<p><strong>ಕೋಲಾರ</strong>: ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದು, ಜಿಲ್ಲಾ ನ್ಯಾಯಾಲಯವು ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.</p>.<p>2017ರಲ್ಲಿ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಂಗನೂರು ಕ್ರಾಸ್ ಬಳಿ ನಿವೇಶನ ವಿಚಾರವಾಗಿ ನಡೆದಿದ್ದ ಕೊಲೆ ಪ್ರಕರಣ ಇದಾಗಿದೆ. ಆಂಧ್ರಪ್ರದೇಶದ ಪುಂಗನೂರು ಮೂಲದ ಅಗಸ್ತ್ಯ ರೆಡ್ಡಿ (84) ಎಂಬುವರನ್ನು ಕೊಲೆ ಮಾಡಲಾಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ನಾಲ್ವರು ಆರೋಪಿಗಳಾದ ರಜನಿಕುಮಾರ್, ಕೃಷ್ಣಾ ರೆಡ್ಡಿ, ಸುಬ್ರಮಣ್ಯಂ, ಜ್ಯೋತಿಷವರ್ ಎಂಬುವರು ಜೀವಾವಧಿ ಶಿಕ್ಷೆ ಒಳಗಾಗಿದ್ದಾರೆ. ಜೊತೆಗೆ ತಲಾ ₹ 25 ಸಾವಿರ ದಂಡ ವಿಧಿಸಲಾಗಿದೆ. ಕೋಲಾರ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ.</p>.<p>ಅಗಸ್ತ್ಯ ರೆಡ್ಡಿ ಪತ್ನಿ ಲಕ್ಷ್ಮಮ್ಮ ಹಾಗೂ ಮಗ ಮಾಧವ ರೆಡ್ಡಿ ಶ್ರೀನಿವಾಸಪುರ ಪೋಲಿಸರಿಗೆ ದೂರು ಸಲ್ಲಿಸಿದ್ದರು. ಶ್ರೀನಿವಾಸಪುರ ಪೊಲೀಸರು ಆರೋಪಿಗಳನ್ನ ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ವಿ.ಎಸ್.ರಮೇಶ್ ವಾದ ಮಂಡಿಸಿದ್ದರು. ಸತತ 8 ವರ್ಷ ವಿಚಾರಣೆ ನಡೆಸಿ 38 ಸಾಕ್ಷಿಗಳನ್ನ ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧೆಡೆ ಇನ್ನೂ ಕೆಲ ಪ್ರಕರಣಗಳು ದಾಖಲಾಗಿವೆ ಎಂಬುದು ಗೊತ್ತಾಗಿದೆ. ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪ ಸಾಬೀತಾಗಿದ್ದು, ಜಿಲ್ಲಾ ನ್ಯಾಯಾಲಯವು ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.</p>.<p>2017ರಲ್ಲಿ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಂಗನೂರು ಕ್ರಾಸ್ ಬಳಿ ನಿವೇಶನ ವಿಚಾರವಾಗಿ ನಡೆದಿದ್ದ ಕೊಲೆ ಪ್ರಕರಣ ಇದಾಗಿದೆ. ಆಂಧ್ರಪ್ರದೇಶದ ಪುಂಗನೂರು ಮೂಲದ ಅಗಸ್ತ್ಯ ರೆಡ್ಡಿ (84) ಎಂಬುವರನ್ನು ಕೊಲೆ ಮಾಡಲಾಗಿತ್ತು. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.</p>.<p>ನಾಲ್ವರು ಆರೋಪಿಗಳಾದ ರಜನಿಕುಮಾರ್, ಕೃಷ್ಣಾ ರೆಡ್ಡಿ, ಸುಬ್ರಮಣ್ಯಂ, ಜ್ಯೋತಿಷವರ್ ಎಂಬುವರು ಜೀವಾವಧಿ ಶಿಕ್ಷೆ ಒಳಗಾಗಿದ್ದಾರೆ. ಜೊತೆಗೆ ತಲಾ ₹ 25 ಸಾವಿರ ದಂಡ ವಿಧಿಸಲಾಗಿದೆ. ಕೋಲಾರ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ.</p>.<p>ಅಗಸ್ತ್ಯ ರೆಡ್ಡಿ ಪತ್ನಿ ಲಕ್ಷ್ಮಮ್ಮ ಹಾಗೂ ಮಗ ಮಾಧವ ರೆಡ್ಡಿ ಶ್ರೀನಿವಾಸಪುರ ಪೋಲಿಸರಿಗೆ ದೂರು ಸಲ್ಲಿಸಿದ್ದರು. ಶ್ರೀನಿವಾಸಪುರ ಪೊಲೀಸರು ಆರೋಪಿಗಳನ್ನ ಬಂಧಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತರ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ವಿ.ಎಸ್.ರಮೇಶ್ ವಾದ ಮಂಡಿಸಿದ್ದರು. ಸತತ 8 ವರ್ಷ ವಿಚಾರಣೆ ನಡೆಸಿ 38 ಸಾಕ್ಷಿಗಳನ್ನ ಪರಿಗಣಿಸಿ ಈ ಆದೇಶ ಹೊರಡಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧೆಡೆ ಇನ್ನೂ ಕೆಲ ಪ್ರಕರಣಗಳು ದಾಖಲಾಗಿವೆ ಎಂಬುದು ಗೊತ್ತಾಗಿದೆ. ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>