<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಮುಳಬಾಗಿಲು ಮುಖ್ಯರಸ್ತೆಯ ಹೊಗಳಗೆರೆ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತನನ್ನು ಕಳೆದ ಕೆಲವು ತಿಂಗಳುಗಳಿಂದ ತಾಲ್ಲೂಕಿನ ಕೇತಗಾನಹಳ್ಳಿಯ ಸಿಮೆಂಟ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕನಾಗಿದ್ದ ಒಡಿಶಾ ಮೂಲದ ದೇವುಬಾಸ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ಹೊಗಳಗೆರೆ ಕ್ರಾಸ್ ಸಮೀಪ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಅಪಘಾತವೆಸಗಿದ ವಾಹನದ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಶ್ರೀನಿವಾಸಪುರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಶಂಕರಾಚಾರ್ಯ ಸಿಬ್ಬಂದಿಯೊಂದಿಗೆ ಬಂದು ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-18-1555326978</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಮುಳಬಾಗಿಲು ಮುಖ್ಯರಸ್ತೆಯ ಹೊಗಳಗೆರೆ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತನನ್ನು ಕಳೆದ ಕೆಲವು ತಿಂಗಳುಗಳಿಂದ ತಾಲ್ಲೂಕಿನ ಕೇತಗಾನಹಳ್ಳಿಯ ಸಿಮೆಂಟ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕನಾಗಿದ್ದ ಒಡಿಶಾ ಮೂಲದ ದೇವುಬಾಸ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕೆಲಸ ಮುಗಿಸಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದಾಗ ಹೊಗಳಗೆರೆ ಕ್ರಾಸ್ ಸಮೀಪ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಅಪಘಾತ ಸಂಭವಿಸುತ್ತಿದ್ದಂತೆ ಅಪಘಾತವೆಸಗಿದ ವಾಹನದ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಶ್ರೀನಿವಾಸಪುರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಶಂಕರಾಚಾರ್ಯ ಸಿಬ್ಬಂದಿಯೊಂದಿಗೆ ಬಂದು ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-18-1555326978</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>