<p>ಮುಳಬಾಗಿಲು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಿಂದ ವಸೂಲಿ ಮಾಡಿ ಸಂಗ್ರಹಿಸಲಾಗಿದ್ದ ₹5 ಲಕ್ಷ ಹಣವನ್ನು ಹಾಡಹಗಲೇ ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮುಳಬಾಗಿಲು ನಗರದ ಶಾಮೀರ್ ಮೊಹಲ್ಲಾದ ಸಂಘದ ಕಚೇರಿಯಲ್ಲಿ ನಡೆದಿದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳು ಪಡೆದಿದ್ದ ಸಾಲದ ಹಣವನ್ನು ವಾರದ ಕಂತಿನಲ್ಲಿ ವಸೂಲಿ ಮಾಡಿ ಸಂಘದ ಅಧಿಕಾರಿ ಶಶಿಕಲಾ ಸಂಗ್ರಹಿಸಿ, ಮುಖ್ಯ ಕಚೇರಿಗೆ ಸಾಗಿಸಲು ತಯಾರು ಮಾಡಿಕೊಳ್ಳುತ್ತಿದ್ದರು. ಆ ವೇಳೆ ಇಬ್ಬರು ಅಪರಿಚಿತರು ಕಚೇರಿಗೆ ನುಗ್ಗಿ ಶಶಿಕಲಾ ಅವರ ಕಣ್ಣುಗಳಿಗೆ ಖಾರದ ಪುಡಿ ಎರಚಿ, ಚಾಕು ತೋರಿಸಿ ₹5 ಲಕ್ಷ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಈ ಸಂಬಂಧ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಎಎಸ್ಪಿ ಮನಿಷಾ ಮನೋಹಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-18-1550177887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಿಂದ ವಸೂಲಿ ಮಾಡಿ ಸಂಗ್ರಹಿಸಲಾಗಿದ್ದ ₹5 ಲಕ್ಷ ಹಣವನ್ನು ಹಾಡಹಗಲೇ ಕಳ್ಳರು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮಂಗಳವಾರ ಮುಳಬಾಗಿಲು ನಗರದ ಶಾಮೀರ್ ಮೊಹಲ್ಲಾದ ಸಂಘದ ಕಚೇರಿಯಲ್ಲಿ ನಡೆದಿದೆ.</p>.<p>ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳು ಪಡೆದಿದ್ದ ಸಾಲದ ಹಣವನ್ನು ವಾರದ ಕಂತಿನಲ್ಲಿ ವಸೂಲಿ ಮಾಡಿ ಸಂಘದ ಅಧಿಕಾರಿ ಶಶಿಕಲಾ ಸಂಗ್ರಹಿಸಿ, ಮುಖ್ಯ ಕಚೇರಿಗೆ ಸಾಗಿಸಲು ತಯಾರು ಮಾಡಿಕೊಳ್ಳುತ್ತಿದ್ದರು. ಆ ವೇಳೆ ಇಬ್ಬರು ಅಪರಿಚಿತರು ಕಚೇರಿಗೆ ನುಗ್ಗಿ ಶಶಿಕಲಾ ಅವರ ಕಣ್ಣುಗಳಿಗೆ ಖಾರದ ಪುಡಿ ಎರಚಿ, ಚಾಕು ತೋರಿಸಿ ₹5 ಲಕ್ಷ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ.</p>.<p>ಈ ಸಂಬಂಧ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಎಎಸ್ಪಿ ಮನಿಷಾ ಮನೋಹಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-18-1550177887</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>