<p>ಕೋಲಾರ: ನಗರದ ಪಿ.ಸಿ.ಬಡಾವಣೆಯ ರೇಣುಕಾಂಭ ಸೇವಾ ಸಮಿತಿಯಿಂದ ರೇಣುಕಾ ಯಲ್ಲಮ್ಮ ದೇವಿಯ ಕರಗ ಮಹೋತ್ಸವದ ಸಮಾರೋಪದ ಅಂಗವಾಗಿ ಭಾನುವಾರ ಸಂಜೆ ನಡೆದ ಒನಕೆ ಕರಗ ನೃತ್ಯ ಆಕರ್ಷಕವಾಗಿತ್ತು.</p>.<p>ರಸ್ತೆ ಇಕ್ಕೆಲಗಳಲ್ಲಿ ಕಟ್ಟಡಗಳ ಮೇಲೆ ನಿಂತು ಸಾವಿರಕ್ಕೂ ಅಧಿಕ ಮಂದಿ ಈ ಅದ್ಭುತ ನೃತ್ಯವನ್ನು ಕಣ್ತುಂಬಿಕೊಂಡರು.</p>.<p>ಸುಮಾರು 5 ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು, ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ದೃಶ್ಯ ಮನಮೋಹಕವಾಗಿತ್ತು. ಕರಗದ ಪೂಜಾರಿ ಮಂಜುನಾಥ್ ಅವರ ಕಲಾ ಪ್ರೌಢಿಮೆಯ ಸಾಹಸಕ್ಕೆ ಜನರು ತಲೆದೂಗಿದರು.</p>.<p>ಒನಕೆಯನ್ನು ಕೈಯಿಂದ ಹಿಡಿಯದೇ ಒಂದು ತುದಿಯ ಮೇಲೆ ನೀರು ತುಂಬಿದ ಪಾತ್ರೆಯಿಟ್ಟು, ಮತ್ತೊಂದು ತುದಿಯನ್ನು ತಲೆ ಮೇಲಿಟ್ಟುಕೊಂಡು ನರ್ತಿಸುವ ಮೂಲಕ ಜನತೆ ನಿಬ್ಬೆರಗಾಗುವಂತೆ ಮಾಡಿದರು. ಒನಕೆ ಕರಗ ನೃತ್ಯಕ್ಕೂ ಮೊದಲು ಕಳಶಗಳ ನೃತ್ಯ ನಡೆಯಿತು.</p>.<p>ದೇವಾಲಯ ಸಮಿತಿ ಸದಸ್ಯ ಆರ್ಮುಗಂ ಕುಟುಂಬದವರು ಪ್ರಸಾದ ಉಣಬಡಿಸಿದರು. ರೇಣುಕಾಯಲ್ಲಮ್ಮ ದೇವಾಲಯ ಸಮಿತಿ ಅಧ್ಯಕ್ಷ ಕೆ.ಗಣೇಶ್ ಕರಗಮಹೋತ್ಸವದ ನೇತೃತ್ವ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-18-512394773</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ನಗರದ ಪಿ.ಸಿ.ಬಡಾವಣೆಯ ರೇಣುಕಾಂಭ ಸೇವಾ ಸಮಿತಿಯಿಂದ ರೇಣುಕಾ ಯಲ್ಲಮ್ಮ ದೇವಿಯ ಕರಗ ಮಹೋತ್ಸವದ ಸಮಾರೋಪದ ಅಂಗವಾಗಿ ಭಾನುವಾರ ಸಂಜೆ ನಡೆದ ಒನಕೆ ಕರಗ ನೃತ್ಯ ಆಕರ್ಷಕವಾಗಿತ್ತು.</p>.<p>ರಸ್ತೆ ಇಕ್ಕೆಲಗಳಲ್ಲಿ ಕಟ್ಟಡಗಳ ಮೇಲೆ ನಿಂತು ಸಾವಿರಕ್ಕೂ ಅಧಿಕ ಮಂದಿ ಈ ಅದ್ಭುತ ನೃತ್ಯವನ್ನು ಕಣ್ತುಂಬಿಕೊಂಡರು.</p>.<p>ಸುಮಾರು 5 ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು, ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ದೃಶ್ಯ ಮನಮೋಹಕವಾಗಿತ್ತು. ಕರಗದ ಪೂಜಾರಿ ಮಂಜುನಾಥ್ ಅವರ ಕಲಾ ಪ್ರೌಢಿಮೆಯ ಸಾಹಸಕ್ಕೆ ಜನರು ತಲೆದೂಗಿದರು.</p>.<p>ಒನಕೆಯನ್ನು ಕೈಯಿಂದ ಹಿಡಿಯದೇ ಒಂದು ತುದಿಯ ಮೇಲೆ ನೀರು ತುಂಬಿದ ಪಾತ್ರೆಯಿಟ್ಟು, ಮತ್ತೊಂದು ತುದಿಯನ್ನು ತಲೆ ಮೇಲಿಟ್ಟುಕೊಂಡು ನರ್ತಿಸುವ ಮೂಲಕ ಜನತೆ ನಿಬ್ಬೆರಗಾಗುವಂತೆ ಮಾಡಿದರು. ಒನಕೆ ಕರಗ ನೃತ್ಯಕ್ಕೂ ಮೊದಲು ಕಳಶಗಳ ನೃತ್ಯ ನಡೆಯಿತು.</p>.<p>ದೇವಾಲಯ ಸಮಿತಿ ಸದಸ್ಯ ಆರ್ಮುಗಂ ಕುಟುಂಬದವರು ಪ್ರಸಾದ ಉಣಬಡಿಸಿದರು. ರೇಣುಕಾಯಲ್ಲಮ್ಮ ದೇವಾಲಯ ಸಮಿತಿ ಅಧ್ಯಕ್ಷ ಕೆ.ಗಣೇಶ್ ಕರಗಮಹೋತ್ಸವದ ನೇತೃತ್ವ ವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260504-18-512394773</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>