<p>ಶ್ರೀನಿವಾಸಪುರ: ತಾಲ್ಲೂಕಿನ ಎಚ್.ಜಿ.ಹೊಸೂರು ಗ್ರಾಮದಲ್ಲಿ ₹ 90 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಹೋಳೂರ ಹೋಬಳಿಯ ಗ್ರಾಮಗಳಿಗೆ ಮೂಲ ಸೌಲಭ್ಯ ಅಭಿವೃದ್ಧಿಗೆ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ಎಲ್ಲಾ ಗ್ರಾಮಗಳಿಗೆ ಮೂರು ತಿಂಗಳೊಳಗೆ ಹೈಮಾಸ್ಟ್ ದೀಪ ಅಳವಡಿಸಲಾಗುವುದು ಎಂದರು.</p>.<p>ಮುದವಾಡಿ ಕಟ್ಟೆಯ ಸಮೀಪ ಸೇತುವೆ ನಿರ್ಮಾಣ ಮಾಡಲಾಗುವುದು. ಹಾಗಾಗಿ ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟವನ್ನು ಕಾಪಾಡಬೇಕೆಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಮುದವಾಡಿ ಗಿರೀಶ್, ಅನಿತಾ ಲೋಕೇಶ್, ಮಾಲಿನಿ ಶೇಖರ್ ಬಾಬು, ಶ್ರೀನಿವಾಸ್ ಬಾಬು, ಕಡವನಹಳ್ಳಿ ಕೇಶವ ಮೂರ್ತಿ, ಶ್ರೀನಿವಾಸ್, ಜಡೀರಿ ಗೋಪಾಲ್, ವಿನಯ್ ಬೀರೇಗೌಡ, ವಿವೇಕ ರೆಡ್ಡಿ, ಬಿ.ಎನ್.ನಾರಾಯಣಗೌಡ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-18-2027163543</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ತಾಲ್ಲೂಕಿನ ಎಚ್.ಜಿ.ಹೊಸೂರು ಗ್ರಾಮದಲ್ಲಿ ₹ 90 ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಗೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಶುಕ್ರವಾರ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಬಳಿಕ ಮಾತನಾಡಿದ ಅವರು, ಹೋಳೂರ ಹೋಬಳಿಯ ಗ್ರಾಮಗಳಿಗೆ ಮೂಲ ಸೌಲಭ್ಯ ಅಭಿವೃದ್ಧಿಗೆ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ಎಲ್ಲಾ ಗ್ರಾಮಗಳಿಗೆ ಮೂರು ತಿಂಗಳೊಳಗೆ ಹೈಮಾಸ್ಟ್ ದೀಪ ಅಳವಡಿಸಲಾಗುವುದು ಎಂದರು.</p>.<p>ಮುದವಾಡಿ ಕಟ್ಟೆಯ ಸಮೀಪ ಸೇತುವೆ ನಿರ್ಮಾಣ ಮಾಡಲಾಗುವುದು. ಹಾಗಾಗಿ ಗುತ್ತಿಗೆದಾರರು ಕಾಮಗಾರಿಯ ಗುಣಮಟ್ಟವನ್ನು ಕಾಪಾಡಬೇಕೆಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ಮುದವಾಡಿ ಗಿರೀಶ್, ಅನಿತಾ ಲೋಕೇಶ್, ಮಾಲಿನಿ ಶೇಖರ್ ಬಾಬು, ಶ್ರೀನಿವಾಸ್ ಬಾಬು, ಕಡವನಹಳ್ಳಿ ಕೇಶವ ಮೂರ್ತಿ, ಶ್ರೀನಿವಾಸ್, ಜಡೀರಿ ಗೋಪಾಲ್, ವಿನಯ್ ಬೀರೇಗೌಡ, ವಿವೇಕ ರೆಡ್ಡಿ, ಬಿ.ಎನ್.ನಾರಾಯಣಗೌಡ ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-18-2027163543</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>