<p>ಕೋಲಾರ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ನಿಂದ ಹಮ್ಮಿಕೊಂಡಿದ್ದ ಬೇಸಿಗೆ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ ಗುರುವಾರ ನಡೆಯಿತು.</p>.<p>ಪೋಷಕರು ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳನ್ನಾಗಿಸಿ ಕ್ರೀಡೆಗಳಿಂದ ದೂರ ಮಾಡುವುದು ಸರಿಯಲ್ಲ. ಕ್ರೀಡೆಗಳಿಂದಲೂ ಬದುಕು ಉಜ್ವಲವಾಗುತ್ತದೆ. ಉನ್ನತ ಶಿಕ್ಷಣ, ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ಇದೆ ಎಂದು ಕರ್ನಾಟಕ ಪ್ಯಾರಾ ಒಲಿಂಪಿಕ್ಸ್ ಅಸೋಷಿಯೇಷನ್ ಜಿಲ್ಲಾಧ್ಯಕ್ಷ ಕೆ.ಜಯದೇವ್ ತಿಳಿಸಿದರು.</p>.<p>ಪಠ್ಯದಿಂದ ಮಾತ್ರವೇ ಸಾಧನೆ ಸಾಧ್ಯ ಎಂಬ ಮಾತು ಬೇಡ. ಕ್ರೀಡೆಗಳಲ್ಲೂ ಉತ್ತಮ ಸಾಧನೆಯೊಂದಿಗೆ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಖ್ಯಾತಿ ಗಳಿಸಿರುವ ಅನೇಕ ಕ್ರೀಡಾಪಟುಗಳು ನಮ್ಮ ಮುಂದೆ ಇದ್ದಾರೆ ಎಂದರು.</p>.<p>ಒಲಿಂಪಿಕ್ಸ್ನಲ್ಲಿ ಯಾವ ದೇಶ ಎಷ್ಟು ಚಿನ್ನದ ಪದಕ ಗಳಿಸುತ್ತದೆ ಎಂಬುದನ್ನು ಕಾತರದಿಂದ ನೋಡುತ್ತೇವೆ. ಆದರೆ ನಮ್ಮ ದೇಶ ಇಲ್ಲಿನ ಜನಸಂಖ್ಯೆಗೆ ತಕ್ಕಂತೆ ನಿರೀಕ್ಷಿತ ಸಾಧನೆ ಮಾಡುತ್ತಿಲ್ಲ ಎಂಬ ನೋವು ಇದೆ ಎಂದು ನುಡಿದರು.</p>.<p>ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ, ಅಧ್ಯಕ್ಷತೆ ವಹಿಸಿದ್ದ ಅಥ್ಲೇಟಿಕ್ಸ್ ಅಸೋಸಿನೇಷನ್ ಅಧ್ಯಕ್ಷ ಜಗನ್ನಾಥ್ ಮಾತನಾಡಿದರು.</p>.<p>ಏ.15 ರಿಂದ ಆರಂಭವಾದ ಬೇಸಿಗೆ ಶಿಬಿರ 22 ದಿನ ನಡೆದಿದೆ. ಶಿಬಿರಾರ್ಥಿಗಳು ಹಾಗೂ ಪೋಷಕರು ತಮ್ಮ ಅನಿಸಿಕೆ ಹಂಚಿಕೊಂಡರು. ಶಿಬಿರದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-2019873315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ನಿಂದ ಹಮ್ಮಿಕೊಂಡಿದ್ದ ಬೇಸಿಗೆ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ ಗುರುವಾರ ನಡೆಯಿತು.</p>.<p>ಪೋಷಕರು ಮಕ್ಕಳನ್ನು ಅಂಕ ಗಳಿಸುವ ಯಂತ್ರಗಳನ್ನಾಗಿಸಿ ಕ್ರೀಡೆಗಳಿಂದ ದೂರ ಮಾಡುವುದು ಸರಿಯಲ್ಲ. ಕ್ರೀಡೆಗಳಿಂದಲೂ ಬದುಕು ಉಜ್ವಲವಾಗುತ್ತದೆ. ಉನ್ನತ ಶಿಕ್ಷಣ, ಉದ್ಯೋಗದಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ಇದೆ ಎಂದು ಕರ್ನಾಟಕ ಪ್ಯಾರಾ ಒಲಿಂಪಿಕ್ಸ್ ಅಸೋಷಿಯೇಷನ್ ಜಿಲ್ಲಾಧ್ಯಕ್ಷ ಕೆ.ಜಯದೇವ್ ತಿಳಿಸಿದರು.</p>.<p>ಪಠ್ಯದಿಂದ ಮಾತ್ರವೇ ಸಾಧನೆ ಸಾಧ್ಯ ಎಂಬ ಮಾತು ಬೇಡ. ಕ್ರೀಡೆಗಳಲ್ಲೂ ಉತ್ತಮ ಸಾಧನೆಯೊಂದಿಗೆ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಖ್ಯಾತಿ ಗಳಿಸಿರುವ ಅನೇಕ ಕ್ರೀಡಾಪಟುಗಳು ನಮ್ಮ ಮುಂದೆ ಇದ್ದಾರೆ ಎಂದರು.</p>.<p>ಒಲಿಂಪಿಕ್ಸ್ನಲ್ಲಿ ಯಾವ ದೇಶ ಎಷ್ಟು ಚಿನ್ನದ ಪದಕ ಗಳಿಸುತ್ತದೆ ಎಂಬುದನ್ನು ಕಾತರದಿಂದ ನೋಡುತ್ತೇವೆ. ಆದರೆ ನಮ್ಮ ದೇಶ ಇಲ್ಲಿನ ಜನಸಂಖ್ಯೆಗೆ ತಕ್ಕಂತೆ ನಿರೀಕ್ಷಿತ ಸಾಧನೆ ಮಾಡುತ್ತಿಲ್ಲ ಎಂಬ ನೋವು ಇದೆ ಎಂದು ನುಡಿದರು.</p>.<p>ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ, ಅಧ್ಯಕ್ಷತೆ ವಹಿಸಿದ್ದ ಅಥ್ಲೇಟಿಕ್ಸ್ ಅಸೋಸಿನೇಷನ್ ಅಧ್ಯಕ್ಷ ಜಗನ್ನಾಥ್ ಮಾತನಾಡಿದರು.</p>.<p>ಏ.15 ರಿಂದ ಆರಂಭವಾದ ಬೇಸಿಗೆ ಶಿಬಿರ 22 ದಿನ ನಡೆದಿದೆ. ಶಿಬಿರಾರ್ಥಿಗಳು ಹಾಗೂ ಪೋಷಕರು ತಮ್ಮ ಅನಿಸಿಕೆ ಹಂಚಿಕೊಂಡರು. ಶಿಬಿರದಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-2019873315</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>