<p>ಕೋಲಾರ: ಓದುಗ ಕೇಳುಗ ನಮ್ಮ ನಡೆ ಬಳಗ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಿರಿಗನ್ನಡ ಪುಸ್ತಕ ಮಳಿಗೆ ಆಶ್ರಯದಲ್ಲಿ ಓದುಗ ಕೇಳುಗ ನಮ್ಮ ನಡೆಯ 50ನೇ ತಿಂಗಳ ಸಾಹಿತ್ಯ ಸಂಭ್ರಮ-ಸಂವೇದನೆ ಸಂವಹನ ಕೃತಿ ಬಿಡುಗಡೆ ಸಮಾರಂಭ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ನಡೆಯಲಿದೆ.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೃತಿ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪಾ ಕೃತಿ ಕುರಿತು ಮಾತನಾಡಲಿದ್ದಾರೆ. ವಿಜ್ಞಾನ ಲೇಖಕ ಹಾಗೂ ಪರಿಸರ ಚಿಂತಕ ನಾಗೇಶ ಹೆಗಡೆ ಅಧ್ಯಕ್ಷತೆ ವಹಿಸುವರು.</p>.<p>ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ನಿವೃತ್ತ ಪ್ರಾಧ್ಯಾಪಕ ಹಾಗೂ ಕೃತಿಯ ಸಂಪಾದಕ ಎಂ.ಮುನಿರತ್ನಪ್ಪ ಭಾಗವಹಿಸುವರು.</p>.<p>‘ಎಲ್ಲರ ಸಹಕಾರ ಮತ್ತು ಬೆಂಬಲದಿಂದಾಗಿ ಓದುಗ-ಕೇಳುಗ ಕಾರ್ಯಕ್ರಮ 49 ತಿಂಗಳು ದಾಟಿ 50 ರ ಸಂಭ್ರಮದ ಹೊಸ್ತಿಲಲ್ಲಿದೆ. ಈವರೆಗೆ ಉಪನ್ಯಾಸ ನೀಡಿದವರ ಲೇಖನಗಳ ಮಾಲೆಯ ಪುಸ್ತಕವನ್ನು ಹೊರತರಲಾಗುತ್ತಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಓದುಗ ಕೇಳುಗ ನಮ್ಮ ನಡೆ ಬಳಗ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಿರಿಗನ್ನಡ ಪುಸ್ತಕ ಮಳಿಗೆ ಆಶ್ರಯದಲ್ಲಿ ಓದುಗ ಕೇಳುಗ ನಮ್ಮ ನಡೆಯ 50ನೇ ತಿಂಗಳ ಸಾಹಿತ್ಯ ಸಂಭ್ರಮ-ಸಂವೇದನೆ ಸಂವಹನ ಕೃತಿ ಬಿಡುಗಡೆ ಸಮಾರಂಭ ಭಾನುವಾರ ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ನಡೆಯಲಿದೆ.</p>.<p>ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಕೃತಿ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್.ಪುಷ್ಪಾ ಕೃತಿ ಕುರಿತು ಮಾತನಾಡಲಿದ್ದಾರೆ. ವಿಜ್ಞಾನ ಲೇಖಕ ಹಾಗೂ ಪರಿಸರ ಚಿಂತಕ ನಾಗೇಶ ಹೆಗಡೆ ಅಧ್ಯಕ್ಷತೆ ವಹಿಸುವರು.</p>.<p>ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ನಿವೃತ್ತ ಪ್ರಾಧ್ಯಾಪಕ ಹಾಗೂ ಕೃತಿಯ ಸಂಪಾದಕ ಎಂ.ಮುನಿರತ್ನಪ್ಪ ಭಾಗವಹಿಸುವರು.</p>.<p>‘ಎಲ್ಲರ ಸಹಕಾರ ಮತ್ತು ಬೆಂಬಲದಿಂದಾಗಿ ಓದುಗ-ಕೇಳುಗ ಕಾರ್ಯಕ್ರಮ 49 ತಿಂಗಳು ದಾಟಿ 50 ರ ಸಂಭ್ರಮದ ಹೊಸ್ತಿಲಲ್ಲಿದೆ. ಈವರೆಗೆ ಉಪನ್ಯಾಸ ನೀಡಿದವರ ಲೇಖನಗಳ ಮಾಲೆಯ ಪುಸ್ತಕವನ್ನು ಹೊರತರಲಾಗುತ್ತಿದೆ’ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>