<p><strong>ಕೋಲಾರ:</strong> ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಆಗಲಿ, ನಾನಾಗಲಿ, ಬೇರೆ ಯಾರೇ ಆಗಲಿ ತಪ್ಪು ಮಾಡಿದ್ದರೆ ಶಿಕ್ಷೆಗೆ ಒಳಗಾಗಲೇ ಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.</p>.<p>ಜಿಲ್ಲೆಯ ಮುಳಬಾಗಿಲಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದನದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಈ ಬಗ್ಗೆ ಪ್ರಸ್ತಾಪಿಸಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ನಾನೂ ಸದನದಲ್ಲಿ ಇದ್ದೆ. ಈ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ನಿಂದನಾತ್ಮಕ ಪದಕ ಬಳಸಿದ್ದಾರೆ ಎಂಬ ಪ್ರಶ್ನೆಗೆ, ‘ನಾನು ದೊಡ್ಡವರ ವಿಚಾರಕ್ಕೆ ಹೋಗುವುದಿಲ್ಲ. ಈಗಾಗಲೇ ಈ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಚರ್ಚೆ ನಡೆದು ಅವರು ಕ್ಷಮೆಯಾಚಿಸಿದ್ದಾರೆ. ಮಾತನಾಡುವ ಮೊದಲು ಯೋಚನೆ ಮಾಡಬೇಕು. ಕೆಲ ಸಂದರ್ಭದಲ್ಲಿ ಕೆಲ ಮಾತು ಬರುತ್ತವೆ. ಅದು ಮುಗಿದ ಕಥೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಆಗಲಿ, ನಾನಾಗಲಿ, ಬೇರೆ ಯಾರೇ ಆಗಲಿ ತಪ್ಪು ಮಾಡಿದ್ದರೆ ಶಿಕ್ಷೆಗೆ ಒಳಗಾಗಲೇ ಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ಹೇಳಿದರು.</p>.<p>ಜಿಲ್ಲೆಯ ಮುಳಬಾಗಿಲಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸದನದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ ಈ ಬಗ್ಗೆ ಪ್ರಸ್ತಾಪಿಸಿ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ನಾನೂ ಸದನದಲ್ಲಿ ಇದ್ದೆ. ಈ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಿರ್ಧಾರ ತೆಗೆದುಕೊಳ್ಳುತ್ತಾರೆ’ ಎಂದರು.</p>.<p>ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ನಿಂದನಾತ್ಮಕ ಪದಕ ಬಳಸಿದ್ದಾರೆ ಎಂಬ ಪ್ರಶ್ನೆಗೆ, ‘ನಾನು ದೊಡ್ಡವರ ವಿಚಾರಕ್ಕೆ ಹೋಗುವುದಿಲ್ಲ. ಈಗಾಗಲೇ ಈ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಚರ್ಚೆ ನಡೆದು ಅವರು ಕ್ಷಮೆಯಾಚಿಸಿದ್ದಾರೆ. ಮಾತನಾಡುವ ಮೊದಲು ಯೋಚನೆ ಮಾಡಬೇಕು. ಕೆಲ ಸಂದರ್ಭದಲ್ಲಿ ಕೆಲ ಮಾತು ಬರುತ್ತವೆ. ಅದು ಮುಗಿದ ಕಥೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>