿರುವುದಾಗಿ ದುರಸ್ತಿ ಮಾಡುವ ಸಲುವಾಗಿ ಅಲಾಯಿದೆಯಾಗಿ ಅರ್ಜಿಗಳನ್ನು ತಹಶೀಲ್ದಾರ್ ಕಚೇರಿಗೆ ಸಲ್ಲಿಸಿದ್ದರು. ಈ ಸಂಬಂಧ ಶಿರಸ್ತೇದಾರ್, ರಾಜಸ್ವ ನಿರೀಕ್ಷ, ಗ್ರಾಮ ಲೆಕ್ಕಾಧಿಕಾರಿ ಮಂಜೂರು ಮಾಡಿ, ದುರಸ್ತಿ ಮಾಡಿದಂತೆ ಎಲ್ಲಾ ದಾಖಲೆಗಳನ್ನು ತಾಲೂಕು ಕಚೇರಿ ಎಲ್ಎನ್ಡಿ/ಸಿಆರ್/7845 / 85 & 86 ಕಡತ ಮತ್ತು ಸರ್ವೇ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ದಾಖಲೆಗಳಲ್ಲಿರುವ ಸಹಿಗಳು ಸಹ ಪೋರ್ಜರಿಯಾಗಿದ್ದು ಯಾವುದೇ ಪತ್ರ ವ್ಯವಹಾರ ಸಹ ನಡೆದಿರುವುದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.</p>.<p>ಆರೋಪಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಜಮೀನು ಕಬಳಿಸಲು ಯತ್ನಿಸಿದ್ದು, ಅವರ ವಿರುದ್ಧ ಕ್ರಮಕೈಗೊಳ್ಳಲು ರೂಪಾ ಮೇ 14ರಂದು ದೂರು ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-18-865994572</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>