<p>ಬಂಗಾರಪೇಟೆ: ತಾಲ್ಲೂಕಿನ ಜನರಿಗಾಗಿ ಅಂದು ಮಹಾರಾಜರು ಮಾರ್ಕಂಡೇಯ ಜಲಾಶಯ ನಿರ್ಮಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಅನ್ಯ ಕ್ಷೇತ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಶನಿವಾರ ತಿಳಿಸಿದರು.</p>.<p>ಈ ಮೂಲಕ ಮಾಲೂರು ತಾಲ್ಲೂಕಿನ 182 ಗ್ರಾಮಗಳಿಗೆ ಮಾರ್ಕಂಡೇಯ ಜಲಾಶಯದ ನೀರು ಹರಿಸಲಾಗುವುದು ಎಂಬ ಸ್ವಪಕ್ಷ ಶಾಸಕ ಕೆ.ವೈ. ನಂಜೇಗೌಡ ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ನತ್ತಬೆಲೆ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾರ್ಕಂಡೇಯ ಜಲಾಶಯದ ಅಣೆಕಟ್ಟು ಬಂಗಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿದೆ. ಈ ಜಲಾಶಯದ ಅಡಿ ಸುಮಾರು 2,400 ಅಚ್ಚುಕಟ್ಟುದಾರರಿದ್ದಾರೆ. ಈ ನೀರು ಕೇವಲ ಕೃಷಿ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿದೆ. ಆದರೆ ವಾಸ್ತವಾಂಶ ಅರಿಯದೆ ಮಾಲೂರು ಶಾಸಕರು ನನ್ನ ಗಮನಕ್ಕೆ ತರದೆ ಕುಡಿಯುವ ನೀರು ಸರಬರಾಜಿಗೆ ಮುಂದಾಗಿರುವುದು ಸರಿಯಲ್ಲ’ ಎಂದು ಕಿಡಿಕಾರಿದರು.</p>.<p>ಬಂಗಾರಪೇಟೆ, ಮಾಲೂರು ಮತ್ತು ಕೋಲಾರ ನಗರಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ₹400 ಕೋಟಿ ವೆಚ್ಚದಲ್ಲಿ ಯರಗೋಳ್ ಡ್ಯಾಂ ನಿರ್ಮಿಸಲಾಗಿದೆ. ಮಾರ್ಕಂಡೇಯ ಜಲಾಶಯ ತುಂಬಿದರೆ ಮಾತ್ರ ಯರಗೋಳ್ ಡ್ಯಾಂಗೆ ನೀರು ಹರಿಯಲು ಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ಮಾರ್ಕಂಡೇಯ ಜಲಾಶಯದ ನೀರನ್ನು ನೇರವಾಗಿ ಮಾಲೂರಿಗೆ ಕೊಂಡೊಯ್ಯುವುದು ಅವೈಜ್ಞಾನಿಕ ಮತ್ತು ಎರಡೂ ಕ್ಷೇತ್ರಗಳ ಹಿತಾಸಕ್ತಿಗೆ ವಿರುದ್ಧ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-18-209255108</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ತಾಲ್ಲೂಕಿನ ಜನರಿಗಾಗಿ ಅಂದು ಮಹಾರಾಜರು ಮಾರ್ಕಂಡೇಯ ಜಲಾಶಯ ನಿರ್ಮಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಅನ್ಯ ಕ್ಷೇತ್ರಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಶನಿವಾರ ತಿಳಿಸಿದರು.</p>.<p>ಈ ಮೂಲಕ ಮಾಲೂರು ತಾಲ್ಲೂಕಿನ 182 ಗ್ರಾಮಗಳಿಗೆ ಮಾರ್ಕಂಡೇಯ ಜಲಾಶಯದ ನೀರು ಹರಿಸಲಾಗುವುದು ಎಂಬ ಸ್ವಪಕ್ಷ ಶಾಸಕ ಕೆ.ವೈ. ನಂಜೇಗೌಡ ಅವರ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ನತ್ತಬೆಲೆ ಗ್ರಾಮದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾರ್ಕಂಡೇಯ ಜಲಾಶಯದ ಅಣೆಕಟ್ಟು ಬಂಗಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿದೆ. ಈ ಜಲಾಶಯದ ಅಡಿ ಸುಮಾರು 2,400 ಅಚ್ಚುಕಟ್ಟುದಾರರಿದ್ದಾರೆ. ಈ ನೀರು ಕೇವಲ ಕೃಷಿ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿದೆ. ಆದರೆ ವಾಸ್ತವಾಂಶ ಅರಿಯದೆ ಮಾಲೂರು ಶಾಸಕರು ನನ್ನ ಗಮನಕ್ಕೆ ತರದೆ ಕುಡಿಯುವ ನೀರು ಸರಬರಾಜಿಗೆ ಮುಂದಾಗಿರುವುದು ಸರಿಯಲ್ಲ’ ಎಂದು ಕಿಡಿಕಾರಿದರು.</p>.<p>ಬಂಗಾರಪೇಟೆ, ಮಾಲೂರು ಮತ್ತು ಕೋಲಾರ ನಗರಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ₹400 ಕೋಟಿ ವೆಚ್ಚದಲ್ಲಿ ಯರಗೋಳ್ ಡ್ಯಾಂ ನಿರ್ಮಿಸಲಾಗಿದೆ. ಮಾರ್ಕಂಡೇಯ ಜಲಾಶಯ ತುಂಬಿದರೆ ಮಾತ್ರ ಯರಗೋಳ್ ಡ್ಯಾಂಗೆ ನೀರು ಹರಿಯಲು ಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ಮಾರ್ಕಂಡೇಯ ಜಲಾಶಯದ ನೀರನ್ನು ನೇರವಾಗಿ ಮಾಲೂರಿಗೆ ಕೊಂಡೊಯ್ಯುವುದು ಅವೈಜ್ಞಾನಿಕ ಮತ್ತು ಎರಡೂ ಕ್ಷೇತ್ರಗಳ ಹಿತಾಸಕ್ತಿಗೆ ವಿರುದ್ಧ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-18-209255108</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>