<p>ಕೋಲಾರ: ಜಿಲ್ಲೆಯ ಮೂರು ಸರ್ಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ (ಪಿಯು) ಕಾಲೇಜುಗಳಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಮೂರು ಪಿಯು ಕಾಲೇಜುಗಳು ಹೊಸದಾಗಿ ಸೇರ್ಪಡೆಯಾದಂತಾಗಿದೆ.</p>.<p>ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್), ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಪಿಯು ಕಾಲೇಜು ಆಗಿ ಮೇಲ್ದರ್ಜೆಗೇರಿಸಲಾಗಿದೆ. ಕೆಜಿಎಫ್ ತಾಲ್ಲೂಕಿನ ಕ್ಯಾಸಂಬಳ್ಳಿಗೂ ಪಿಯು ಕಾಲೇಜು ಲಭಿಸಿದೆ.</p>.<p>ಈ ಭಾಗದಲ್ಲಿ ಪಿಯು ಕಾಲೇಜು ಆರಂಭಿಸಬೇಕೆಂದು ಬಹಳ ವರ್ಷಗಳಿಂದ ಹೋರಾಟ ನಡೆಯುತಿತ್ತು. ಇದೀಗ ಆ ಹೋರಾಟಕ್ಕೆ ಫಲ ಲಭಿಸಿದ್ದು, ಗ್ರಾಮೀಣ ಪ್ರದೇಶದಲ್ಲಿ ಪಿಯು ಶಿಕ್ಷಣಕ್ಕೆ ಅವಕಾಶ ಸಿಕ್ಕಂತಾಗಿದೆ. ಇಲ್ಲಿನ ಸುತ್ತಮುತ್ತಲ ಗ್ರಾಮಗಳ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಜೂನ್ 1ರಿಂದಲೇ ಪ್ರಥಮ ಪಿಯು ವಾಣಿಜ್ಯ ವಿಭಾಗದ ದಾಖಲಾತಿ ಮಾಡಿಕೊಳ್ಳಲಾಗುತ್ತದೆ.</p>.<p>ಹೊಸ ಕಾಲೇಜು ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದರು. ಇದನ್ನು ಈಗ ಅನುಷ್ಠಾನಕ್ಕೆ ತರಲಾಗಿದೆ. ರಾಜ್ಯದ ಒಟ್ಟು 39 ಪ್ರೌಢಶಾಲೆಗಳು ಪಿಯು ಕಾಲೇಜುಗಳಾಗಿ ಉನ್ನತೀಕರಿಸಿದ್ದು, ಜಿಲ್ಲೆಗೆ ಮೂರು ಕಾಲೇಜು ಲಭಿಸಿವೆ.</p>.<p>ಜಿಲ್ಲೆಯಲ್ಲಿ ಈವರೆಗೆ 35 ಸರ್ಕಾರಿ ಪಿಯು ಕಾಲೇಜುಗಳಿದ್ದವು. ಹೊಸ ಮೂರು ಕಾಲೇಜುಗಳೊಂದಿಗೆ ಈ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.</p>.<p>ವಾಣಿಜ್ಯ ವಿಭಾಗ: ಪ್ರಸಕ್ತ 2026–27ನೇ ಸಾಲಿನಿಂದಲೇ ಈ ಪಿಯು ಕಾಲೇಜುಗಳಲ್ಲಿ ವಾಣಿಜ್ಯ ವಿಭಾಗ ಆರಂಭಿಸಲಾಗುತ್ತದೆ. ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಇಬಿಎಸಿಎಸ್ (ಅರ್ಥಶಾಸ್ತ್ರ, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ ಹಾಗೂ ಕಂಪ್ಯೂಟರ್ ವಿಜ್ಞಾನ) ಸಂಯೋಜನೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.</p>.<p>ಈ ಕಾಲೇಜುಗಳಲ್ಲಿ ಬೋಧನಾ ಪ್ರಕ್ರಿಯೆಗೆ ಅನುಕೂಲ ಆಗುವಂತೆ, ಜಿಲ್ಲೆಯ ಇತರ ಕಡೆಗಳಲ್ಲಿ ಕಡಿಮೆ ಕಾರ್ಯಭಾರವಿರುವ ಉಪನ್ಯಾಸಕರನ್ನು ನಿಯಮಾನುಸಾರ ಈ ಕಾಲೇಜುಗಳಿಗೆ ನಿಯೋಜಿಸಲು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.</p>.<p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸಮೀಪದಲ್ಲೇ ಪಿಯು ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಇದರಿಂದಾಗಿ, ಆ ಭಾಗದ ವಿದ್ಯಾರ್ಥಿಗಳು ದೂರದ ನಗರಗಳಿಗೆ ಹೋಗುವುದು ತಪ್ಪುತ್ತದೆ. ಆಯಾ ಪ್ರೌಢಶಾಲೆಯಲ್ಲಿ ಕಲಿತವರು, ಅಲ್ಲಿಯೇ ಪಿಯು ಕಾಲೇಜು ಶಿಕ್ಷಣ ಪಡೆಯುವುದಕ್ಕೂ ಅವಕಾಶವಿದೆ. ಆದರೆ, ಇಲ್ಲಿ ಸದ್ಯಕ್ಕೆ ಕಲಾ ಹಾಗೂ ವಿಜ್ಞಾನ ವಿಭಾಗದ ಅವಕಾಶ ಇಲ್ಲ. ಜೊತೆಗೆ ಈ ಪ್ರೌಢಶಾಲೆಗಳಲ್ಲಿ, ಪಿಯು ಶಿಕ್ಷಣಕ್ಕೆ ತಕ್ಕಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.</p>.<p>ಉನ್ನತೀಕರಣಕ್ಕೆ ಆಯ್ಕೆ ಮಾಡುವ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕನಿಷ್ಠ 40 ವಿದ್ಯಾರ್ಥಿಗಳು ಕಲಿಯುತ್ತಿರಬೇಕು ಹಾಗೂ 15 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳು ಇರಬಾರದು ಎಂದು ಸರ್ಕಾರ ನಿಯಮ ರೂಪಿಸಿತ್ತು.</p>.<p>ಬಹಳ ವರ್ಷಗಳ ಹೋರಾಟದ ನಂತರ ಕ್ಯಾಸಂಬಳ್ಳಿ ಗ್ರಾಮಕ್ಕೆ ಪಿಯು ಕಾಲೇಜು ಪ್ರಾರಂಭೋತ್ಸವಕ್ಕೆ ಅನುಮೋದನೆ ಸಿಕ್ಕಿದೆ. ಶೂನ್ಯ ದಾಖಲಾತಿ ಇದ್ದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರ ಗ್ರಾಮದಲ್ಲಿದ್ದ ಪಿಯು ಕಾಲೇಜನ್ನು ಇಲ್ಲಿಗೆ ವರ್ಗಾಯಿಸಲು 2025ರ ಆಗಸ್ಟ್ನಲ್ಲಿಯೇ ಸರ್ಕಾರ ಅನುಮತಿ ನೀಡಿತ್ತು.</p>.<p>‘ಕ್ಯಾಸಂಬಳ್ಳಿಯ ಹೊಸ ಕಾಲೇಜಿನಲ್ಲಿ ಕಲಾ ವಿಭಾಗ ಕೂಡ ಆರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯಕ್ಕೆ ವಾಣಿಜ್ಯ ವಿಭಾಗಕ್ಕೆ ಮಾತ್ರ ಅನುಮತಿ ಲಭಿಸಿದೆ’ ಎಂದು ಡಿಡಿಪಿಯು ರಾಜಶೇಖರ್ ಪಟ್ಟಣಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕ್ಯಾಲನೂರು ಹಾಗೂ ಸುತ್ತಮುತ್ತಲಿನ ಗ್ರಾಮದವರು ಎಸ್ಎಸ್ಎಲ್ಸಿ ಬಳಿಕ ಮುಂದಿನ ವಿದ್ಯಾಭ್ಯಾಸಕ್ಕಾಗಿ ಹರಸಾಹಸಪಡಬೇಕಾಗಿತ್ತು. ಹೆಣ್ಣು ಮಕ್ಕಳು ಉನ್ನತ ಶಿಕ್ಷಣಕ್ಕಾಗಿ 25 ಕಿ.ಮೀ. ದೂರದಲ್ಲಿರುವ ಕೋಲಾರ ಜಿಲ್ಲಾ ಕೇಂದ್ರ ಅಥವಾ 15 ಕಿ.ಮೀ ದೂರದ ವೇಮಗಲ್ ಪಟ್ಟಣಕ್ಕೆ ಪ್ರಯಾಣಿಸಬೇಕಿತ್ತು. ಈಗ ತಮ್ಮದೇ ಗ್ರಾಮದಲ್ಲಿ ಪಿಯು ಕಾಲೇಜು ಆರಂಭವಾಗುತ್ತಿರುವುದರಿಂದ ಜನರು ಖುಷಿ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-18-1650852709</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಜಿಲ್ಲೆಯ ಮೂರು ಸರ್ಕಾರಿ ಪ್ರೌಢಶಾಲೆಗಳನ್ನು ಪದವಿಪೂರ್ವ (ಪಿಯು) ಕಾಲೇಜುಗಳಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರೊಂದಿಗೆ ಹೆಚ್ಚುವರಿಯಾಗಿ ಮೂರು ಪಿಯು ಕಾಲೇಜುಗಳು ಹೊಸದಾಗಿ ಸೇರ್ಪಡೆಯಾದಂತಾಗಿದೆ.</p>.<p>ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿಯ ಕ್ಯಾಲನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್), ಶ್ರೀನಿವಾಸಪುರ ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನು ಪಿಯು ಕಾಲೇಜು ಆಗಿ ಮೇಲ್ದರ್ಜೆಗೇರಿಸಲಾಗಿದೆ. ಕೆಜಿಎಫ್ ತಾಲ್ಲೂಕಿನ ಕ್ಯಾಸಂಬಳ್ಳಿಗೂ ಪಿಯು ಕಾಲೇಜು ಲಭಿಸಿದೆ.</p>.<p>ಈ ಭಾಗದಲ್ಲಿ ಪಿಯು ಕಾಲೇಜು ಆರಂಭಿಸಬೇಕೆಂದು ಬಹಳ ವರ್ಷಗಳಿಂದ ಹೋರಾಟ ನಡೆಯುತಿತ್ತು. ಇದೀಗ ಆ ಹೋರಾಟಕ್ಕೆ ಫಲ ಲಭಿಸಿದ್ದು, ಗ್ರಾಮೀಣ ಪ್ರದೇಶದಲ್ಲಿ ಪಿಯು ಶಿಕ್ಷಣಕ್ಕೆ ಅವಕಾಶ ಸಿಕ್ಕಂತಾಗಿದೆ. ಇಲ್ಲಿನ ಸುತ್ತಮುತ್ತಲ ಗ್ರಾಮಗಳ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಳ್ಳಬಹುದಾಗಿದೆ. ಜೂನ್ 1ರಿಂದಲೇ ಪ್ರಥಮ ಪಿಯು ವಾಣಿಜ್ಯ ವಿಭಾಗದ ದಾಖಲಾತಿ ಮಾಡಿಕೊಳ್ಳಲಾಗುತ್ತದೆ.</p>.<p>ಹೊಸ ಕಾಲೇಜು ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 2026–27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಘೋಷಿಸಿದ್ದರು. ಇದನ್ನು ಈಗ ಅನುಷ್ಠಾನಕ್ಕೆ ತರಲಾಗಿದೆ. ರಾಜ್ಯದ ಒಟ್ಟು 39 ಪ್ರೌಢಶಾಲೆಗಳು ಪಿಯು ಕಾಲೇಜುಗಳಾಗಿ ಉನ್ನತೀಕರಿಸಿದ್ದು, ಜಿಲ್ಲೆಗೆ ಮೂರು ಕಾಲೇಜು ಲಭಿಸಿವೆ.</p>.<p>ಜಿಲ್ಲೆಯಲ್ಲಿ ಈವರೆಗೆ 35 ಸರ್ಕಾರಿ ಪಿಯು ಕಾಲೇಜುಗಳಿದ್ದವು. ಹೊಸ ಮೂರು ಕಾಲೇಜುಗಳೊಂದಿಗೆ ಈ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.</p>.<p>ವಾಣಿಜ್ಯ ವಿಭಾಗ: ಪ್ರಸಕ್ತ 2026–27ನೇ ಸಾಲಿನಿಂದಲೇ ಈ ಪಿಯು ಕಾಲೇಜುಗಳಲ್ಲಿ ವಾಣಿಜ್ಯ ವಿಭಾಗ ಆರಂಭಿಸಲಾಗುತ್ತದೆ. ಪ್ರಥಮ ಭಾಷೆ ಕನ್ನಡ, ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಇಬಿಎಸಿಎಸ್ (ಅರ್ಥಶಾಸ್ತ್ರ, ಬಿಸಿನೆಸ್ ಸ್ಟಡೀಸ್, ಅಕೌಂಟೆನ್ಸಿ ಹಾಗೂ ಕಂಪ್ಯೂಟರ್ ವಿಜ್ಞಾನ) ಸಂಯೋಜನೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.</p>.<p>ಈ ಕಾಲೇಜುಗಳಲ್ಲಿ ಬೋಧನಾ ಪ್ರಕ್ರಿಯೆಗೆ ಅನುಕೂಲ ಆಗುವಂತೆ, ಜಿಲ್ಲೆಯ ಇತರ ಕಡೆಗಳಲ್ಲಿ ಕಡಿಮೆ ಕಾರ್ಯಭಾರವಿರುವ ಉಪನ್ಯಾಸಕರನ್ನು ನಿಯಮಾನುಸಾರ ಈ ಕಾಲೇಜುಗಳಿಗೆ ನಿಯೋಜಿಸಲು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ.</p>.<p>ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತಮ್ಮ ಸಮೀಪದಲ್ಲೇ ಪಿಯು ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ಇದರಿಂದಾಗಿ, ಆ ಭಾಗದ ವಿದ್ಯಾರ್ಥಿಗಳು ದೂರದ ನಗರಗಳಿಗೆ ಹೋಗುವುದು ತಪ್ಪುತ್ತದೆ. ಆಯಾ ಪ್ರೌಢಶಾಲೆಯಲ್ಲಿ ಕಲಿತವರು, ಅಲ್ಲಿಯೇ ಪಿಯು ಕಾಲೇಜು ಶಿಕ್ಷಣ ಪಡೆಯುವುದಕ್ಕೂ ಅವಕಾಶವಿದೆ. ಆದರೆ, ಇಲ್ಲಿ ಸದ್ಯಕ್ಕೆ ಕಲಾ ಹಾಗೂ ವಿಜ್ಞಾನ ವಿಭಾಗದ ಅವಕಾಶ ಇಲ್ಲ. ಜೊತೆಗೆ ಈ ಪ್ರೌಢಶಾಲೆಗಳಲ್ಲಿ, ಪಿಯು ಶಿಕ್ಷಣಕ್ಕೆ ತಕ್ಕಂತೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.</p>.<p>ಉನ್ನತೀಕರಣಕ್ಕೆ ಆಯ್ಕೆ ಮಾಡುವ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕನಿಷ್ಠ 40 ವಿದ್ಯಾರ್ಥಿಗಳು ಕಲಿಯುತ್ತಿರಬೇಕು ಹಾಗೂ 15 ಕಿ.ಮೀ. ವ್ಯಾಪ್ತಿಯಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳು ಇರಬಾರದು ಎಂದು ಸರ್ಕಾರ ನಿಯಮ ರೂಪಿಸಿತ್ತು.</p>.<p>ಬಹಳ ವರ್ಷಗಳ ಹೋರಾಟದ ನಂತರ ಕ್ಯಾಸಂಬಳ್ಳಿ ಗ್ರಾಮಕ್ಕೆ ಪಿಯು ಕಾಲೇಜು ಪ್ರಾರಂಭೋತ್ಸವಕ್ಕೆ ಅನುಮೋದನೆ ಸಿಕ್ಕಿದೆ. ಶೂನ್ಯ ದಾಖಲಾತಿ ಇದ್ದ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರ ಗ್ರಾಮದಲ್ಲಿದ್ದ ಪಿಯು ಕಾಲೇಜನ್ನು ಇಲ್ಲಿಗೆ ವರ್ಗಾಯಿಸಲು 2025ರ ಆಗಸ್ಟ್ನಲ್ಲಿಯೇ ಸರ್ಕಾರ ಅನುಮತಿ ನೀಡಿತ್ತು.</p>.<p>‘ಕ್ಯಾಸಂಬಳ್ಳಿಯ ಹೊಸ ಕಾಲೇಜಿನಲ್ಲಿ ಕಲಾ ವಿಭಾಗ ಕೂಡ ಆರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಸದ್ಯಕ್ಕೆ ವಾಣಿಜ್ಯ ವಿಭಾಗಕ್ಕೆ ಮಾತ್ರ ಅನುಮತಿ ಲಭಿಸಿದೆ’ ಎಂದು ಡಿಡಿಪಿಯು ರಾಜಶೇಖರ್ ಪಟ್ಟಣಶೆಟ್ಟಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಕ್ಯಾಲನೂರು ಹಾಗೂ ಸುತ್ತಮುತ್ತಲಿನ ಗ್ರಾಮದವರು ಎಸ್ಎಸ್ಎಲ್ಸಿ ಬಳಿಕ ಮುಂದಿನ ವಿದ್ಯಾಭ್ಯಾಸಕ್ಕಾಗಿ ಹರಸಾಹಸಪಡಬೇಕಾಗಿತ್ತು. ಹೆಣ್ಣು ಮಕ್ಕಳು ಉನ್ನತ ಶಿಕ್ಷಣಕ್ಕಾಗಿ 25 ಕಿ.ಮೀ. ದೂರದಲ್ಲಿರುವ ಕೋಲಾರ ಜಿಲ್ಲಾ ಕೇಂದ್ರ ಅಥವಾ 15 ಕಿ.ಮೀ ದೂರದ ವೇಮಗಲ್ ಪಟ್ಟಣಕ್ಕೆ ಪ್ರಯಾಣಿಸಬೇಕಿತ್ತು. ಈಗ ತಮ್ಮದೇ ಗ್ರಾಮದಲ್ಲಿ ಪಿಯು ಕಾಲೇಜು ಆರಂಭವಾಗುತ್ತಿರುವುದರಿಂದ ಜನರು ಖುಷಿ ವ್ಯಕ್ತಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-18-1650852709</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>