<p><strong>ಕೋಲಾರ:</strong> ಕೋಲಾರ ನಗರಸಭೆಯ ನೂತನ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಬುಧವಾರ ಅಧಿಕಾರ ಸ್ವೀಕರಿಸಿದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ‘ನಗರಸಭೆಯಲ್ಲಿ ಪರಿಸ್ಥಿತಿ ಸರಿಪಡಿಸಬೇಕು ಎಂಬ ಉದ್ದೇಶದಿಂದ ಒಳ್ಳೆಯವರನ್ನು ಅಧ್ಯಕ್ಷ-ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ. ಇನ್ನು ಮುಂದೆ ಹಂತಹಂತವಾಗಿ ನಗರದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಏನೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮಾರ್ಗದರ್ಶನ ನೀಡಲಾಗುವುದು’ ಎಂದರು.</p>.<p>‘ನಗರದಲ್ಲಿನ ಹಾಸ್ಟೆಲ್ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್ಗಳಲ್ಲಿ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡುವಂತೆ ಸಲಹೆ ನೀಡಲಾಗಿದೆ’ ಎಂದು ಹೇಳಿದರು.</p>.<p>‘ಅಧಿಕಾರ ವಹಿಸಿಕೊಂಡಿರುವವರೇ ಆಡಳಿತ ನಡೆಸುತ್ತಾರೆ ಹೊರತು ಬೇರೆ ಯಾರೂ ನಡೆಸುವುದಿಲ್ಲ. ನಾವು, ಅವರ ಪತಿ ಸೇರಿದಂತೆ ಎಲ್ಲರೂ ಮಾರ್ಗದರ್ಶನ, ಸಲಹೆ ನೀಡಬಹುದೇ ಹೊರತು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ’ ಎಂದು ಹೇಳಿದರು.</p>.<p>ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮ ಕೈಗೊಳ್ಳುತ್ತೇವೆ. ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. 2-3 ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕೋಲಾರ ನಗರಸಭೆಯ ನೂತನ ಅಧ್ಯಕ್ಷೆ ಲಕ್ಷ್ಮಿದೇವಮ್ಮ ಹಾಗೂ ಉಪಾಧ್ಯಕ್ಷೆ ಸಂಗೀತಾ ಬುಧವಾರ ಅಧಿಕಾರ ಸ್ವೀಕರಿಸಿದರು.</p>.<p>ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಕೊತ್ತೂರು ಮಂಜುನಾಥ್, ‘ನಗರಸಭೆಯಲ್ಲಿ ಪರಿಸ್ಥಿತಿ ಸರಿಪಡಿಸಬೇಕು ಎಂಬ ಉದ್ದೇಶದಿಂದ ಒಳ್ಳೆಯವರನ್ನು ಅಧ್ಯಕ್ಷ-ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ. ಇನ್ನು ಮುಂದೆ ಹಂತಹಂತವಾಗಿ ನಗರದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲಾಗುವುದು. ಏನೆಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮಾರ್ಗದರ್ಶನ ನೀಡಲಾಗುವುದು’ ಎಂದರು.</p>.<p>‘ನಗರದಲ್ಲಿನ ಹಾಸ್ಟೆಲ್ಗಳಿಗೆ ಭೇಟಿ ನೀಡಿ ನೀರಿನ ಸಮಸ್ಯೆ ಬಗೆಹರಿಸಬೇಕು. ಈಗಾಗಲೇ ನಗರಕ್ಕೆ ಯರಗೋಳ್ ನೀರು ಹರಿಯುತ್ತಿದ್ದು, ಎಲ್ಲ ಹಾಸ್ಟೆಲ್ಗಳಲ್ಲಿ ಬಾಕಿ ಕೆಲಸಗಳಿಗೆ ವೇಗ ನೀಡಿ ಪ್ರತಿಯೊಂದು ಮನೆಗೂ ನೀರು ಹರಿಸುವ ಕೆಲಸ ಮಾಡುವಂತೆ ಸಲಹೆ ನೀಡಲಾಗಿದೆ’ ಎಂದು ಹೇಳಿದರು.</p>.<p>‘ಅಧಿಕಾರ ವಹಿಸಿಕೊಂಡಿರುವವರೇ ಆಡಳಿತ ನಡೆಸುತ್ತಾರೆ ಹೊರತು ಬೇರೆ ಯಾರೂ ನಡೆಸುವುದಿಲ್ಲ. ನಾವು, ಅವರ ಪತಿ ಸೇರಿದಂತೆ ಎಲ್ಲರೂ ಮಾರ್ಗದರ್ಶನ, ಸಲಹೆ ನೀಡಬಹುದೇ ಹೊರತು ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಅಧ್ಯಕ್ಷರಾಗಿ ಅವರ ಕೆಲಸ ಅವರೇ ಮಾಡಿಕೊಂಡು ಹೋಗುತ್ತಾರೆ’ ಎಂದು ಹೇಳಿದರು.</p>.<p>ನಗರಸಭೆಯಲ್ಲಿ ಹಣ ನೀಡದೆ ಯಾವುದೇ ಕೆಲಸ ಆಗದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಲು ಕ್ರಮ ಕೈಗೊಳ್ಳುತ್ತೇವೆ. ಪೌರಾಯುಕ್ತರ ಹುದ್ದೆ ಖಾಲಿಯಿದ್ದು, ಒಳ್ಳೆಯವರನ್ನು ನೇಮಕ ಮಾಡಲು ಇಲಾಖೆಯ ಸಚಿವರಿಗೆ ಮನವಿ ಮಾಡಲಾಗಿದೆ. 2-3 ದಿನಗಳಲ್ಲಿ ಜನಪರ ಕಾಳಜಿಯುಳ್ಳ ವ್ಯಕ್ತಿಯನ್ನೇ ನೇಮಕ ಮಾಡಲಿದ್ದಾರೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>