<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ₹ 94 ಲಕ್ಷ ಕಾಮಗಾರಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.</p>.<p>‘ನೀರು ಅಮೂಲ್ಯವಾದ ಸಂಪತ್ತು ಇದನ್ನ ಸುರಕ್ಷಿತವಾಗಿ, ಮಿತವಾಗಿ ಬಳಸಬೇಕು. ಜಲ ಮೂಲಗಳನ್ನು ಸಂರಕ್ಷಿಸಿ ಇದರಿಂದ ಅಂತರ್ಜಲವನ್ನು ಹೆಚ್ಚಿಸಿ ಮುಂದಿನ ಪೀಳಗೆಗೆ ಉಳಿಸುವ ಪ್ರಯತ್ನ ಮಾಡುವುದು ನಮ್ಮೆಲರ ಜವಾಬ್ದಾರಿ’ ಎಂದು ತಿಳಿಸಿದರು.</p>.<p>‘ಸರ್ಕಾರವು ಎಷ್ಟೇ ಉಪಯುಕ್ತ ಯೋಜನೆಗಳು ತಂದರೂ ನಾಗರಿಕರು ಆ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೇಲೆ ಆ ಯೋಜನೆ ಪ್ರಭಾವ ಬೀರುತ್ತದೆ. ಆದ್ದರಿಂದ ನಾಗರಿಕರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ₹ 94 ಲಕ್ಷ ವೆಚ್ಚದಲ್ಲಿ ಗ್ರಾಮದ 700 ಮನೆಗಳಿಗೆ ಪಕ್ಷಾತೀತವಾಗಿ ನಲ್ಲಿಗಳ ಅಳವಡಿಸುವದರ ಮೂಲಕ ನೀರು ಒದಗಿಸಲು ವ್ಯವಸ್ಥೆ ಮಾಡಲಾಗುವುದು. ಗ್ರಾಮದಲ್ಲಿ ಓವರ್ಹೆಡ್ ಟ್ಯಾಂಕ್ ನಿರ್ಮಿಸಿಕೊಡಲಾಗುವುದು ಎಂದರು.</p>.<p>ಇದೇ ಸಮಯದಲ್ಲಿ ಕೋಡಿಪಲ್ಲಿ ಗ್ರಾ.ಪಂ.ವ್ಯಾಪ್ತಿಯ ಚಿಲೇಪಲ್ಲಿ ಗ್ರಾಮದಲ್ಲಿ ₹ 57 ಲಕ್ಷ ವೆಚ್ಚದಲ್ಲಿ 150 ಮನೆಗಳಿಗೆ ಮನೆಗಳಿಗೆ ನಲ್ಲಿ ಹಾಗೂ ಒಂದು ಕೊಳವೆ ಬಾವಿ ಕೊರೆಯಿಸಲಾಗುವುದು ಎಂದು ಹೇಳಿದರು.</p>.<p>ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದಿಂದ ಇರುವಂತೆ ಸೂಚಿಸಿ ನಿಗದಿತ ಸಮಯಕ್ಕೆ ಮುಗಿಸಿಕೊಡುವಂತೆ ಸೂಚನೆ ನೀಡಿದರು.</p>.<p>ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಕೋಡಿಪಲ್ಲಿ ಗ್ರಾ.ಪಂ ಪಿಡಿಒ ಸುನಂದ, ಮುಖಂಡರಾದ ಬಾಬುರೆಡ್ಡಿ, ರಘುನಾಥರೆಡ್ಡಿ, ಭಾಸ್ಕರ್, ಅಯ್ಯಪ್ಪ, ಗುತ್ತಿಗೆದಾರರಾದ ಕೆ.ಆರ್.ಮಹದೇವ, ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯಡಿ ₹ 94 ಲಕ್ಷ ಕಾಮಗಾರಿಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.</p>.<p>‘ನೀರು ಅಮೂಲ್ಯವಾದ ಸಂಪತ್ತು ಇದನ್ನ ಸುರಕ್ಷಿತವಾಗಿ, ಮಿತವಾಗಿ ಬಳಸಬೇಕು. ಜಲ ಮೂಲಗಳನ್ನು ಸಂರಕ್ಷಿಸಿ ಇದರಿಂದ ಅಂತರ್ಜಲವನ್ನು ಹೆಚ್ಚಿಸಿ ಮುಂದಿನ ಪೀಳಗೆಗೆ ಉಳಿಸುವ ಪ್ರಯತ್ನ ಮಾಡುವುದು ನಮ್ಮೆಲರ ಜವಾಬ್ದಾರಿ’ ಎಂದು ತಿಳಿಸಿದರು.</p>.<p>‘ಸರ್ಕಾರವು ಎಷ್ಟೇ ಉಪಯುಕ್ತ ಯೋಜನೆಗಳು ತಂದರೂ ನಾಗರಿಕರು ಆ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವುದರ ಮೇಲೆ ಆ ಯೋಜನೆ ಪ್ರಭಾವ ಬೀರುತ್ತದೆ. ಆದ್ದರಿಂದ ನಾಗರಿಕರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ₹ 94 ಲಕ್ಷ ವೆಚ್ಚದಲ್ಲಿ ಗ್ರಾಮದ 700 ಮನೆಗಳಿಗೆ ಪಕ್ಷಾತೀತವಾಗಿ ನಲ್ಲಿಗಳ ಅಳವಡಿಸುವದರ ಮೂಲಕ ನೀರು ಒದಗಿಸಲು ವ್ಯವಸ್ಥೆ ಮಾಡಲಾಗುವುದು. ಗ್ರಾಮದಲ್ಲಿ ಓವರ್ಹೆಡ್ ಟ್ಯಾಂಕ್ ನಿರ್ಮಿಸಿಕೊಡಲಾಗುವುದು ಎಂದರು.</p>.<p>ಇದೇ ಸಮಯದಲ್ಲಿ ಕೋಡಿಪಲ್ಲಿ ಗ್ರಾ.ಪಂ.ವ್ಯಾಪ್ತಿಯ ಚಿಲೇಪಲ್ಲಿ ಗ್ರಾಮದಲ್ಲಿ ₹ 57 ಲಕ್ಷ ವೆಚ್ಚದಲ್ಲಿ 150 ಮನೆಗಳಿಗೆ ಮನೆಗಳಿಗೆ ನಲ್ಲಿ ಹಾಗೂ ಒಂದು ಕೊಳವೆ ಬಾವಿ ಕೊರೆಯಿಸಲಾಗುವುದು ಎಂದು ಹೇಳಿದರು.</p>.<p>ಗುತ್ತಿಗೆದಾರರು ಕಾಮಗಾರಿಯನ್ನು ಗುಣಮಟ್ಟದಿಂದ ಇರುವಂತೆ ಸೂಚಿಸಿ ನಿಗದಿತ ಸಮಯಕ್ಕೆ ಮುಗಿಸಿಕೊಡುವಂತೆ ಸೂಚನೆ ನೀಡಿದರು.</p>.<p>ಜಿ.ಪಂ. ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಕೋಡಿಪಲ್ಲಿ ಗ್ರಾ.ಪಂ ಪಿಡಿಒ ಸುನಂದ, ಮುಖಂಡರಾದ ಬಾಬುರೆಡ್ಡಿ, ರಘುನಾಥರೆಡ್ಡಿ, ಭಾಸ್ಕರ್, ಅಯ್ಯಪ್ಪ, ಗುತ್ತಿಗೆದಾರರಾದ ಕೆ.ಆರ್.ಮಹದೇವ, ರಮೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>