<p>ಬಂಗಾರಪೇಟೆ: ತಾಲ್ಲೂಕಿನ ಸಾಕರಸನಹಳ್ಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಾಯಕ ಕಾರ್ಯಪಾಲಕ ಆನಂದ್ ಮೂರ್ತಿ ಹಾಗೂ ಜೆಇ ಶ್ರೀನಿವಾಸ್ ಸೋಮವಾರ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದರು.</p>.<p>ಸಾಕರಸನಹಳ್ಳಿಯಿಂದ ಕದರಿನತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಚೂಪಾದ ಜಲ್ಲಿಕಲ್ಲುಗಳ ಮೇಲೆ ರೈತರು ಹಾಗೂ ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ ಎಂದು ಮಾರ್ಚ್ 23 ರಂದು ಪ್ರಜಾವಾಣಿಯಲ್ಲಿ ‘ಹದಗೆಟ್ಟ ರಸ್ತೆ: ಸವಾರರ ಪರದಾಟ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸೋಮವಾರ ಸಾಕರಸನಹಳ್ಳಿಗೆ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದರು.</p>.<p>ಈ ವೇಳೆ ಆನಂದ್ ಮೂರ್ತಿ ಮಾತನಾಡಿ, ಈ ರಸ್ತೆಯ ಶಾಶ್ವತ ದುರಸ್ತಿ ಮತ್ತು ಡಾಂಬರೀಕರಣಕ್ಕೆ ₹98 ಲಕ್ಷ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಆನಂದ್, ಎಸ್.ಕೆ.ಜಯಣ್ಣ, ಶಿವಕುಮಾರ್, ಬಸವರಾಜು, ಬಸಪ್ಪ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-18-396851343</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ತಾಲ್ಲೂಕಿನ ಸಾಕರಸನಹಳ್ಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಹಾಯಕ ಕಾರ್ಯಪಾಲಕ ಆನಂದ್ ಮೂರ್ತಿ ಹಾಗೂ ಜೆಇ ಶ್ರೀನಿವಾಸ್ ಸೋಮವಾರ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದರು.</p>.<p>ಸಾಕರಸನಹಳ್ಳಿಯಿಂದ ಕದರಿನತ್ತ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದೆ. ಚೂಪಾದ ಜಲ್ಲಿಕಲ್ಲುಗಳ ಮೇಲೆ ರೈತರು ಹಾಗೂ ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ ಎಂದು ಮಾರ್ಚ್ 23 ರಂದು ಪ್ರಜಾವಾಣಿಯಲ್ಲಿ ‘ಹದಗೆಟ್ಟ ರಸ್ತೆ: ಸವಾರರ ಪರದಾಟ’ ಎಂಬ ಶೀರ್ಷಿಕೆಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಸೋಮವಾರ ಸಾಕರಸನಹಳ್ಳಿಗೆ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದರು.</p>.<p>ಈ ವೇಳೆ ಆನಂದ್ ಮೂರ್ತಿ ಮಾತನಾಡಿ, ಈ ರಸ್ತೆಯ ಶಾಶ್ವತ ದುರಸ್ತಿ ಮತ್ತು ಡಾಂಬರೀಕರಣಕ್ಕೆ ₹98 ಲಕ್ಷ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.</p>.<p>ಆನಂದ್, ಎಸ್.ಕೆ.ಜಯಣ್ಣ, ಶಿವಕುಮಾರ್, ಬಸವರಾಜು, ಬಸಪ್ಪ ಹಾಗೂ ಗ್ರಾಮಸ್ಥರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-18-396851343</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>