<p><strong>ಬಂಗಾರಪೇಟೆ</strong>: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಬ್ಯಾಟರಾಯಸ್ವಾಮಿ ದೇವಾಲಯದ ಯಾತ್ರಿಕ ಭವನ ಕಾಮಗಾರಿಯು ಅರ್ಥಕ್ಕೆ ನಿಂತಿದ್ದು, ಕಟ್ಟಡ ಪಾಳು ಬಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.</p>.<p>ದೂರದ ಊರುಗಳಿಂದ ಬ್ಯಾಟರಾಯಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿದ್ದ ಯಾತ್ರಿಕರ ಭವನವು ಕಳೆದ ಮೂರು ವರ್ಷಗಳಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಸರ್ಕಾರವು ಲಕ್ಷಾಂತರ ವೆಚ್ಚದಲ್ಲಿ ಕಾಮಗಾರಿಯನ್ನು ಆರಂಭಿಸಲಾಯಿತು. ಭರದಿಂದ ಸಾಗಿದ ಕಟ್ಟಡ ನಿರ್ಮಾಣ ಕಾರ್ಯವು ಚಾವಣಿ ಮುಕ್ತಾಯದ ಹಂತಕ್ಕೆ ಬಂದು ಸ್ಥಗಿತಗೊಂಡಿದೆ. ಹಾಗಾಗಿ ಈ ಕಟ್ಟಡವು ಸದ್ಯ ಅನೈತಿಕ ಚಟುವಟಿಕೆ ಹಾಗೂ ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಹಾಗಾಗಿ ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.</p>.<p>ಕಾಮಗಾರಿ ನಿಲ್ಲಲು ಗುತ್ತಿಗೆದಾರರ ನಿರ್ಲಕ್ಷ್ಯವೋ ಅಥವಾ ಅನುದಾನದ ಕೊರತೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸಾರ್ವಜನಿಕರ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.</p>.<p>ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಯಾತ್ರಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಲ್ಲದಿದ್ದಲ್ಲಿ ಮುಂಬರುವ ದಿನಗಳಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.</p>.<p>ನಾವು ಪ್ರತಿ ವರ್ಷ ಇಲ್ಲಿಗೆ ಬರುತ್ತೇವೆ. ಖಾಸಗಿ ಹೋಟೆಲ್ಗಳಲ್ಲಿ ಉಳಿಯಲು ಹೆಚ್ಚಿನ ಹಣ ಕೇಳುತ್ತಾರೆ. ಯಾತ್ರಿಕರ ಭವನ ನಿರ್ಮಾಣವಾದರೆ ನಮಗೆ ತುಂಬಾ ಅನುಕೂಲವಾಗುತ್ತಿತ್ತು. ಆದರೆ, ಮೂರು ವರ್ಷ ಕಳೆದರೂ ಕಟ್ಟಡದ ಕೆಲಸ ಮಾತ್ರ ಮುಗಿಯುತ್ತಿಲ್ಲ ಎಂದು ಪ್ರವಾಸಿಗರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><blockquote>ಯಾತ್ರಿಕರ ಭವನವು ಕಳೆದ ಮೂರು ವರ್ಷಗಳಿಂದ ಅರ್ಧಕ್ಕೆ ಸ್ಥಗಿತಗೊಂಡಿರುವ ಕುರಿತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ.</blockquote><span class="attribution">– ಶ್ರೀನಿವಾಸ್ ರೆಡ್ಡಿ, ಕಾರ್ಯನಿರ್ವಾಹಕ ಅಧಿಕಾರಿ ಧಾರ್ಮಿಕ ದತ್ತಿ ಇಲಾಖೆ ಬಂಗಾರಪೇಟೆ </span></div>.<div><blockquote>ಜನ ಸಾಮಾನ್ಯರ ತೆರಿಗೆ ಹಣ ಈ ರೀತಿ ವ್ಯರ್ಥವಾಗುತ್ತಿರುವುದು ವಿಷಾದನೀಯ. ಸರಿಯಾದ ಉಸ್ತುವಾರಿ ಇಲ್ಲದ ಕಾರಣ ಅರ್ಧ ನಿರ್ಮಾಣವಾಗಿರುವ ಕಟ್ಟಡ ಕುಸಿಯುವ ಹಂತ ತಲುಪಿದೆ. </blockquote><span class="attribution">– ಮಂಜುನಾಥ ಎನ್, ಸ್ಥಳೀಯರು ಬ್ಯಾಟರಾಯಸ್ವಾಮಿ ಬೆಟ್ಟ </span></div>.<div><blockquote>ಜನವಸತಿ ಇಲ್ಲದೆ ಪಾಳು ಬಿದ್ದಿರುವ ಈ ಜಾಗವು ಈಗ ಕುಡುಕರ ಮತ್ತು ಕಿಡಿಗೇಡಿಗಳ ಅಡ್ಡೆಯಾಗಿ ಮಾರ್ಪಟ್ಟಿದೆ. ಇದು ಸುತ್ತಮುತ್ತಲಿನ ನಿವಾಸಿಗಳಿಗೆ ಭೀತಿ ಮೂಡಿಸಿದೆ. </blockquote><span class="attribution">– ರಾಜೇಂದ್ರ, ಸಮಾಜ ಸೇವಕ ನೆರಳೆಕೆರೆ</span></div>.<div><blockquote>ಯಾತ್ರಿಕರ ಅನುಕೂಲಕ್ಕಾಗಿ ಶಾಸಕರು ಆಸಕ್ತಿ ವಹಿಸಿ ಯಾತ್ರಿಕರ ಭವನ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆದರೆ ಕಾಮಗಾರಿ ಅರ್ಧಕ್ಕೆ ನಿಂತು ಹಳ್ಳ ಹಿಡಿದಿದೆ. </blockquote><span class="attribution">– ರವೀಂದ್ರ ಕುಮಾರ್, ದೂಡ್ಡೂರು ಕರಪನಹಳ್ಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ತಾಲ್ಲೂಕಿನ ಐತಿಹಾಸಿಕ ಪ್ರಸಿದ್ಧ ಬ್ಯಾಟರಾಯಸ್ವಾಮಿ ದೇವಾಲಯದ ಯಾತ್ರಿಕ ಭವನ ಕಾಮಗಾರಿಯು ಅರ್ಥಕ್ಕೆ ನಿಂತಿದ್ದು, ಕಟ್ಟಡ ಪಾಳು ಬಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿ ಮಾರ್ಪಟ್ಟಿದೆ.</p>.<p>ದೂರದ ಊರುಗಳಿಂದ ಬ್ಯಾಟರಾಯಸ್ವಾಮಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ನಿರ್ಮಿಸಲಾಗುತ್ತಿದ್ದ ಯಾತ್ರಿಕರ ಭವನವು ಕಳೆದ ಮೂರು ವರ್ಷಗಳಿಂದ ಅರ್ಧಕ್ಕೆ ಸ್ಥಗಿತಗೊಂಡಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಸರ್ಕಾರವು ಲಕ್ಷಾಂತರ ವೆಚ್ಚದಲ್ಲಿ ಕಾಮಗಾರಿಯನ್ನು ಆರಂಭಿಸಲಾಯಿತು. ಭರದಿಂದ ಸಾಗಿದ ಕಟ್ಟಡ ನಿರ್ಮಾಣ ಕಾರ್ಯವು ಚಾವಣಿ ಮುಕ್ತಾಯದ ಹಂತಕ್ಕೆ ಬಂದು ಸ್ಥಗಿತಗೊಂಡಿದೆ. ಹಾಗಾಗಿ ಈ ಕಟ್ಟಡವು ಸದ್ಯ ಅನೈತಿಕ ಚಟುವಟಿಕೆ ಹಾಗೂ ಕುಡುಕರ ತಾಣವಾಗಿ ಮಾರ್ಪಟ್ಟಿದೆ. ಹಾಗಾಗಿ ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸಲು ಕಷ್ಟವಾಗುತ್ತಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ.</p>.<p>ಕಾಮಗಾರಿ ನಿಲ್ಲಲು ಗುತ್ತಿಗೆದಾರರ ನಿರ್ಲಕ್ಷ್ಯವೋ ಅಥವಾ ಅನುದಾನದ ಕೊರತೆಯೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮೌನ ವಹಿಸಿರುವುದು ಸಾರ್ವಜನಿಕರ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ.</p>.<p>ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಅರ್ಧಕ್ಕೆ ನಿಂತಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಯಾತ್ರಿಕರ ಬಳಕೆಗೆ ಮುಕ್ತಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇಲ್ಲದಿದ್ದಲ್ಲಿ ಮುಂಬರುವ ದಿನಗಳಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.</p>.<p>ನಾವು ಪ್ರತಿ ವರ್ಷ ಇಲ್ಲಿಗೆ ಬರುತ್ತೇವೆ. ಖಾಸಗಿ ಹೋಟೆಲ್ಗಳಲ್ಲಿ ಉಳಿಯಲು ಹೆಚ್ಚಿನ ಹಣ ಕೇಳುತ್ತಾರೆ. ಯಾತ್ರಿಕರ ಭವನ ನಿರ್ಮಾಣವಾದರೆ ನಮಗೆ ತುಂಬಾ ಅನುಕೂಲವಾಗುತ್ತಿತ್ತು. ಆದರೆ, ಮೂರು ವರ್ಷ ಕಳೆದರೂ ಕಟ್ಟಡದ ಕೆಲಸ ಮಾತ್ರ ಮುಗಿಯುತ್ತಿಲ್ಲ ಎಂದು ಪ್ರವಾಸಿಗರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><blockquote>ಯಾತ್ರಿಕರ ಭವನವು ಕಳೆದ ಮೂರು ವರ್ಷಗಳಿಂದ ಅರ್ಧಕ್ಕೆ ಸ್ಥಗಿತಗೊಂಡಿರುವ ಕುರಿತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ.</blockquote><span class="attribution">– ಶ್ರೀನಿವಾಸ್ ರೆಡ್ಡಿ, ಕಾರ್ಯನಿರ್ವಾಹಕ ಅಧಿಕಾರಿ ಧಾರ್ಮಿಕ ದತ್ತಿ ಇಲಾಖೆ ಬಂಗಾರಪೇಟೆ </span></div>.<div><blockquote>ಜನ ಸಾಮಾನ್ಯರ ತೆರಿಗೆ ಹಣ ಈ ರೀತಿ ವ್ಯರ್ಥವಾಗುತ್ತಿರುವುದು ವಿಷಾದನೀಯ. ಸರಿಯಾದ ಉಸ್ತುವಾರಿ ಇಲ್ಲದ ಕಾರಣ ಅರ್ಧ ನಿರ್ಮಾಣವಾಗಿರುವ ಕಟ್ಟಡ ಕುಸಿಯುವ ಹಂತ ತಲುಪಿದೆ. </blockquote><span class="attribution">– ಮಂಜುನಾಥ ಎನ್, ಸ್ಥಳೀಯರು ಬ್ಯಾಟರಾಯಸ್ವಾಮಿ ಬೆಟ್ಟ </span></div>.<div><blockquote>ಜನವಸತಿ ಇಲ್ಲದೆ ಪಾಳು ಬಿದ್ದಿರುವ ಈ ಜಾಗವು ಈಗ ಕುಡುಕರ ಮತ್ತು ಕಿಡಿಗೇಡಿಗಳ ಅಡ್ಡೆಯಾಗಿ ಮಾರ್ಪಟ್ಟಿದೆ. ಇದು ಸುತ್ತಮುತ್ತಲಿನ ನಿವಾಸಿಗಳಿಗೆ ಭೀತಿ ಮೂಡಿಸಿದೆ. </blockquote><span class="attribution">– ರಾಜೇಂದ್ರ, ಸಮಾಜ ಸೇವಕ ನೆರಳೆಕೆರೆ</span></div>.<div><blockquote>ಯಾತ್ರಿಕರ ಅನುಕೂಲಕ್ಕಾಗಿ ಶಾಸಕರು ಆಸಕ್ತಿ ವಹಿಸಿ ಯಾತ್ರಿಕರ ಭವನ ನಿರ್ಮಾಣಕ್ಕೆ ಚಾಲನೆ ನೀಡಿದ್ದರು. ಆದರೆ ಕಾಮಗಾರಿ ಅರ್ಧಕ್ಕೆ ನಿಂತು ಹಳ್ಳ ಹಿಡಿದಿದೆ. </blockquote><span class="attribution">– ರವೀಂದ್ರ ಕುಮಾರ್, ದೂಡ್ಡೂರು ಕರಪನಹಳ್ಳಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>