<p>ಶ್ರೀನಿವಾಸಪುರ: ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಆಗಿ ಗ್ರಾಮದ ನಿವಾಸಿ ಪಿ.ಎನ್. ಮಂಜುನಾಥ್ ರೆಡ್ಡಿ ಮತ್ತು ಉಪಾಧ್ಯಕ್ಷ ಆಗಿ ಶಬೀರ್ ಅಹಮದ್ ಆಯ್ಕೆಯಾದರು.</p>.<p>ಸಿಇಒ ಶಿವಾರೆಡ್ಡಿ ಅವರು ಚುನಾವಣಾಧಿಕಾರಿ ಕಾರ್ಯ ನಿರ್ವಹಿಸಿದರು.</p>.<p>ಅಧ್ಯಕ್ಷ ಮಂಜುನಾಥ್ ರೆಡ್ಡಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ರೇಷ್ಮೆ ಬೆಳೆಗಾರರು ಹಾಗೂ ರೈತರಿಗೆ ಸುಲಲಿತವಾಗಿ ತಲುಪಿಸುತ್ತೇವೆ. ತಾಂತ್ರಿಕ ಮಾರ್ಗದರ್ಶನ, ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತೇವೆ ಎಂದು ಹೇಳಿದರು.</p>.<p>ಉಪಾಧ್ಯಕ್ಷ ಶಬೀರ್ ಅಹಮದ್ ಮಾತನಾಡಿ, ‘ನಾನು ಇದೀಗ 3ನೇ ಬಾರಿಗೆ ಉಪಾಧ್ಯಕ್ಷ ಆಗಿ ಆಯ್ಕೆಯಾಗಿದ್ದೇನೆ. ರೇಷ್ಮೆ ಬೆಳೆಗಾರರು ಹಾಗೂ ರೈತರಿಗೆ ಅಗತ್ಯವಿರುವ ಸಾಲ ಸೌಲಭ್ಯ ಒದಗಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ, ಕೆಎಂಎಫ್ ನಿರ್ದೇಶಕ ಕೆ.ಕೆ. ಮಂಜು, ಟಿಎಪಿಸಿಎಂಎಸ್ ನಿರ್ದೇಶಕ ಎಂ.ಪಿ. ಕೃಷ್ಣಾರೆಡ್ಡಿ, ಸೀತಾರಾಮರೆಡ್ಡಿ, ಬೈರರೆಡ್ಡಿ, ಮುನಿವೆಂಕಟಪ್ಪ, ಬಿ.ಎಂ. ಪ್ರಕಾಶ್, ಅಕ್ಬರ್ ಹುಸೇನ್, ತಾಜ್ ಮೌಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-18-2073715162</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಆಗಿ ಗ್ರಾಮದ ನಿವಾಸಿ ಪಿ.ಎನ್. ಮಂಜುನಾಥ್ ರೆಡ್ಡಿ ಮತ್ತು ಉಪಾಧ್ಯಕ್ಷ ಆಗಿ ಶಬೀರ್ ಅಹಮದ್ ಆಯ್ಕೆಯಾದರು.</p>.<p>ಸಿಇಒ ಶಿವಾರೆಡ್ಡಿ ಅವರು ಚುನಾವಣಾಧಿಕಾರಿ ಕಾರ್ಯ ನಿರ್ವಹಿಸಿದರು.</p>.<p>ಅಧ್ಯಕ್ಷ ಮಂಜುನಾಥ್ ರೆಡ್ಡಿ ಮಾತನಾಡಿ, ಸರ್ಕಾರದ ಯೋಜನೆಗಳನ್ನು ರೇಷ್ಮೆ ಬೆಳೆಗಾರರು ಹಾಗೂ ರೈತರಿಗೆ ಸುಲಲಿತವಾಗಿ ತಲುಪಿಸುತ್ತೇವೆ. ತಾಂತ್ರಿಕ ಮಾರ್ಗದರ್ಶನ, ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತೇವೆ ಎಂದು ಹೇಳಿದರು.</p>.<p>ಉಪಾಧ್ಯಕ್ಷ ಶಬೀರ್ ಅಹಮದ್ ಮಾತನಾಡಿ, ‘ನಾನು ಇದೀಗ 3ನೇ ಬಾರಿಗೆ ಉಪಾಧ್ಯಕ್ಷ ಆಗಿ ಆಯ್ಕೆಯಾಗಿದ್ದೇನೆ. ರೇಷ್ಮೆ ಬೆಳೆಗಾರರು ಹಾಗೂ ರೈತರಿಗೆ ಅಗತ್ಯವಿರುವ ಸಾಲ ಸೌಲಭ್ಯ ಒದಗಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ, ಕೆಎಂಎಫ್ ನಿರ್ದೇಶಕ ಕೆ.ಕೆ. ಮಂಜು, ಟಿಎಪಿಸಿಎಂಎಸ್ ನಿರ್ದೇಶಕ ಎಂ.ಪಿ. ಕೃಷ್ಣಾರೆಡ್ಡಿ, ಸೀತಾರಾಮರೆಡ್ಡಿ, ಬೈರರೆಡ್ಡಿ, ಮುನಿವೆಂಕಟಪ್ಪ, ಬಿ.ಎಂ. ಪ್ರಕಾಶ್, ಅಕ್ಬರ್ ಹುಸೇನ್, ತಾಜ್ ಮೌಲ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-18-2073715162</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>