<p><strong>ಮಾಲೂರು</strong>: ನಗರಸಭೆಯಾಗಿ ಮಾಲೂರನ್ನು ಮೇಲ್ದರ್ಜೆಗೇರಿಸಿದ ಬಳಿಕ ಮೂಲಸೌಲಭ್ಯ ಕಲ್ಪಿಸಲು ವಿಶೇಷವಾಗಿ ₹ 40 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಇದರಲ್ಲಿ ₹ 20 ಕೋಟಿ ವೆಚ್ಚದಲ್ಲಿ ಟೆಂಡರ್ ಆಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ₹ 20 ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದ ಜೊತೆಜೊತೆಗೆ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡಿ ಕಾಮಗಾರಿ ಕೈಗೊಳ್ಳಲಾಗಿದೆ. ಯರಗೋಳ್ ನೀರು ಕೂಡ ಸಿಕ್ಕಿದೆ’ ಎಂದರು.</p>.<p>ಸಮಗ್ರ ಯೋಜನೆ (ಮಾಸ್ಟರ್ ಪ್ಲಾನ್) ಕೂಡ ಬದಲಾಗಿದ್ದು ಬಸ್ ನಿಲ್ದಾಣ, ಆಸ್ಪತ್ರೆ, ಕೆರೆ ಅಭಿವೃದ್ಧಿ, ಅಂಬೇಡ್ಕರ್ ಅಭಿವೃದ್ಧಿ, ಮೇಲ್ಸೇತುವೆ, ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.</p>.<p>ವಿಶೇಷ ಅನುದಾನದಲ್ಲಿ ನಗರದ ವಿವಿಧ ವಾರ್ಡ್ಗಳಿಗೆ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಾರ್ಡ್ವಾರು ಪ್ಯಾಕೇಜ್ ಮಾಡಿಕೊಂಡು ಕಾಮಗಾರಿ ನಡೆಸಲಾಗುತ್ತದೆ. ಮೂರು ತಿಂಗಳೊಳಗೆ 55 ಕಿ.ಮೀ ರಸ್ತೆ ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು.</p>.<p>ತೆರಿಗೆಯೂ ಬಾಕಿ ಉಳಿಸಿಕೊಂಡಿದ್ದರು. ಶೇ 5 ರಿಯಾಯಿತಿ ನೀಡಿ ತೆರಿಗೆ ಪಾವತಿಸಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಒಂದೇ ದಿನ ₹ 1.22 ಕೋಟಿ ತೆರಿಗೆ ಸಂಗ್ರಹ ಮಾಡಿದ್ದಾರೆ. ಹರಾಜಿನಲ್ಲಿ ₹ 12 ಕೋಟಿ ಸಿಗುತ್ತಿದೆ ಎಂದರು.</p>.<p>ಜಿಲ್ಲೆಯಲ್ಲಿ ಮಳೆ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಯಾಗಿ ಮಾಡಲು ಎಲ್ಲರೂ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.</p>.<p>ಆನಂದ ಸಿದ್ಧಾರ್ಥ ಕುರಿತು ಮಾಜಿ ಶಾಸಕ ಕೆ.ಎಸ್.ಮಂಜನಾಥಗೌಡರು ಮಾತನಾಡಿದ್ದಾರೆ. ಆನಂದ ಸಿದ್ಧಾರ್ಥ ನಮ್ಮ ಹುಡುಗ. ನಮ್ಮ ಜೊತೆಯಲ್ಲಿದ್ದವವರು. ಕೆಲ ಭಿನ್ನಾಭಿಪ್ರಾಯ ಕಾರಣಾಂತರಗಳಿಂದ ಬಿಟ್ಟು ಹೋಗಿ ಬೇರೆಯವರ ಮಾತು ಕೇಳಿ ಏನೋ ಹೇಳುತ್ತಿರಬಹುದು ಎಂದರು.</p>.<p>ದಯವಿಟ್ಟು ಮಂಜುನಾಥಗೌಡರ ಬಗ್ಗೆ ಏನೂ ಕೇಳಬೇಡಿ. ಅವರ ಬಗ್ಗೆ ನಾನು ಮಾತನಾಡಲ್ಲ. ಅವರು ಬೇಕಾದರೆ ನನ್ನ ಬಗ್ಗೆ ನಿತ್ಯ ಮಾತನಾಡಲಿ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-18-423991693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ನಗರಸಭೆಯಾಗಿ ಮಾಲೂರನ್ನು ಮೇಲ್ದರ್ಜೆಗೇರಿಸಿದ ಬಳಿಕ ಮೂಲಸೌಲಭ್ಯ ಕಲ್ಪಿಸಲು ವಿಶೇಷವಾಗಿ ₹ 40 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ. ಇದರಲ್ಲಿ ₹ 20 ಕೋಟಿ ವೆಚ್ಚದಲ್ಲಿ ಟೆಂಡರ್ ಆಗಿದ್ದು, ಸದ್ಯದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ. ₹ 20 ಕೋಟಿ ಮೊತ್ತದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದ ಜೊತೆಜೊತೆಗೆ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡಿ ಕಾಮಗಾರಿ ಕೈಗೊಳ್ಳಲಾಗಿದೆ. ಯರಗೋಳ್ ನೀರು ಕೂಡ ಸಿಕ್ಕಿದೆ’ ಎಂದರು.</p>.<p>ಸಮಗ್ರ ಯೋಜನೆ (ಮಾಸ್ಟರ್ ಪ್ಲಾನ್) ಕೂಡ ಬದಲಾಗಿದ್ದು ಬಸ್ ನಿಲ್ದಾಣ, ಆಸ್ಪತ್ರೆ, ಕೆರೆ ಅಭಿವೃದ್ಧಿ, ಅಂಬೇಡ್ಕರ್ ಅಭಿವೃದ್ಧಿ, ಮೇಲ್ಸೇತುವೆ, ನಾಲ್ಕು ಪಥದ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.</p>.<p>ವಿಶೇಷ ಅನುದಾನದಲ್ಲಿ ನಗರದ ವಿವಿಧ ವಾರ್ಡ್ಗಳಿಗೆ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ವಾರ್ಡ್ವಾರು ಪ್ಯಾಕೇಜ್ ಮಾಡಿಕೊಂಡು ಕಾಮಗಾರಿ ನಡೆಸಲಾಗುತ್ತದೆ. ಮೂರು ತಿಂಗಳೊಳಗೆ 55 ಕಿ.ಮೀ ರಸ್ತೆ ಅಭಿವೃದ್ಧಿ ಆಗಲಿದೆ ಎಂದು ತಿಳಿಸಿದರು.</p>.<p>ತೆರಿಗೆಯೂ ಬಾಕಿ ಉಳಿಸಿಕೊಂಡಿದ್ದರು. ಶೇ 5 ರಿಯಾಯಿತಿ ನೀಡಿ ತೆರಿಗೆ ಪಾವತಿಸಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಒಂದೇ ದಿನ ₹ 1.22 ಕೋಟಿ ತೆರಿಗೆ ಸಂಗ್ರಹ ಮಾಡಿದ್ದಾರೆ. ಹರಾಜಿನಲ್ಲಿ ₹ 12 ಕೋಟಿ ಸಿಗುತ್ತಿದೆ ಎಂದರು.</p>.<p>ಜಿಲ್ಲೆಯಲ್ಲಿ ಮಳೆ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಯಾಗಿ ಮಾಡಲು ಎಲ್ಲರೂ ಜವಾಬ್ದಾರಿ ವಹಿಸಿಕೊಂಡು ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು.</p>.<p>ಆನಂದ ಸಿದ್ಧಾರ್ಥ ಕುರಿತು ಮಾಜಿ ಶಾಸಕ ಕೆ.ಎಸ್.ಮಂಜನಾಥಗೌಡರು ಮಾತನಾಡಿದ್ದಾರೆ. ಆನಂದ ಸಿದ್ಧಾರ್ಥ ನಮ್ಮ ಹುಡುಗ. ನಮ್ಮ ಜೊತೆಯಲ್ಲಿದ್ದವವರು. ಕೆಲ ಭಿನ್ನಾಭಿಪ್ರಾಯ ಕಾರಣಾಂತರಗಳಿಂದ ಬಿಟ್ಟು ಹೋಗಿ ಬೇರೆಯವರ ಮಾತು ಕೇಳಿ ಏನೋ ಹೇಳುತ್ತಿರಬಹುದು ಎಂದರು.</p>.<p>ದಯವಿಟ್ಟು ಮಂಜುನಾಥಗೌಡರ ಬಗ್ಗೆ ಏನೂ ಕೇಳಬೇಡಿ. ಅವರ ಬಗ್ಗೆ ನಾನು ಮಾತನಾಡಲ್ಲ. ಅವರು ಬೇಕಾದರೆ ನನ್ನ ಬಗ್ಗೆ ನಿತ್ಯ ಮಾತನಾಡಲಿ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-18-423991693</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>