<p><strong>ಕೋಲಾರ</strong>: ದಾರಿ ಕೇಳುವ ನೆಪದಲ್ಲಿ ಮಧ್ಯರಾತ್ರಿ ಸುಲಿಗೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಮುಳಬಾಗಿಲು ತಾಲ್ಲೂಕಿನ ಯಳಗೊಂಡಹಳ್ಳಿ ಗ್ರಾಮದ ಸಿ.ಆದರ್ಶ (20) ಹಾಗೂ ಮಿಣಜೇನಹಳ್ಳಿ ಗ್ರಾಮದ ಹೇಮಂತ್ ಬಂಧಿತ ಆರೋಪಿಗಳು. ಇವರಿಂದ 23 ಗ್ರಾಂ ಚಿನ್ನದ ಸರ, ₹ 4,800 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.</p>.<p>ಕೋಲಾರದ ಗಾಂಧಿನಗರದ ವಾಸಿ ಶಿವಶಂಕರ್ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ಕೋಲಾರದ ಕಡೆಗೆ ಹೊರಡಲು ಶ್ಯಾನುಭೋಗನಹಳ್ಳಿ ಗೇಟ್ ಬಳಿ ತೆರಳಿದ್ದಾರೆ. ಆಗ ಅಲ್ಲಿಗೆ ಬೈಕ್ನಲ್ಲಿ ಬಂದ ಇಬ್ಬರು ವಿಳಾಸ ಕೇಳಿದ್ದಾರೆ. ಶಿವಶಂಕರ್ ಬೈಕ್ ನಿಲ್ಲಿಸಿ ದಾರಿ ತೋರಿಸುತ್ತಿದ್ದಂತೆಯೇ ₹ 3 ಲಕ್ಷ ಮೌಲ್ಯದ 23 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.</p>.<p>ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಕನ್ನಿಕಾ ಸಿಕ್ರಿವಾಲ್, ಮಾರ್ಗದರ್ಶನದಲ್ಲಿ ಎಎಸ್ಪಿ ರವಿಶಂಕರ್, ಜಗದೀಶ್, ಡಿವೈಎಸ್ಪಿ ಕೃಷ್ಣಪ್ಪ ಮುಂದಾಳತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-18-1949981627</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ದಾರಿ ಕೇಳುವ ನೆಪದಲ್ಲಿ ಮಧ್ಯರಾತ್ರಿ ಸುಲಿಗೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.</p>.<p>ಮುಳಬಾಗಿಲು ತಾಲ್ಲೂಕಿನ ಯಳಗೊಂಡಹಳ್ಳಿ ಗ್ರಾಮದ ಸಿ.ಆದರ್ಶ (20) ಹಾಗೂ ಮಿಣಜೇನಹಳ್ಳಿ ಗ್ರಾಮದ ಹೇಮಂತ್ ಬಂಧಿತ ಆರೋಪಿಗಳು. ಇವರಿಂದ 23 ಗ್ರಾಂ ಚಿನ್ನದ ಸರ, ₹ 4,800 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.</p>.<p>ಕೋಲಾರದ ಗಾಂಧಿನಗರದ ವಾಸಿ ಶಿವಶಂಕರ್ ರಾತ್ರಿ ತಮ್ಮ ದ್ವಿಚಕ್ರ ವಾಹನದಲ್ಲಿ ಕೋಲಾರದ ಕಡೆಗೆ ಹೊರಡಲು ಶ್ಯಾನುಭೋಗನಹಳ್ಳಿ ಗೇಟ್ ಬಳಿ ತೆರಳಿದ್ದಾರೆ. ಆಗ ಅಲ್ಲಿಗೆ ಬೈಕ್ನಲ್ಲಿ ಬಂದ ಇಬ್ಬರು ವಿಳಾಸ ಕೇಳಿದ್ದಾರೆ. ಶಿವಶಂಕರ್ ಬೈಕ್ ನಿಲ್ಲಿಸಿ ದಾರಿ ತೋರಿಸುತ್ತಿದ್ದಂತೆಯೇ ₹ 3 ಲಕ್ಷ ಮೌಲ್ಯದ 23 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ.</p>.<p>ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಕನ್ನಿಕಾ ಸಿಕ್ರಿವಾಲ್, ಮಾರ್ಗದರ್ಶನದಲ್ಲಿ ಎಎಸ್ಪಿ ರವಿಶಂಕರ್, ಜಗದೀಶ್, ಡಿವೈಎಸ್ಪಿ ಕೃಷ್ಣಪ್ಪ ಮುಂದಾಳತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-18-1949981627</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>