<p><strong>ಮುಳಬಾಗಿಲು</strong>: ನಂಗಲಿ ಗ್ರಾಮದಲ್ಲಿ ದ್ರೌಪದಮ್ಮ ಕರಗ ಮಹೋತ್ಸವ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.</p>.<p>ಪ್ರತಿ ವರ್ಷದಂತೆ ಸಾಂಪ್ರದಾಯಿಕವಾಗಿ ನಡೆದ ಕರಗ ಮಹೋತ್ಸವ ಪ್ರಯುಕ್ತ ದೇವಾಲಯದಲ್ಲಿ ಗಣಪತಿ ಪೂಜೆ, ಧ್ವಜಾರೋಹಣ, ಕಲ್ಯಾಣೋತ್ಸವ, ಹಸಿಕರಗ, ಮತ್ತಿತರ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.</p>.<p>ಬುಧವಾರ ರಾತ್ರಿ ಕರಗ ಮಹೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹವನ್ನು ವಿಶೇಷವಾದ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಬುಧವಾರ ರಾತ್ರಿಯಿಂದ ಗುರುವಾರ ಸಂಜೆವರೆಗೂ ಗ್ರಾಮದಲ್ಲಿ ಕರಗದ ಮೆರವಣಿಗೆ ನಡೆಯಿತು. ನಂತರ ಅಗ್ನಿಕುಂಡ ಪ್ರವೇಶ, ವಸಂತೋತ್ಸವ, ಒನಕೆ ಕರಗ ಮತ್ತಿತರ ವಿಶೇಷ ಆಚರಣೆ ನಡೆಯಿತು.</p>.<p>ಕರಗ ನೋಡಲು ಸುತ್ತಮುತ್ತಲಿನ ಗ್ರಾಮಗಳ ಜತೆಗೆ ನೆರೆಯ ಆಂಧ್ರಪ್ರದೇಶದ ಪಲಮನೇರು, ವಿ.ಕೋಟ, ಪುಂಗನೂರು, ರಾಮಸಮುದ್ರಂ ಮತ್ತಿತರ ಕಡೆಗಳಿಂದಲೂ ಸಾವಿರಾರು ಭಕ್ತರು ದೇವಾಲಯದ ಬಳಿ ಸೇರಿದ್ದರು. ಕೆಲವು ಯುವಕರು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. </p>.<p>ಬುಧವಾರ ಮಧ್ಯರಾತ್ರಿ ಗ್ರಾಮದ ಗಂಗಮ್ಮ, ಕೋದಂಡರಾಮಸ್ವಾಮಿ, ಚೌಡೇಶ್ವರಿ, ನಾಗದೇವತಾ, ಗಣಪತಿ, ಸಾಯಿಬಾಬ ಮತ್ತಿತರ ದೇವರ ಪಲ್ಲಕ್ಕಿ ಮೆರವಣಿಗೆ ನಡೆಯಿತು.</p>.<p>ಕರಗದಾರಿ ವಿಜಯ್ ಕುಮಾರ್ ದೇವಾಲಯದ ಮುಂಭಾಗದ ವೇದಿಕೆ ಮೇಲೆ ನೃತ್ಯ ಮಾಡಿದರು. ಭಕ್ತರಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು.</p>.<p>ದೇವಾಲಯದ ಧರ್ಮದರ್ಶಿ ತಾಂಡ್ರಾಯಪ್ಪ ಕೋದಂಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಶ್ರೀಧರ್, ಶಿನಿಗೇನಹಳ್ಳಿ ಜಿ.ಆನಂದ ರೆಡ್ಡಿ, ಶ್ರೀನಿವಾಸ ರೆಡ್ಡಿ, ಎನ್.ಸಿ.ಶೇಷಾದ್ರಿ, ಡೇರಿ ಅಮರ್, ಮುರುಗ, ಮುರುಗೇಶ್ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ನಂಗಲಿ ಗ್ರಾಮದಲ್ಲಿ ದ್ರೌಪದಮ್ಮ ಕರಗ ಮಹೋತ್ಸವ ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯಿತು.</p>.<p>ಪ್ರತಿ ವರ್ಷದಂತೆ ಸಾಂಪ್ರದಾಯಿಕವಾಗಿ ನಡೆದ ಕರಗ ಮಹೋತ್ಸವ ಪ್ರಯುಕ್ತ ದೇವಾಲಯದಲ್ಲಿ ಗಣಪತಿ ಪೂಜೆ, ಧ್ವಜಾರೋಹಣ, ಕಲ್ಯಾಣೋತ್ಸವ, ಹಸಿಕರಗ, ಮತ್ತಿತರ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.</p>.<p>ಬುಧವಾರ ರಾತ್ರಿ ಕರಗ ಮಹೋತ್ಸವ ಪ್ರಯುಕ್ತ ದೇವರ ಮೂಲ ವಿಗ್ರಹವನ್ನು ವಿಶೇಷವಾದ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ಬುಧವಾರ ರಾತ್ರಿಯಿಂದ ಗುರುವಾರ ಸಂಜೆವರೆಗೂ ಗ್ರಾಮದಲ್ಲಿ ಕರಗದ ಮೆರವಣಿಗೆ ನಡೆಯಿತು. ನಂತರ ಅಗ್ನಿಕುಂಡ ಪ್ರವೇಶ, ವಸಂತೋತ್ಸವ, ಒನಕೆ ಕರಗ ಮತ್ತಿತರ ವಿಶೇಷ ಆಚರಣೆ ನಡೆಯಿತು.</p>.<p>ಕರಗ ನೋಡಲು ಸುತ್ತಮುತ್ತಲಿನ ಗ್ರಾಮಗಳ ಜತೆಗೆ ನೆರೆಯ ಆಂಧ್ರಪ್ರದೇಶದ ಪಲಮನೇರು, ವಿ.ಕೋಟ, ಪುಂಗನೂರು, ರಾಮಸಮುದ್ರಂ ಮತ್ತಿತರ ಕಡೆಗಳಿಂದಲೂ ಸಾವಿರಾರು ಭಕ್ತರು ದೇವಾಲಯದ ಬಳಿ ಸೇರಿದ್ದರು. ಕೆಲವು ಯುವಕರು ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. </p>.<p>ಬುಧವಾರ ಮಧ್ಯರಾತ್ರಿ ಗ್ರಾಮದ ಗಂಗಮ್ಮ, ಕೋದಂಡರಾಮಸ್ವಾಮಿ, ಚೌಡೇಶ್ವರಿ, ನಾಗದೇವತಾ, ಗಣಪತಿ, ಸಾಯಿಬಾಬ ಮತ್ತಿತರ ದೇವರ ಪಲ್ಲಕ್ಕಿ ಮೆರವಣಿಗೆ ನಡೆಯಿತು.</p>.<p>ಕರಗದಾರಿ ವಿಜಯ್ ಕುಮಾರ್ ದೇವಾಲಯದ ಮುಂಭಾಗದ ವೇದಿಕೆ ಮೇಲೆ ನೃತ್ಯ ಮಾಡಿದರು. ಭಕ್ತರಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು.</p>.<p>ದೇವಾಲಯದ ಧರ್ಮದರ್ಶಿ ತಾಂಡ್ರಾಯಪ್ಪ ಕೋದಂಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಶ್ರೀಧರ್, ಶಿನಿಗೇನಹಳ್ಳಿ ಜಿ.ಆನಂದ ರೆಡ್ಡಿ, ಶ್ರೀನಿವಾಸ ರೆಡ್ಡಿ, ಎನ್.ಸಿ.ಶೇಷಾದ್ರಿ, ಡೇರಿ ಅಮರ್, ಮುರುಗ, ಮುರುಗೇಶ್ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>