<p><strong>ಕೆಜಿಎಫ್:</strong> ಮಹಿಳೆ ಕೇವಲ ಕುಟುಂಬದ ಕಣ್ಣಲ್ಲ, ಇಡೀ ಸಮಾಜದ ಪ್ರೇರಣಾ ಶಕ್ತಿ. ಅವರಿಗೆ ಸೂಕ್ತ ಅವಕಾಶ ಮತ್ತು ವೇದಿಕೆ ಕಲ್ಪಿಸುವುದು ನಾಗರಿಕ ಸಮಾಜದ ಕರ್ತವ್ಯ ಎಂದು ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ರಾಮಚಂದ್ರಪ್ಪ ಹೇಳಿದರು.</p>.<p>ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಸೋಮವಾರ ಗಂಗಾನಿಕೇತನ ಫೌಂಡೇಷನ್ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾದದ್ದು. ಮಹಿಳಾ ಸಬಲೀಕರಣದಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದರು.</p>.<p>ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲರಾದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಲಿಂಗ ತಾರತಮ್ಯ ಹೋಗಲಾಡಿಸಲು ಮಹಿಳಾ ಸಬಲೀಕರಣವನ್ನು ಬೆಂಬಲಿಸಲು ಸಮಾಜಕ್ಕೆ ಮಹಿಳೆಯರು ನೀಡಿರುವ ಕೊಡುಗೆಗಳನ್ನು ಸ್ಮರಿಸುವ ಅವಶ್ಯಕತೆ ಇದೆ ಎಂದು ಹೇಳಿದರು.</p>.<p>ಶಿಕ್ಷಣ, ಆರೋಗ್ಯ, ಸಮಾಜ ಸೇವೆ ಮತ್ತು ಕೃಷಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಮತ್ತು ಅಸಂಘಟಿತ ಮಹಿಳಾ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು.</p>.<p>ಮುಖ್ಯ ಶಿಕ್ಷಕಿ ನುಸರತ್, ಗ್ರಾಪಂ ಮಾಜಿ ಉಪಾಧ್ಯಕ್ಷೆ ಶ್ವೇತಾ ಅಶ್ವಥ್, ಕೇಶವ ರೆಡ್ಡಿ, ಪಿ.ಎಂ.ಕೃಷ್ಣಪ್ಪ, ಮುನಿರಾಜು, ಮುನಿ ಕೃಷ್ಣಪ್ಪ, ಪ್ರಭಾಕರ್, ವೀರವೆಂಕಟಪ್ಪ, ವಿ.ಬಿ.ದೇಶಪಾಂಡೆ. ಮದಿರಪ್ಪ.ವಿ.ಮಂಜುನಾಥ್ ಗೌಡ, ಅನಿಲ್ ಕುಮಾರ್, ಚಂದ್ರಶೇಖರ್, ದುರ್ಗಮ್ಮ, ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಮಹಿಳೆ ಕೇವಲ ಕುಟುಂಬದ ಕಣ್ಣಲ್ಲ, ಇಡೀ ಸಮಾಜದ ಪ್ರೇರಣಾ ಶಕ್ತಿ. ಅವರಿಗೆ ಸೂಕ್ತ ಅವಕಾಶ ಮತ್ತು ವೇದಿಕೆ ಕಲ್ಪಿಸುವುದು ನಾಗರಿಕ ಸಮಾಜದ ಕರ್ತವ್ಯ ಎಂದು ಸಿರಿಗನ್ನಡ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ರಾಮಚಂದ್ರಪ್ಪ ಹೇಳಿದರು.</p>.<p>ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಸೋಮವಾರ ಗಂಗಾನಿಕೇತನ ಫೌಂಡೇಷನ್ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾದದ್ದು. ಮಹಿಳಾ ಸಬಲೀಕರಣದಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದರು.</p>.<p>ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲರಾದಾಗ ಮಾತ್ರ ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಲಿಂಗ ತಾರತಮ್ಯ ಹೋಗಲಾಡಿಸಲು ಮಹಿಳಾ ಸಬಲೀಕರಣವನ್ನು ಬೆಂಬಲಿಸಲು ಸಮಾಜಕ್ಕೆ ಮಹಿಳೆಯರು ನೀಡಿರುವ ಕೊಡುಗೆಗಳನ್ನು ಸ್ಮರಿಸುವ ಅವಶ್ಯಕತೆ ಇದೆ ಎಂದು ಹೇಳಿದರು.</p>.<p>ಶಿಕ್ಷಣ, ಆರೋಗ್ಯ, ಸಮಾಜ ಸೇವೆ ಮತ್ತು ಕೃಷಿ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳಾ ಸಾಧಕರಿಗೆ ಮತ್ತು ಅಸಂಘಟಿತ ಮಹಿಳಾ ಕಾರ್ಮಿಕರಿಗೆ ಸನ್ಮಾನ ಮಾಡಲಾಯಿತು.</p>.<p>ಮುಖ್ಯ ಶಿಕ್ಷಕಿ ನುಸರತ್, ಗ್ರಾಪಂ ಮಾಜಿ ಉಪಾಧ್ಯಕ್ಷೆ ಶ್ವೇತಾ ಅಶ್ವಥ್, ಕೇಶವ ರೆಡ್ಡಿ, ಪಿ.ಎಂ.ಕೃಷ್ಣಪ್ಪ, ಮುನಿರಾಜು, ಮುನಿ ಕೃಷ್ಣಪ್ಪ, ಪ್ರಭಾಕರ್, ವೀರವೆಂಕಟಪ್ಪ, ವಿ.ಬಿ.ದೇಶಪಾಂಡೆ. ಮದಿರಪ್ಪ.ವಿ.ಮಂಜುನಾಥ್ ಗೌಡ, ಅನಿಲ್ ಕುಮಾರ್, ಚಂದ್ರಶೇಖರ್, ದುರ್ಗಮ್ಮ, ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>