<p>ಮುಳಬಾಗಿಲು: ಒಳ ಮೀಸಲಾತಿ ರಾಜ್ಯಪತ್ರದಲ್ಲಿ ಅಧಿಕೃತ ಪ್ರಕಟಣೆಯಾಗುವವರೆಗೂ ಯಾವುದೇ ನೇರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬಾರದೆಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಯಲುವಹಳ್ಳಿ ಪ್ರಭಾಕರ್ ಒತ್ತಾಯಿಸಿದ್ದಾರೆ.</p>.<p>ಒಳ ಮೀಸಲಾತಿ ಜಾರಿಯಾಗುವವರೆಗೂ ನೇರ ನೇಮಕಾತಿ ನಡೆಸಲು ಸಚಿವ ಸಂಪುಟ ಅಧಿಸೂಚನೆಯನ್ನು ಹಿಂಪಡೆದಿದೆ. ಇಂತಹ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪಂಚಾಯಿತಿಯಲ್ಲಿ ಕರ ವಸೂಲಿಗಾರರು, ಡಿಇಒ, ಗುಮಾಸ್ತರು ಸೇರಿದಂತೆ ಗ್ರಾ.ಪಂ. ಸಿಬ್ಬಂದಿಯನ್ನು ಕಾರ್ಯದರ್ಶಿ ಗ್ರೇಡ್ 2 ಮತ್ತು ಎಸ್ಡಿಎ ಹುದ್ದೆಗಳಿಗೆ ನೇಮಕಾತಿ ಮಾಡಲು ದಾಖಲೆ ಪರಿಶೀಲನೆ ನಡೆಸುತ್ತಿರುವುದು ಸರಿಯಲ್ಲ ಎಂದರು.</p>.<p>ಒಳ ಮೀಸಲಾತಿ ಶೇಕಡಾವಾರು ಪ್ರಮಾಣವನ್ನು ನಿಖರವಾಗಿ ನಿರ್ಧರಿಸಿ ರಾಜ್ಯಪತ್ರದಲ್ಲಿ ಪ್ರಕಟಣೆ ಆಗುವವರೆಗೂ ಯಾವುದೇ ನೇಮಕಾತಿ ನಡೆಸುವುದು ಕಾನೂನು ಬಾಹಿರ. ಹಾಗಾಗಿ ಕೂಡಲೇ ಕೋಲಾರ ಜಿಲ್ಲಾ ಪಂಚಾಯಿತಿಯಲ್ಲಿ ನೇಮಕಾತಿಗಾಗಿ ದಾಖಲೆ ಪರಿಶೀಲಿಸುದನ್ನು ನಿಲ್ಲಿಸಬೇಕೆಂದು ಪ್ರತಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-18-1114523809</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ಒಳ ಮೀಸಲಾತಿ ರಾಜ್ಯಪತ್ರದಲ್ಲಿ ಅಧಿಕೃತ ಪ್ರಕಟಣೆಯಾಗುವವರೆಗೂ ಯಾವುದೇ ನೇರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಬಾರದೆಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಯಲುವಹಳ್ಳಿ ಪ್ರಭಾಕರ್ ಒತ್ತಾಯಿಸಿದ್ದಾರೆ.</p>.<p>ಒಳ ಮೀಸಲಾತಿ ಜಾರಿಯಾಗುವವರೆಗೂ ನೇರ ನೇಮಕಾತಿ ನಡೆಸಲು ಸಚಿವ ಸಂಪುಟ ಅಧಿಸೂಚನೆಯನ್ನು ಹಿಂಪಡೆದಿದೆ. ಇಂತಹ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪಂಚಾಯಿತಿಯಲ್ಲಿ ಕರ ವಸೂಲಿಗಾರರು, ಡಿಇಒ, ಗುಮಾಸ್ತರು ಸೇರಿದಂತೆ ಗ್ರಾ.ಪಂ. ಸಿಬ್ಬಂದಿಯನ್ನು ಕಾರ್ಯದರ್ಶಿ ಗ್ರೇಡ್ 2 ಮತ್ತು ಎಸ್ಡಿಎ ಹುದ್ದೆಗಳಿಗೆ ನೇಮಕಾತಿ ಮಾಡಲು ದಾಖಲೆ ಪರಿಶೀಲನೆ ನಡೆಸುತ್ತಿರುವುದು ಸರಿಯಲ್ಲ ಎಂದರು.</p>.<p>ಒಳ ಮೀಸಲಾತಿ ಶೇಕಡಾವಾರು ಪ್ರಮಾಣವನ್ನು ನಿಖರವಾಗಿ ನಿರ್ಧರಿಸಿ ರಾಜ್ಯಪತ್ರದಲ್ಲಿ ಪ್ರಕಟಣೆ ಆಗುವವರೆಗೂ ಯಾವುದೇ ನೇಮಕಾತಿ ನಡೆಸುವುದು ಕಾನೂನು ಬಾಹಿರ. ಹಾಗಾಗಿ ಕೂಡಲೇ ಕೋಲಾರ ಜಿಲ್ಲಾ ಪಂಚಾಯಿತಿಯಲ್ಲಿ ನೇಮಕಾತಿಗಾಗಿ ದಾಖಲೆ ಪರಿಶೀಲಿಸುದನ್ನು ನಿಲ್ಲಿಸಬೇಕೆಂದು ಪ್ರತಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-18-1114523809</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>