<p>ಬೇತಮಂಗಲ: ಸಮೀಪದ ಎನ್.ಜಿ.ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಗಾನಹಳ್ಳಿ ಗ್ರಾಮದ ಮುಖ್ಯ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆಗೆ ಡಾಂಬರು ಹಾಕಿಸಬೇಕೆಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.</p>.<p>ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿ.ಕೋಟ ಮುಖ್ಯರಸ್ತೆಯಿಂದ ಪೂಗಾನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 2 ಕಿ.ಮೀ ರಸ್ತೆಯು 15-20 ವರ್ಷಗಳ ಹಿಂದೆ ಡಾಂಬರೀಕರಣಗೊಂಡಿತ್ತು. ಆದರೆ, ಅಂದಿನಿಂದ ಇಂದಿನವರೆಗೆ ರಸ್ತೆಗೆ ಡಾಂಬರು ಹಾಕಿಲ್ಲ. ಹಾಗಾಗಿ ರಸ್ತೆಯು ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಹಾಗಾಗಿ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ರಸ್ತೆ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣ ಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-18-1100435965</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇತಮಂಗಲ: ಸಮೀಪದ ಎನ್.ಜಿ.ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂಗಾನಹಳ್ಳಿ ಗ್ರಾಮದ ಮುಖ್ಯ ರಸ್ತೆಯು ಸಂಪೂರ್ಣವಾಗಿ ಹಾಳಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆಗೆ ಡಾಂಬರು ಹಾಕಿಸಬೇಕೆಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ.</p>.<p>ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿ.ಕೋಟ ಮುಖ್ಯರಸ್ತೆಯಿಂದ ಪೂಗಾನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 2 ಕಿ.ಮೀ ರಸ್ತೆಯು 15-20 ವರ್ಷಗಳ ಹಿಂದೆ ಡಾಂಬರೀಕರಣಗೊಂಡಿತ್ತು. ಆದರೆ, ಅಂದಿನಿಂದ ಇಂದಿನವರೆಗೆ ರಸ್ತೆಗೆ ಡಾಂಬರು ಹಾಕಿಲ್ಲ. ಹಾಗಾಗಿ ರಸ್ತೆಯು ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಸಂಚರಿಸಲು ಹರಸಾಹಸ ಪಡುವಂತಾಗಿದೆ. ಹಾಗಾಗಿ ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಿ ರಸ್ತೆ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿದ್ದಾರೆ.</p>.<p>ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣ ಸ್ವಾಮಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260408-18-1100435965</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>