<p><strong>ಕೋಲಾರ</strong>: ನಗರದ ಹೊರವಲಯದ ಗಾಜಲದಿನ್ನೆಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ಬುಧವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.</p>.<p>ಆ ವಿದ್ಯಾರ್ಥಿನಿಯನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. </p>.<p>ಬುಧವಾರ ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಇತ್ತು. ಅದಕ್ಕೂ ಮೊದಲು ವಿದ್ಯಾರ್ಥಿನಿಯು ಪ್ರಾರ್ಥನೆಯಲ್ಲಿ ಕೂಡ ಪಾಲ್ಗೊಂಡಿದ್ದರು. ಇನ್ನಿತರ ವಿದ್ಯಾರ್ಥಿಗಳು ಪರೀಕ್ಷೆಗೆ ಓದಿಕೊಳ್ಳುತ್ತಿದ್ದಾಗ ಈ ವಿದ್ಯಾರ್ಥಿನಿಯು ಹಾಸ್ಟೆಲ್ನ ಕೊಠಡಿಗೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಕೆ ಬಾರದೇ ಇದ್ದುದ್ದನ್ನು ಗಮನಿಸಿದ ಸ್ನೇಹಿತೆಯರು, ಕೊಠಡಿಗೆ ಹೋಗಿ ಗಮನಿಸಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಇದ್ದದ್ದನ್ನು ನೋಡಿ ಕೂಡಲೇ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲಿಸಿದರು. </p>.<p>ವಿದ್ಯಾರ್ಥಿನಿಯು ಮಾನಸಿಕ ಒತ್ತಡಕ್ಕೆ ಸಿಲುಕಿದ್ದ ಪ್ರಸಂಗ ಹಿಂದೆಯೂ ವರದಿ ಆಗಿತ್ತು. ಪರೀಕ್ಷಾ ಒತ್ತಡದಿಂದ ಈ ಕೃತ್ಯಕ್ಕೆ ಮುಂದಾಗಿರಬಹುದು ಎಂದು ಜಿಲ್ಲೆಯ ಅಲ್ಪಅಸಂಖ್ಯಾತರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ವಸತಿ ಶಾಲೆಯಲ್ಲಿ ವಾರ್ಡನ್ ಹುದ್ದೆ ಖಾಲಿಬಿದ್ದಿದೆ. ಪ್ರಾಂಶುಪಾಲರೇ ನೋಡಿಕೊಳ್ಳಬೇಕಿದ್ದು, ವಸತಿ ಶಾಲೆಯಲ್ಲಿ ಏನು ನಡೆಯುತ್ತಿದೆ ಎಂಬುದೇ ಇಲ್ಲಿನ ಶಿಕ್ಷಕರಿಗೆ ಸರಿಯಾಗಿ ಗೊತ್ತಿಲ್ಲ, ಸರಿಯಾಗಿ ಮಾಹಿತಿ ಕೊಡುವುದಿಲ್ಲ, ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯವೂ ಇದರಲ್ಲಿದೆ ಎಂದು ಸಾರ್ವಜನಿಕರು ದೂರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ನಗರದ ಹೊರವಲಯದ ಗಾಜಲದಿನ್ನೆಯಲ್ಲಿರುವ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ಕೊಠಡಿಯಲ್ಲಿ ಬುಧವಾರ ಬೆಳಿಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.</p>.<p>ಆ ವಿದ್ಯಾರ್ಥಿನಿಯನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ. </p>.<p>ಬುಧವಾರ ಬೆಳಿಗ್ಗೆ 11 ಗಂಟೆಗೆ ಪರೀಕ್ಷೆ ಇತ್ತು. ಅದಕ್ಕೂ ಮೊದಲು ವಿದ್ಯಾರ್ಥಿನಿಯು ಪ್ರಾರ್ಥನೆಯಲ್ಲಿ ಕೂಡ ಪಾಲ್ಗೊಂಡಿದ್ದರು. ಇನ್ನಿತರ ವಿದ್ಯಾರ್ಥಿಗಳು ಪರೀಕ್ಷೆಗೆ ಓದಿಕೊಳ್ಳುತ್ತಿದ್ದಾಗ ಈ ವಿದ್ಯಾರ್ಥಿನಿಯು ಹಾಸ್ಟೆಲ್ನ ಕೊಠಡಿಗೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಕೆ ಬಾರದೇ ಇದ್ದುದ್ದನ್ನು ಗಮನಿಸಿದ ಸ್ನೇಹಿತೆಯರು, ಕೊಠಡಿಗೆ ಹೋಗಿ ಗಮನಿಸಿದಾಗ ನೇಣುಬಿಗಿದ ಸ್ಥಿತಿಯಲ್ಲಿ ಇದ್ದದ್ದನ್ನು ನೋಡಿ ಕೂಡಲೇ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲಿಸಿದರು. </p>.<p>ವಿದ್ಯಾರ್ಥಿನಿಯು ಮಾನಸಿಕ ಒತ್ತಡಕ್ಕೆ ಸಿಲುಕಿದ್ದ ಪ್ರಸಂಗ ಹಿಂದೆಯೂ ವರದಿ ಆಗಿತ್ತು. ಪರೀಕ್ಷಾ ಒತ್ತಡದಿಂದ ಈ ಕೃತ್ಯಕ್ಕೆ ಮುಂದಾಗಿರಬಹುದು ಎಂದು ಜಿಲ್ಲೆಯ ಅಲ್ಪಅಸಂಖ್ಯಾತರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ವಸತಿ ಶಾಲೆಯಲ್ಲಿ ವಾರ್ಡನ್ ಹುದ್ದೆ ಖಾಲಿಬಿದ್ದಿದೆ. ಪ್ರಾಂಶುಪಾಲರೇ ನೋಡಿಕೊಳ್ಳಬೇಕಿದ್ದು, ವಸತಿ ಶಾಲೆಯಲ್ಲಿ ಏನು ನಡೆಯುತ್ತಿದೆ ಎಂಬುದೇ ಇಲ್ಲಿನ ಶಿಕ್ಷಕರಿಗೆ ಸರಿಯಾಗಿ ಗೊತ್ತಿಲ್ಲ, ಸರಿಯಾಗಿ ಮಾಹಿತಿ ಕೊಡುವುದಿಲ್ಲ, ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯವೂ ಇದರಲ್ಲಿದೆ ಎಂದು ಸಾರ್ವಜನಿಕರು ದೂರಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>