<p><strong>ಕೋಲಾರ</strong>: ‘ನನ್ನ ಖರೀದಿಸುವ ಶಕ್ತಿ ಕರ್ನಾಟಕದಲ್ಲಿ ಯಾರಿಗೂ ಇಲ್ಲ. ನನ್ನ ರೇಟ್ ಬೇರೆ ಇದೆ. ಕರ್ನಾಟಕ ರಾಜ್ಯವನ್ನು ನನ್ನ ಹೆಸರಿಗೆ ಬರೆದು ಕೊಟ್ಟರೆ ಹೋಗುತ್ತೇನೆ. ಆದರೆ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಸರ್ಕಾರ ಬೀಳಿಸುವ ಕನಸು ಯಾರೂ ಕಾಣಬೇಡಿ’ ಎಂದು ಕೋಲಾರ ಶಾಸಕ ಕಾಂಗ್ರೆಸ್ನ ಕೊತ್ತೂರು ಮಂಜುನಾಥ್, ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ನಲ್ಲಿ 135 ಶಾಸಕರು ಇದ್ದೇವೆ. ಸರ್ಕಾರ ಬೀಳಿಸಲು ಸಾಧ್ಯವಿಲ್ಲ’ ಎಂದರು.</p>.<p>‘ಕಾಂಗ್ರೆಸ್ ಶಾಸಕ ರವಿ ಗಣಿಗ ಅವರಿಗೆ ಯಾರಾದರೂ ಹಣ ನೀಡಲು ಮುಂದೆ ಬಂದಿದ್ದಾರೋ ಏನೋ ನನಗೆ ಗೊತ್ತಿಲ್ಲ. ಅವರ ಹೇಳಿಕೆಯನ್ನು ನಾನೂ ಗಮನಿಸಿದ್ದೇನೆ’ ಎಂದರು. ‘ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬುದು ಸುಳ್ಳು. ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ’ ಎಂದು ತಿಳಿಸಿದರು.</p>.<p>‘ಕೋಲಾರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ಧವಾಗಿದ್ದಾರೆ. ಅವರು ಸ್ಥಳೀಯರೇ ಆಗಿದ್ದು, ಈಗಲೇ ಹೆಸರು ಬಹಿರಂಗಪಡಿಸುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ನನ್ನ ಖರೀದಿಸುವ ಶಕ್ತಿ ಕರ್ನಾಟಕದಲ್ಲಿ ಯಾರಿಗೂ ಇಲ್ಲ. ನನ್ನ ರೇಟ್ ಬೇರೆ ಇದೆ. ಕರ್ನಾಟಕ ರಾಜ್ಯವನ್ನು ನನ್ನ ಹೆಸರಿಗೆ ಬರೆದು ಕೊಟ್ಟರೆ ಹೋಗುತ್ತೇನೆ. ಆದರೆ, ನನ್ನನ್ನು ಯಾರೂ ಸಂಪರ್ಕಿಸಿಲ್ಲ. ಸರ್ಕಾರ ಬೀಳಿಸುವ ಕನಸು ಯಾರೂ ಕಾಣಬೇಡಿ’ ಎಂದು ಕೋಲಾರ ಶಾಸಕ ಕಾಂಗ್ರೆಸ್ನ ಕೊತ್ತೂರು ಮಂಜುನಾಥ್, ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂಗ್ರೆಸ್ನಲ್ಲಿ 135 ಶಾಸಕರು ಇದ್ದೇವೆ. ಸರ್ಕಾರ ಬೀಳಿಸಲು ಸಾಧ್ಯವಿಲ್ಲ’ ಎಂದರು.</p>.<p>‘ಕಾಂಗ್ರೆಸ್ ಶಾಸಕ ರವಿ ಗಣಿಗ ಅವರಿಗೆ ಯಾರಾದರೂ ಹಣ ನೀಡಲು ಮುಂದೆ ಬಂದಿದ್ದಾರೋ ಏನೋ ನನಗೆ ಗೊತ್ತಿಲ್ಲ. ಅವರ ಹೇಳಿಕೆಯನ್ನು ನಾನೂ ಗಮನಿಸಿದ್ದೇನೆ’ ಎಂದರು. ‘ಎರಡೂವರೆ ವರ್ಷದ ಬಳಿಕ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬುದು ಸುಳ್ಳು. ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ’ ಎಂದು ತಿಳಿಸಿದರು.</p>.<p>‘ಕೋಲಾರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ಧವಾಗಿದ್ದಾರೆ. ಅವರು ಸ್ಥಳೀಯರೇ ಆಗಿದ್ದು, ಈಗಲೇ ಹೆಸರು ಬಹಿರಂಗಪಡಿಸುವುದಿಲ್ಲ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>