<p>ಶ್ರೀನಿವಾಸಪುರ: ತಾಲ್ಲೂಕಿನ ಕೊಡಿಚೆರವು ಗ್ರಾಮದಲ್ಲಿ ವೇಣುಗೋಪಾಲ ಸ್ವಾಮಿ ಬ್ರಹ್ಮ ರಥೋತ್ಸವ ಗುರುವಾರ ವೈಭವದಿಂದ ನೆರವೇರಿತು.</p>.<p>ಜಾತ್ರೆ ಅಂಗವಾಗಿ ಕಳೆದ ಎಂಟು ದಿನಗಳಿಂದ ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ಸಂಜೆ 4.30ರ ಶುಭ ಲಗ್ನದಲ್ಲಿ ರಥಕ್ಕೆ ಚಾಲನೆ ನೀಡಲಾಯಿತು.</p>.<p>ರಥಕ್ಕೆ ಚಾಲನೆ ಸಿಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು, ದವನ, ಹೂ ಮುಂತಾದ ಮಂಗಳಕರ ವಸ್ತುಗಳನ್ನು ಅರ್ಪಿಸಿ ಹರಕೆ ತೀರಿಸಿದರು.</p>.<p>ಜಾತ್ರೆಯಲ್ಲಿ ಅನ್ನಸಂತರ್ಪಣೆ, ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.</p>.<p>ಗುರುವಾರ ರಾತ್ರಿ ಪುಷ್ಪ ಪಲ್ಲಕ್ಕಿಯಲ್ಲಿ ಸ್ವಾಮಿಯ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಯಿತು. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹಾಗೂ ಸಂಸದ ಮಲ್ಲೇಶ್ ಬಾಬು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ಕಲ್ಪನಾ, ಜಿ.ಎನ್.ವೆಂಕಟೇಶ್ ಗೌಡ, ರಾಮಚಂದ್ರಗೌಡ, ತೂಪಲ್ಲಿ ನಾರಾಯಣಸ್ವಾಮಿ, ಶ್ರೀನಿವಾಸ್, ಶಿವಾರೆಡ್ಡಿ, ಕೆ.ಎಂ.ಶಿವಾನಂದ, ಮುನಿ ವೆಂಕಟಪ್ಪ, ಪೊಲೀಸ್ ಕೃಷ್ಣಪ್ಪ, ಕೆ.ಎಂ.ಗೋಪಾಲಪ್ಪ, ಅಶ್ವತ್ ರೆಡ್ಡಿ, ಕೆ.ಎನ್.ವೆಂಕಟೇಶ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-18-1732948902</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ತಾಲ್ಲೂಕಿನ ಕೊಡಿಚೆರವು ಗ್ರಾಮದಲ್ಲಿ ವೇಣುಗೋಪಾಲ ಸ್ವಾಮಿ ಬ್ರಹ್ಮ ರಥೋತ್ಸವ ಗುರುವಾರ ವೈಭವದಿಂದ ನೆರವೇರಿತು.</p>.<p>ಜಾತ್ರೆ ಅಂಗವಾಗಿ ಕಳೆದ ಎಂಟು ದಿನಗಳಿಂದ ವಿವಿಧ ಪೂಜಾ ಕಾರ್ಯಗಳು ನೆರವೇರಿದವು. ಸಂಜೆ 4.30ರ ಶುಭ ಲಗ್ನದಲ್ಲಿ ರಥಕ್ಕೆ ಚಾಲನೆ ನೀಡಲಾಯಿತು.</p>.<p>ರಥಕ್ಕೆ ಚಾಲನೆ ಸಿಗುತ್ತಿದ್ದಂತೆ ಭಕ್ತರು ರಥಕ್ಕೆ ಬಾಳೆಹಣ್ಣು, ದವನ, ಹೂ ಮುಂತಾದ ಮಂಗಳಕರ ವಸ್ತುಗಳನ್ನು ಅರ್ಪಿಸಿ ಹರಕೆ ತೀರಿಸಿದರು.</p>.<p>ಜಾತ್ರೆಯಲ್ಲಿ ಅನ್ನಸಂತರ್ಪಣೆ, ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು.</p>.<p>ಗುರುವಾರ ರಾತ್ರಿ ಪುಷ್ಪ ಪಲ್ಲಕ್ಕಿಯಲ್ಲಿ ಸ್ವಾಮಿಯ ಉತ್ಸವ ಮೂರ್ತಿ ಮೆರವಣಿಗೆ ಮಾಡಲಾಯಿತು. ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹಾಗೂ ಸಂಸದ ಮಲ್ಲೇಶ್ ಬಾಬು ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.</p>.<p>ಕಲ್ಪನಾ, ಜಿ.ಎನ್.ವೆಂಕಟೇಶ್ ಗೌಡ, ರಾಮಚಂದ್ರಗೌಡ, ತೂಪಲ್ಲಿ ನಾರಾಯಣಸ್ವಾಮಿ, ಶ್ರೀನಿವಾಸ್, ಶಿವಾರೆಡ್ಡಿ, ಕೆ.ಎಂ.ಶಿವಾನಂದ, ಮುನಿ ವೆಂಕಟಪ್ಪ, ಪೊಲೀಸ್ ಕೃಷ್ಣಪ್ಪ, ಕೆ.ಎಂ.ಗೋಪಾಲಪ್ಪ, ಅಶ್ವತ್ ರೆಡ್ಡಿ, ಕೆ.ಎನ್.ವೆಂಕಟೇಶ್ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-18-1732948902</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>