‘ಇಡೀ ಮಾರುಕಟ್ಟೆಯಲ್ಲಿ ಕಸದ ರಾಶಿ ತೆರವುಗೊಳಿಸಿ, ಸ್ವಚ್ಛ ಮಾಡಲಾಗಿದೆ. ಮಾರುಕಟ್ಟೆ ಆವರಣದ ಎಲ್ಲಾ ರಸ್ತೆಗಳು, ಹೋಟೆಲ್, ಮಂಡಿ, ಅಂಗಡಿಗಳಿಗೆ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಕೊರೊನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ರೈತರು, ಮಂಡಿ ಮಾಲೀಕರು ಹಾಗೂ ತರಕಾರಿ ವ್ಯಾಪಾರಿಗಳು ಕೈಜೋಡಿಸಬೇಕು’ ಎಂದು ಮನವಿ ಮಾಡಿದರು.