<p><strong>ಕೋಲಾರ</strong>: ತಾಲ್ಲೂಕಿನ ತೊರದೇವಂಡಹಳ್ಳಿ ಗ್ರಾಮದಲ್ಲಿನ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಬೀಗ ಮುರಿದು ದೇವರ ಒಡವೆಗಳನ್ನು ಕಳುವು ಮಾಡಲಾಗಿದ್ದು, ಈ ಸಂಬಂಧ ಗ್ರಾಮಸ್ಥರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಚೌಡೇಶ್ವರಿ ದೇವಾಲಯದ ಮುಖ್ಯದ್ವಾರ ಮತ್ತು ಗರ್ಭಗುಡಿ ಬಾಗಿಲುಗಳ ಚಿಲಕ ಕಿತ್ತು, ಬೀಗ ಒಡೆದು ದೇವರ 1 ದೊಡ್ಡ ಮಾಂಗಲ್ಯ, 5 ಸಣ್ಣ ಮಾಂಗಲ್ಯ ಸೇರಿದಂತೆ ಇನ್ನಿತರೆ ಒಡವೆ ಕಳುವು ಮಾಡಲಾಗಿದೆ.</p>.<p>ದೇವಾಲಯದ ಪ್ರಧಾನ ಅರ್ಚಕ ಸತೀಶ್ ಬೆಳಿಗ್ಗೆ ಪೂಜೆ ಸಲ್ಲಿಸಲು ತೆರಳಿದಾಗ ಕಳುವು ಆಗಿರುವುದು ಗೊತ್ತಾಗಿದೆ. ನಂತರ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. 112 ಗೆ ಕರೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.</p>.<p>ಗ್ರಾಮಾಂತರ ಠಾಣೆ ಪೊಲೀಸರು ಮಹಜರು ನಡೆಸಿ ಕ್ರಮಕೈಗೊಳ್ಳಬೇಕೆಂದು ಅರ್ಚಕ ಸತೀಶ್, ಗ್ರಾಮಸ್ಥರಾದ ರಾಮಚಂದ್ರಪ್ಪ, ರಾಜಪ್ಪ, ಲಕ್ಷ್ಮಿನಾರಾಯಣಗೌಡ ದೂರಿನಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ತಾಲ್ಲೂಕಿನ ತೊರದೇವಂಡಹಳ್ಳಿ ಗ್ರಾಮದಲ್ಲಿನ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಬೀಗ ಮುರಿದು ದೇವರ ಒಡವೆಗಳನ್ನು ಕಳುವು ಮಾಡಲಾಗಿದ್ದು, ಈ ಸಂಬಂಧ ಗ್ರಾಮಸ್ಥರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<p>ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಚೌಡೇಶ್ವರಿ ದೇವಾಲಯದ ಮುಖ್ಯದ್ವಾರ ಮತ್ತು ಗರ್ಭಗುಡಿ ಬಾಗಿಲುಗಳ ಚಿಲಕ ಕಿತ್ತು, ಬೀಗ ಒಡೆದು ದೇವರ 1 ದೊಡ್ಡ ಮಾಂಗಲ್ಯ, 5 ಸಣ್ಣ ಮಾಂಗಲ್ಯ ಸೇರಿದಂತೆ ಇನ್ನಿತರೆ ಒಡವೆ ಕಳುವು ಮಾಡಲಾಗಿದೆ.</p>.<p>ದೇವಾಲಯದ ಪ್ರಧಾನ ಅರ್ಚಕ ಸತೀಶ್ ಬೆಳಿಗ್ಗೆ ಪೂಜೆ ಸಲ್ಲಿಸಲು ತೆರಳಿದಾಗ ಕಳುವು ಆಗಿರುವುದು ಗೊತ್ತಾಗಿದೆ. ನಂತರ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ. 112 ಗೆ ಕರೆ ಮಾಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.</p>.<p>ಗ್ರಾಮಾಂತರ ಠಾಣೆ ಪೊಲೀಸರು ಮಹಜರು ನಡೆಸಿ ಕ್ರಮಕೈಗೊಳ್ಳಬೇಕೆಂದು ಅರ್ಚಕ ಸತೀಶ್, ಗ್ರಾಮಸ್ಥರಾದ ರಾಮಚಂದ್ರಪ್ಪ, ರಾಜಪ್ಪ, ಲಕ್ಷ್ಮಿನಾರಾಯಣಗೌಡ ದೂರಿನಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>