<p><strong>ಕೋಲಾರ:</strong> ಕೋಲಾರ ಜಿಲ್ಲಾ ಸರ್ಕಾರಿ ನೌಕರರ ತಂಡದವರು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಬ್ಯಾಸ್ಕೆಟ್ಬಾಲ್ ಟೂರ್ನಿಯಲ್ಲಿ ಮೊದಲ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.</p>.<p>ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 24ರಿಂದ 26ರವರೆಗೆ ನಡೆದ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದಾರೆ.</p>.<p>ಕೋಲಾರ ತಂಡ ಸೆಮಿಫೈನಲ್ ಪಂದ್ಯದಲ್ಲಿ ಬೆಂಗಳೂರು ನಗರದ ವಿರುದ್ಧ ಜಯ ಗಳಿಸಿತು. ಫೈನಲ್ ಪಂದ್ಯದಲ್ಲಿ ಮಂಡ್ಯ ತಂಡವನ್ನು ಪರಾಭವಗೊಳಿಸಿ ಪ್ರಶಸ್ತಿ ಗೆದ್ದಿತು.</p>.<p>ತಂಡದ ನಾಯಕನಾಗಿರುವ ಕೋಲಾರ ತಾಲ್ಲೂಕಿನ ಕಂದಾಯ ನಿರೀಕ್ಷಕ ಎನ್.ಎಸ್.ರಾಜೇಂದ್ರ ಪ್ರಸಾದ್ ಅವರು 8ನೇ ಬಾರಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಜಯಿಸಿರುತ್ತಾರೆ.</p>.<p>ತಂಡದಲ್ಲಿ ಪುರುಷೋತ್ತಮ್, ಗೋಪಾಲಕೃಷ್ಣ, ಡಾ.ಗಾಯನ್, ದೇವೇಂದ್ರ, ಮನಿಷ್ ಬಾಬು, ಫಿಲಿಪ್ಸ್, ಕೃಷ್ಣ, ಪೃಥ್ವಿ, ಚಂದನ್, ಶೈಲೇಂದ್ರ, ಭರತೇಶ್ವರ ಇದ್ದರು. ತಂಡದ ತರಬೇತುರಾಗಿ ಗುರುಪ್ರಸಾದ್ ಹಾಗೂ ವಿಶ್ವನಾಥ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-18-441726912</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಕೋಲಾರ ಜಿಲ್ಲಾ ಸರ್ಕಾರಿ ನೌಕರರ ತಂಡದವರು ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಬ್ಯಾಸ್ಕೆಟ್ಬಾಲ್ ಟೂರ್ನಿಯಲ್ಲಿ ಮೊದಲ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.</p>.<p>ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 24ರಿಂದ 26ರವರೆಗೆ ನಡೆದ ಕ್ರೀಡಾಕೂಟದಲ್ಲಿ ಈ ಸಾಧನೆ ಮಾಡಿದ್ದಾರೆ.</p>.<p>ಕೋಲಾರ ತಂಡ ಸೆಮಿಫೈನಲ್ ಪಂದ್ಯದಲ್ಲಿ ಬೆಂಗಳೂರು ನಗರದ ವಿರುದ್ಧ ಜಯ ಗಳಿಸಿತು. ಫೈನಲ್ ಪಂದ್ಯದಲ್ಲಿ ಮಂಡ್ಯ ತಂಡವನ್ನು ಪರಾಭವಗೊಳಿಸಿ ಪ್ರಶಸ್ತಿ ಗೆದ್ದಿತು.</p>.<p>ತಂಡದ ನಾಯಕನಾಗಿರುವ ಕೋಲಾರ ತಾಲ್ಲೂಕಿನ ಕಂದಾಯ ನಿರೀಕ್ಷಕ ಎನ್.ಎಸ್.ರಾಜೇಂದ್ರ ಪ್ರಸಾದ್ ಅವರು 8ನೇ ಬಾರಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಜಯಿಸಿರುತ್ತಾರೆ.</p>.<p>ತಂಡದಲ್ಲಿ ಪುರುಷೋತ್ತಮ್, ಗೋಪಾಲಕೃಷ್ಣ, ಡಾ.ಗಾಯನ್, ದೇವೇಂದ್ರ, ಮನಿಷ್ ಬಾಬು, ಫಿಲಿಪ್ಸ್, ಕೃಷ್ಣ, ಪೃಥ್ವಿ, ಚಂದನ್, ಶೈಲೇಂದ್ರ, ಭರತೇಶ್ವರ ಇದ್ದರು. ತಂಡದ ತರಬೇತುರಾಗಿ ಗುರುಪ್ರಸಾದ್ ಹಾಗೂ ವಿಶ್ವನಾಥ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-18-441726912</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>