<p>ಶ್ರೀನಿವಾಸಪುರ: ತಾಲ್ಲೂಕಿನ ರೋಣೂರು ಗ್ರಾಮದಲ್ಲಿ ಸ್ಮಶಾನ ಜಾಗದ ವಿಚಾರವಾಗಿ ಸೋಮವಾರ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.</p>.<p>ಮುಸ್ಲಿಂ ಸಮುದಾಯದವರವರುಸ್ಮಶಾನಕ್ಕೆ ಕಾಂಪೌಂಡ್ ನಿರ್ಮಿಸಲು ಮುಂದಾಗಿದ್ದರು. ಗ್ರಾಮದ ಹೇಮಂತ್ ಎಂಬುವರು ‘ಈ ಜಾಗ ತಮಗೆ ಸೇರಿದ್ದು. ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆ ನಮ್ಮ ಬಳಿ ಇವೆ’ ಎಂದು ಆಕ್ಷೇಪ ಎತ್ತಿದರು. ‘ಹಿಂದಿನಿಂದಲೂ ನಮ್ಮ ಪೂರ್ವಿಕರು ಈ ಜಾಗವನ್ನು ಸ್ಮಶಾನಕ್ಕೆ ಬಳಸುತ್ತಿದ್ದಾರೆ’ ಎಂದು ಮುಸ್ಲಿಂ ಸಮುದಾಯದವರು ಸಮಜಾಯಿಷಿ ನೀಡಿದರು.</p>.<p>ಆಗ ಎರಡೂ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಶ್ರೀನಿವಾಸಪುರ ವೃತ್ತ ನಿರೀಕ್ಷಕ ಶಂಕರಾಚಾರ್ಯ ಹಾಗೂ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-18-1286008662</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ತಾಲ್ಲೂಕಿನ ರೋಣೂರು ಗ್ರಾಮದಲ್ಲಿ ಸ್ಮಶಾನ ಜಾಗದ ವಿಚಾರವಾಗಿ ಸೋಮವಾರ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದ್ದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.</p>.<p>ಮುಸ್ಲಿಂ ಸಮುದಾಯದವರವರುಸ್ಮಶಾನಕ್ಕೆ ಕಾಂಪೌಂಡ್ ನಿರ್ಮಿಸಲು ಮುಂದಾಗಿದ್ದರು. ಗ್ರಾಮದ ಹೇಮಂತ್ ಎಂಬುವರು ‘ಈ ಜಾಗ ತಮಗೆ ಸೇರಿದ್ದು. ಇದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆ ನಮ್ಮ ಬಳಿ ಇವೆ’ ಎಂದು ಆಕ್ಷೇಪ ಎತ್ತಿದರು. ‘ಹಿಂದಿನಿಂದಲೂ ನಮ್ಮ ಪೂರ್ವಿಕರು ಈ ಜಾಗವನ್ನು ಸ್ಮಶಾನಕ್ಕೆ ಬಳಸುತ್ತಿದ್ದಾರೆ’ ಎಂದು ಮುಸ್ಲಿಂ ಸಮುದಾಯದವರು ಸಮಜಾಯಿಷಿ ನೀಡಿದರು.</p>.<p>ಆಗ ಎರಡೂ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಶ್ರೀನಿವಾಸಪುರ ವೃತ್ತ ನಿರೀಕ್ಷಕ ಶಂಕರಾಚಾರ್ಯ ಹಾಗೂ ಸಿಬ್ಬಂದಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260407-18-1286008662</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>