<p><strong>ಕೋಲಾರ:</strong> ಸರ್ಕಾರದಿಂದ ಬಾಕಿ ಹಣ ಬಾರದ ಕಾರಣ ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಯ ಸ್ಕ್ಯಾನಿಂಗ್ ವ್ಯವಸ್ಥೆ ಗುತ್ತಿಗೆ ನೀಡಿರುವ ಕಂಪನಿಯವರು ಸೇವೆ ಸ್ಥಗಿತಗೊಳಿಸಿದ್ದಾರೆ. ಈ ಪರಿಣಾಮ ರೋಗಿಗಳು ಹಾಗೂ ಅವರ ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ ಸ್ಕ್ಯಾನಿಂಗ್, ಎಂಆರ್ಐ ಸ್ಕ್ಯಾನಿಂಗ್ ಉಚಿತವಾಗಿ ಮಾಡಲಾಗುತಿತ್ತು. ಆದರೆ, ಹಣ ಕೊಟ್ಟರೆ ಮಾತ್ರ ಸೇವೆ ನೀಡುವುದಾಗಿ ಸ್ಕ್ಯಾನಿಂಗ್ ವಿಭಾಗದ ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ, ಬುಧವಾರ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.</p>.<p>‘ನಾವೆಲ್ಲಾ ಬಡವರು. ಇಷ್ಟೊಂದು ಹಣ ಇಲ್ಲ. ಇಷ್ಟು ದಿನ ಉಚಿತವಾಗಿ ಮಾಡುತ್ತಿದ್ದ ಸ್ಕ್ಯಾನಿಂಗ್ಗೆ ಈಗ ಏಕೆ ಹಣ ಕೊಡಬೇಕು’ ಎಂದು ರೋಗಿಗಳು ಹಾಗೂ ಅವರ ಕುಟುಂಬದವರು ಪ್ರಶ್ನಿಸಿದರು</p>.<p>ಈ ವೇಳೆ ಸ್ಕ್ಯಾನಿಂಗ್ ಘಟಕದ ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಕೂಡಲೇ ಉಚಿತ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸರ್ಕಾರವು ಕಂಪನಿಯೊಂದಕ್ಕೆ ಸ್ಕ್ಯಾನಿಂಗ್ ಘಟಕವನ್ನು ಹೊರಗುತ್ತಿಗೆ ನೀಡಿದೆ. ಹಲವು ವರ್ಷಗಳಿಂದ ಈ ಕಂಪನಿಯವರೇ ಸ್ಕ್ಯಾನಿಂಗ್ ಘಟಕ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಹಣ ಹೋಗಿಲ್ಲ. ಕೋಟ್ಯಂತರ ರೂಪಾಯಿ ಬಾಕಿ ಇದೆ ಎನ್ನಲಾಗಿದೆ.</p>.<p>ಬಾಕಿ ನೀಡಿದರೆ ಸೇವೆ ಮುಂದುವರಿಸುವುದಾಗಿ ಕಂಪನಿಯವರು ಹೇಳಿದ್ದಾರೆ. ರೋಗಿಗಳು ಹಣ ನೀಡಿದರೆ ಸ್ಕ್ಯಾನಿಂಗ್ ಮಾಡುವುದಾಗಿಯೂ ತಿಳಿಸಿದ್ದಾರೆ.</p>.<p>ಈ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿ ಕೂಡ ಕೆಲ ತಿಂಗಳಿಂದ ವೇತನ ನೀಡಿಲ್ಲವೆಂದು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>‘ನಾವು ಹಣಕ್ಕಾಗಿಯೇ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ಹೀಗೆ ಹಣ ಬಾಕಿ ಉಳಿಸಿಕೊಂಡರೆ ನಾವು ಬದುಕುವುದು ಹೇಗೆ’ ಎಂದು ಸಿಬ್ಬಂದಿ ಗೋಳು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಸರ್ಕಾರದಿಂದ ಬಾಕಿ ಹಣ ಬಾರದ ಕಾರಣ ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆಯ ಸ್ಕ್ಯಾನಿಂಗ್ ವ್ಯವಸ್ಥೆ ಗುತ್ತಿಗೆ ನೀಡಿರುವ ಕಂಪನಿಯವರು ಸೇವೆ ಸ್ಥಗಿತಗೊಳಿಸಿದ್ದಾರೆ. ಈ ಪರಿಣಾಮ ರೋಗಿಗಳು ಹಾಗೂ ಅವರ ಸಂಬಂಧಿಕರು ಅಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಜಿಲ್ಲಾಸ್ಪತ್ರೆಯಲ್ಲಿ ಸಿ.ಟಿ ಸ್ಕ್ಯಾನಿಂಗ್, ಎಂಆರ್ಐ ಸ್ಕ್ಯಾನಿಂಗ್ ಉಚಿತವಾಗಿ ಮಾಡಲಾಗುತಿತ್ತು. ಆದರೆ, ಹಣ ಕೊಟ್ಟರೆ ಮಾತ್ರ ಸೇವೆ ನೀಡುವುದಾಗಿ ಸ್ಕ್ಯಾನಿಂಗ್ ವಿಭಾಗದ ಸಿಬ್ಬಂದಿ ಹೇಳಿದ್ದಾರೆ. ಹೀಗಾಗಿ, ಬುಧವಾರ ಆಸ್ಪತ್ರೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.</p>.<p>‘ನಾವೆಲ್ಲಾ ಬಡವರು. ಇಷ್ಟೊಂದು ಹಣ ಇಲ್ಲ. ಇಷ್ಟು ದಿನ ಉಚಿತವಾಗಿ ಮಾಡುತ್ತಿದ್ದ ಸ್ಕ್ಯಾನಿಂಗ್ಗೆ ಈಗ ಏಕೆ ಹಣ ಕೊಡಬೇಕು’ ಎಂದು ರೋಗಿಗಳು ಹಾಗೂ ಅವರ ಕುಟುಂಬದವರು ಪ್ರಶ್ನಿಸಿದರು</p>.<p>ಈ ವೇಳೆ ಸ್ಕ್ಯಾನಿಂಗ್ ಘಟಕದ ಸಿಬ್ಬಂದಿ ಹಾಗೂ ರೋಗಿಗಳ ಸಂಬಂಧಿಕರ ನಡುವೆ ಮಾತಿನ ಚಕಮಕಿ ನಡೆಯಿತು. ಕೂಡಲೇ ಉಚಿತ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಸರ್ಕಾರವು ಕಂಪನಿಯೊಂದಕ್ಕೆ ಸ್ಕ್ಯಾನಿಂಗ್ ಘಟಕವನ್ನು ಹೊರಗುತ್ತಿಗೆ ನೀಡಿದೆ. ಹಲವು ವರ್ಷಗಳಿಂದ ಈ ಕಂಪನಿಯವರೇ ಸ್ಕ್ಯಾನಿಂಗ್ ಘಟಕ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಮೂರು ವರ್ಷಗಳಿಂದ ಹಣ ಹೋಗಿಲ್ಲ. ಕೋಟ್ಯಂತರ ರೂಪಾಯಿ ಬಾಕಿ ಇದೆ ಎನ್ನಲಾಗಿದೆ.</p>.<p>ಬಾಕಿ ನೀಡಿದರೆ ಸೇವೆ ಮುಂದುವರಿಸುವುದಾಗಿ ಕಂಪನಿಯವರು ಹೇಳಿದ್ದಾರೆ. ರೋಗಿಗಳು ಹಣ ನೀಡಿದರೆ ಸ್ಕ್ಯಾನಿಂಗ್ ಮಾಡುವುದಾಗಿಯೂ ತಿಳಿಸಿದ್ದಾರೆ.</p>.<p>ಈ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿ ಕೂಡ ಕೆಲ ತಿಂಗಳಿಂದ ವೇತನ ನೀಡಿಲ್ಲವೆಂದು ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<p>‘ನಾವು ಹಣಕ್ಕಾಗಿಯೇ ಕೆಲಸ ಮಾಡುತ್ತಿದ್ದೇವೆ. ಸರ್ಕಾರ ಹೀಗೆ ಹಣ ಬಾಕಿ ಉಳಿಸಿಕೊಂಡರೆ ನಾವು ಬದುಕುವುದು ಹೇಗೆ’ ಎಂದು ಸಿಬ್ಬಂದಿ ಗೋಳು ತೋಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>