<p><strong>ಕೋಲಾರ</strong>: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ 14 ಹಾಗೂ 17 ವರ್ಷದೊಳಗಿನವರ ಬಾಲಕ, ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ 70 ಮಕ್ಕಳು ಆಯ್ಕೆಯಾಗಿದ್ದಾರೆ.</p>.<p>ಈಚೆಗೆ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಈ ಆಯ್ಕೆ ಮಾಡಲಾಗಿತ್ತು.</p>.<p>ನಗರದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಈ ಮಕ್ಕಳಿಗೆ ಶಿಕ್ಷಣಾಧಿಕಾರಿ ವೀಣಾ ಕ್ರೀಡಾ ಸಮವಸ್ತ್ರ ವಿತರಿಸಿ ಬೀಳ್ಕೊಟ್ಟರು.</p>.<p>ಪಠ್ಯದಷ್ಟೇ ಕ್ರೀಡೆಗಳಿಗೂ ಪ್ರಾಮುಖ್ಯವಿದ್ದು, ಸಮಗ್ರ ಶಿಕ್ಷಣದ ಭಾಗವಾಗಿದೆ. ಆಟೋಟಗಳ ಮೂಲಕ ವಿಶ್ವಮಾನ್ಯತೆ ಪಡೆದ ಅನೇಕ ಕ್ರೀಡಾಪಟುಗಳು ನಮಗೆ ಆದರ್ಶವಾಗಿದ್ದು, ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆಯೊಂದಿಗೆ ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತನ್ನಿ ಎಂದು ಅವರು ಹೇಳಿದರು.</p>.<p>ಪೋಷಕರು ತಮ್ಮ ಮಕ್ಕಳನ್ನು ಎಂಜಿನಿಯರಿಂಗ್, ಮೆಡಿಕಲ್ ಶಿಕ್ಷಣಕ್ಕೆ ಸೀಮಿತವಾಗಿಸಲು ಓದಿನ ಕಡೆಗೆ ಆದ್ಯತೆ ನೀಡುತ್ತಾರೆ. ಆದರೆ, ಅನೇಕ ಮಕ್ಕಳಲ್ಲಿ ಓದಿಗಿಂತ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರತಿಭೆ ಮತ್ತು ಆಸಕ್ತಿ ಇರುತ್ತದೆ. ಅಂತಹ ಮಕ್ಕಳು ಪ್ರೋತ್ಸಾಹ ಸಿಗದೆ ವಂಚಿತರಾಗುತ್ತಿದ್ದಾರೆ ಎಂದು ವಿಷಾದಿಸಿದರು.</p>.<p>ಓದಿನಿಂದ ಮಾತ್ರವೇ ಸಾಧನೆ ಮಾಡಬಹುದು ಎಂಬುದು ಸೂಕ್ತ ನಿರ್ಧಾರವಲ್ಲ. ಅದರ ಜತೆಗೆ ಶಿಕ್ಷಣದ ಒಂದು ಭಾಗವಾಗಿರುವ ಕ್ರೀಡೆಗಳಲ್ಲೂ ಜಗತ್ತು ಬೆರಗಾಗಿ ನೋಡುವಂತೆ ಸಾಧನೆ ಮಾಡಬಹುದು, ವಿಶ್ವಮಾನ್ಯತೆ ಗಳಿಸಬಹುದು. ಅನೇಕರು ಒಲಿಂಪಿಕ್ಸ್ನಲ್ಲಿ ಪದಕ ಗೆದ್ದು ದೇಶದ ಘನತೆ ಹೆಚ್ಚಿಸಿದ ಸಾಧಕರು ಇದ್ದಾರೆ ಎಂದರು.</p>.<p>ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಚಂದ್ರಶೇಖರ್ ಮಾತನಾಡಿ, ‘ಜಿಲ್ಲಾಮಟ್ಟದಲ್ಲಿ ನಡೆದ ಪ್ರೌಢಶಾಲಾ ಹಂತದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಒಟ್ಟು 70 ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ತೆರಳುತ್ತಿದ್ದಾರೆ. ಅವರ ಸುರಕ್ಷತೆಗೆ ಒತ್ತು ನೀಡಲಾಗಿದೆ, ಟ್ರ್ಯಾಕ್ ಸೂಟ್ ಕೊಡಿಸಲಾಗಿದೆ’ ಎಂದು ತಿಳಿಸಿದರು.</p>.<p>ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಚೌಡಪ್ಪ ಮಾತನಾಡಿ, ‘ರಾಜ್ಯಮಟ್ಟಕ್ಕೆ ಹೋಗುತ್ತಿರುವ ಮಕ್ಕಳಿಗೆ ಅಲ್ಲಿ ಊಟ, ವಸತಿ ಸೌಲಭ್ಯ ಒದಗಿಸಲಾಗಿದೆ, ಯಾವುದೇ ಸಮಸ್ಯೆ ಎದುರಾಗದಂತೆ ಮಕ್ಕಳ ಸುರಕ್ಷತೆಗೂ ಒತ್ತು ನೀಡಲಾಗಿದೆ’ ಎಂದರು.</p>.<p>ಮಕ್ಕಳೊಂದಿಗೆ ತಂಡದ ವ್ಯವಸ್ಥಾಪಕರಾಗಿ ಶಿಕ್ಷಕರಾದ ಅಂಬಿಕಾ, ವೆಂಕಟೇಶ್, ನಾರಾಯಣಸ್ವಾಮಿ ತೆರಳಿದ್ದಾರೆ ಎಂದು ಹೇಳಿದರು.</p>.<p>ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿ.ಮುರಳಿಮೋಹನ್, ವಿವಿಧ ತಾಲ್ಲೂಕುಗಳ ದೈಹಿಕ ಶಿಕ್ಷಣಾಧಿಕಾರಿಗಳಾದ ರಹೀಂ ಪಾಷಾ, ಮಂಜುನಾರ್ಥ, ವೆಂಕಟೇಶ್, ವೆಂಕಟಸ್ವಾಮಿ, ವಿಷಯ ಪರಿವೀಕ್ಷಕ ಸಮೀವುಲ್ಲಾ, ಶಿಕ್ಷಕಿ ಕೆ.ಲೀಲಾ ಇದ್ದರು.</p>.<p> ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ 17 ವರ್ಷದೊಳಗಿನವರ ಬಾಲಕ, ಬಾಲಕಿಯರು ಆಯ್ಕೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ 14 ಹಾಗೂ 17 ವರ್ಷದೊಳಗಿನವರ ಬಾಲಕ, ಬಾಲಕಿಯರ ರಾಜ್ಯಮಟ್ಟದ ಅಥ್ಲೆಟಿಕ್ಸ್ನಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ 70 ಮಕ್ಕಳು ಆಯ್ಕೆಯಾಗಿದ್ದಾರೆ.</p>.<p>ಈಚೆಗೆ ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಈ ಆಯ್ಕೆ ಮಾಡಲಾಗಿತ್ತು.</p>.<p>ನಗರದ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಈ ಮಕ್ಕಳಿಗೆ ಶಿಕ್ಷಣಾಧಿಕಾರಿ ವೀಣಾ ಕ್ರೀಡಾ ಸಮವಸ್ತ್ರ ವಿತರಿಸಿ ಬೀಳ್ಕೊಟ್ಟರು.</p>.<p>ಪಠ್ಯದಷ್ಟೇ ಕ್ರೀಡೆಗಳಿಗೂ ಪ್ರಾಮುಖ್ಯವಿದ್ದು, ಸಮಗ್ರ ಶಿಕ್ಷಣದ ಭಾಗವಾಗಿದೆ. ಆಟೋಟಗಳ ಮೂಲಕ ವಿಶ್ವಮಾನ್ಯತೆ ಪಡೆದ ಅನೇಕ ಕ್ರೀಡಾಪಟುಗಳು ನಮಗೆ ಆದರ್ಶವಾಗಿದ್ದು, ರಾಜ್ಯಮಟ್ಟದಲ್ಲಿ ಉತ್ತಮ ಸಾಧನೆಯೊಂದಿಗೆ ಜಿಲ್ಲೆ ಹಾಗೂ ಶಾಲೆಗೆ ಕೀರ್ತಿ ತನ್ನಿ ಎಂದು ಅವರು ಹೇಳಿದರು.</p>.<p>ಪೋಷಕರು ತಮ್ಮ ಮಕ್ಕಳನ್ನು ಎಂಜಿನಿಯರಿಂಗ್, ಮೆಡಿಕಲ್ ಶಿಕ್ಷಣಕ್ಕೆ ಸೀಮಿತವಾಗಿಸಲು ಓದಿನ ಕಡೆಗೆ ಆದ್ಯತೆ ನೀಡುತ್ತಾರೆ. ಆದರೆ, ಅನೇಕ ಮಕ್ಕಳಲ್ಲಿ ಓದಿಗಿಂತ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚಿನ ಪ್ರತಿಭೆ ಮತ್ತು ಆಸಕ್ತಿ ಇರುತ್ತದೆ. ಅಂತಹ ಮಕ್ಕಳು ಪ್ರೋತ್ಸಾಹ ಸಿಗದೆ ವಂಚಿತರಾಗುತ್ತಿದ್ದಾರೆ ಎಂದು ವಿಷಾದಿಸಿದರು.</p>.<p>ಓದಿನಿಂದ ಮಾತ್ರವೇ ಸಾಧನೆ ಮಾಡಬಹುದು ಎಂಬುದು ಸೂಕ್ತ ನಿರ್ಧಾರವಲ್ಲ. ಅದರ ಜತೆಗೆ ಶಿಕ್ಷಣದ ಒಂದು ಭಾಗವಾಗಿರುವ ಕ್ರೀಡೆಗಳಲ್ಲೂ ಜಗತ್ತು ಬೆರಗಾಗಿ ನೋಡುವಂತೆ ಸಾಧನೆ ಮಾಡಬಹುದು, ವಿಶ್ವಮಾನ್ಯತೆ ಗಳಿಸಬಹುದು. ಅನೇಕರು ಒಲಿಂಪಿಕ್ಸ್ನಲ್ಲಿ ಪದಕ ಗೆದ್ದು ದೇಶದ ಘನತೆ ಹೆಚ್ಚಿಸಿದ ಸಾಧಕರು ಇದ್ದಾರೆ ಎಂದರು.</p>.<p>ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಚಂದ್ರಶೇಖರ್ ಮಾತನಾಡಿ, ‘ಜಿಲ್ಲಾಮಟ್ಟದಲ್ಲಿ ನಡೆದ ಪ್ರೌಢಶಾಲಾ ಹಂತದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಗೆಲುವು ಸಾಧಿಸಿದ ಒಟ್ಟು 70 ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ತೆರಳುತ್ತಿದ್ದಾರೆ. ಅವರ ಸುರಕ್ಷತೆಗೆ ಒತ್ತು ನೀಡಲಾಗಿದೆ, ಟ್ರ್ಯಾಕ್ ಸೂಟ್ ಕೊಡಿಸಲಾಗಿದೆ’ ಎಂದು ತಿಳಿಸಿದರು.</p>.<p>ರಾಜ್ಯ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಚೌಡಪ್ಪ ಮಾತನಾಡಿ, ‘ರಾಜ್ಯಮಟ್ಟಕ್ಕೆ ಹೋಗುತ್ತಿರುವ ಮಕ್ಕಳಿಗೆ ಅಲ್ಲಿ ಊಟ, ವಸತಿ ಸೌಲಭ್ಯ ಒದಗಿಸಲಾಗಿದೆ, ಯಾವುದೇ ಸಮಸ್ಯೆ ಎದುರಾಗದಂತೆ ಮಕ್ಕಳ ಸುರಕ್ಷತೆಗೂ ಒತ್ತು ನೀಡಲಾಗಿದೆ’ ಎಂದರು.</p>.<p>ಮಕ್ಕಳೊಂದಿಗೆ ತಂಡದ ವ್ಯವಸ್ಥಾಪಕರಾಗಿ ಶಿಕ್ಷಕರಾದ ಅಂಬಿಕಾ, ವೆಂಕಟೇಶ್, ನಾರಾಯಣಸ್ವಾಮಿ ತೆರಳಿದ್ದಾರೆ ಎಂದು ಹೇಳಿದರು.</p>.<p>ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವಿ.ಮುರಳಿಮೋಹನ್, ವಿವಿಧ ತಾಲ್ಲೂಕುಗಳ ದೈಹಿಕ ಶಿಕ್ಷಣಾಧಿಕಾರಿಗಳಾದ ರಹೀಂ ಪಾಷಾ, ಮಂಜುನಾರ್ಥ, ವೆಂಕಟೇಶ್, ವೆಂಕಟಸ್ವಾಮಿ, ವಿಷಯ ಪರಿವೀಕ್ಷಕ ಸಮೀವುಲ್ಲಾ, ಶಿಕ್ಷಕಿ ಕೆ.ಲೀಲಾ ಇದ್ದರು.</p>.<p> ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ 17 ವರ್ಷದೊಳಗಿನವರ ಬಾಲಕ, ಬಾಲಕಿಯರು ಆಯ್ಕೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>