<p>ಮುಳಬಾಗಿಲು: ತಾಲ್ಲೂಕು ಬಹುಜನ ಸಂಘಟನೆಗಳ ಒಕ್ಕೂಟ, ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಸಂಘ, ತಾಲ್ಲೂಕು ಕೂಲಿ ಕಾರ್ಮಿಕರ ಸಂಘ ಹಾಗೂ ದಲಿತಪರ ಸಂಘಟನೆಗಳ ವತಿಯಿಂದ ನಗರದ ನೇತಾಜಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ವಿಶ್ವ ಕಾರ್ಮಿಕರ ದಿನಾಚರಣೆ ನಡೆಯಿತು.</p>.<p>ಈ ವೇಳೆ ತಾಲ್ಲೂಕಿನಲ್ಲಿ ಹಿರಿಯ ಕಾರ್ಮಿಕರನ್ನು ಹಾಗೂ ಕೂಲಿಕರನ್ನು ಸತ್ಕರಿಸಲಾಯಿತು.</p>.<p>ಬಹುಜನ ಸಂಘಟನೆಗಳ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಸಂಗಸಂದ್ರ ವಿಜಯ್ ಕುಮಾರ್ ಮಾತನಾಡಿ, ಕಾರ್ಮಿಕರು ದೇಶದ ಆರ್ಥಿಕತೆಯ ಬೆನ್ನೆಲುಬು. ಅವರ ದುಡಿಮೆಗೆ ತಕ್ಕಂತೆ ಸರ್ಕಾರಗಳು ಕನಿಷ್ಠ ವೇತನ ನೀಡಬೇಕು. ಯಾವುದೇ ಕಾರಣಕ್ಕೂ ಹೆಚ್ಚು ಕೆಲಸಕ್ಕೆ ಕಡಿಮೆ ವೇತನ ನೀಡುವುದು ಸರಿಯಲ್ಲ ಎಂದು ಹೇಳಿದರು.</p>.<p>ಕಾರ್ಮಿಕರ ಕಲ್ಯಾಣಕ್ಕಾಗಿ ದೇಶದಲ್ಲಿ ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಲೇ ಬರುತ್ತಿವೆ. ಹಾಗಿದ್ದರೂ ಕಾರ್ಮಿಕರಿಗೆ ಸರ್ಕಾರಗಳು ಪೂರ್ಣ ಪ್ರಮಾಣದ ಸೌಲಭ್ಯಗಳನ್ನು ನೀಡದೆ ಇರುವುದು ಬೇಸರದ ವಿಚಾರ ಎಂದರು.</p>.<p>ದರಖಾಸ್ತು ಸಮಿತಿ ಸದಸ್ಯ ಜಮ್ಮನಹಳ್ಳಿ ಕೃಷ್ಣಪ್ಪ ಮಾತನಾಡಿ, ಕಾರ್ಮಿಕರಿಲ್ಲದೆ ದೇಶದ ಆರ್ಥಿಕ ಸ್ಥಿತಿ ಹೆಚ್ಚಳವಾಗಲು ಸಾಧ್ಯವಿಲ್ಲ. ಹಾಗಾಗಿ ಅಪಾಯದ ಸ್ಥಳಗಳಲ್ಲಿ ದುಡಿಯುವ ಹಾಗೂ ಇತರೆ ಕಾರ್ಮಿಕರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿ ಮಾಡಿ ಕಾರ್ಮಿಕರ ಪರ ನಿಲ್ಲಬೇಕೆಂದು ಹೇಳಿದರು.</p>.<p>ಕಾರ್ಮಿಕ ಇಲಾಖೆ ನಿರೀಕ್ಷಕಿ ಆಶಾ ರಾಣಿ, ಜಮ್ಮನಹಳ್ಳಿ ಕೃಷ್ಣಪ್ಪ, ಶಾಮಣ್ಣ, ಸರಸಮ್ಮ, ನಾಗವೇಣಮ್ಮ, ಸೋಮಶೇಖರ್, ಎಲ್ಲೇಶ್, ವೆಂಕಟರವಣಪ್ಪ, ಚೌಡಪ್ಪ, ಗೋಪಾಲ್, ಖಲೀಲ್ ಅಪ್ಸರ್ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-18-559792012</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ತಾಲ್ಲೂಕು ಬಹುಜನ ಸಂಘಟನೆಗಳ ಒಕ್ಕೂಟ, ಕರ್ನಾಟಕ ಕಟ್ಟಡ ಮತ್ತು ಇತರೆ ಕಾರ್ಮಿಕ ಕಲ್ಯಾಣ ಸಂಘ, ತಾಲ್ಲೂಕು ಕೂಲಿ ಕಾರ್ಮಿಕರ ಸಂಘ ಹಾಗೂ ದಲಿತಪರ ಸಂಘಟನೆಗಳ ವತಿಯಿಂದ ನಗರದ ನೇತಾಜಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ವಿಶ್ವ ಕಾರ್ಮಿಕರ ದಿನಾಚರಣೆ ನಡೆಯಿತು.</p>.<p>ಈ ವೇಳೆ ತಾಲ್ಲೂಕಿನಲ್ಲಿ ಹಿರಿಯ ಕಾರ್ಮಿಕರನ್ನು ಹಾಗೂ ಕೂಲಿಕರನ್ನು ಸತ್ಕರಿಸಲಾಯಿತು.</p>.<p>ಬಹುಜನ ಸಂಘಟನೆಗಳ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಸಂಗಸಂದ್ರ ವಿಜಯ್ ಕುಮಾರ್ ಮಾತನಾಡಿ, ಕಾರ್ಮಿಕರು ದೇಶದ ಆರ್ಥಿಕತೆಯ ಬೆನ್ನೆಲುಬು. ಅವರ ದುಡಿಮೆಗೆ ತಕ್ಕಂತೆ ಸರ್ಕಾರಗಳು ಕನಿಷ್ಠ ವೇತನ ನೀಡಬೇಕು. ಯಾವುದೇ ಕಾರಣಕ್ಕೂ ಹೆಚ್ಚು ಕೆಲಸಕ್ಕೆ ಕಡಿಮೆ ವೇತನ ನೀಡುವುದು ಸರಿಯಲ್ಲ ಎಂದು ಹೇಳಿದರು.</p>.<p>ಕಾರ್ಮಿಕರ ಕಲ್ಯಾಣಕ್ಕಾಗಿ ದೇಶದಲ್ಲಿ ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಲೇ ಬರುತ್ತಿವೆ. ಹಾಗಿದ್ದರೂ ಕಾರ್ಮಿಕರಿಗೆ ಸರ್ಕಾರಗಳು ಪೂರ್ಣ ಪ್ರಮಾಣದ ಸೌಲಭ್ಯಗಳನ್ನು ನೀಡದೆ ಇರುವುದು ಬೇಸರದ ವಿಚಾರ ಎಂದರು.</p>.<p>ದರಖಾಸ್ತು ಸಮಿತಿ ಸದಸ್ಯ ಜಮ್ಮನಹಳ್ಳಿ ಕೃಷ್ಣಪ್ಪ ಮಾತನಾಡಿ, ಕಾರ್ಮಿಕರಿಲ್ಲದೆ ದೇಶದ ಆರ್ಥಿಕ ಸ್ಥಿತಿ ಹೆಚ್ಚಳವಾಗಲು ಸಾಧ್ಯವಿಲ್ಲ. ಹಾಗಾಗಿ ಅಪಾಯದ ಸ್ಥಳಗಳಲ್ಲಿ ದುಡಿಯುವ ಹಾಗೂ ಇತರೆ ಕಾರ್ಮಿಕರಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆಗಳನ್ನು ಜಾರಿ ಮಾಡಿ ಕಾರ್ಮಿಕರ ಪರ ನಿಲ್ಲಬೇಕೆಂದು ಹೇಳಿದರು.</p>.<p>ಕಾರ್ಮಿಕ ಇಲಾಖೆ ನಿರೀಕ್ಷಕಿ ಆಶಾ ರಾಣಿ, ಜಮ್ಮನಹಳ್ಳಿ ಕೃಷ್ಣಪ್ಪ, ಶಾಮಣ್ಣ, ಸರಸಮ್ಮ, ನಾಗವೇಣಮ್ಮ, ಸೋಮಶೇಖರ್, ಎಲ್ಲೇಶ್, ವೆಂಕಟರವಣಪ್ಪ, ಚೌಡಪ್ಪ, ಗೋಪಾಲ್, ಖಲೀಲ್ ಅಪ್ಸರ್ ಮತ್ತಿತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-18-559792012</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>