<p>ಶ್ರೀನಿವಾಸಪುರ: ತಾಲ್ಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಸ್.ನಾಗಾರ್ಜುನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಸಂಘದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಸಂಘದಲ್ಲಿ 10 ನಿರ್ದೇಶಕರಿದ್ದು, ಒಂದು ನಾಮಪತ್ರವನ್ನು ಮಾತ್ರ ಸಲ್ಲಿಕೆ ಆಯಿತು. ಹೀಗಾಗಿ, ನಾಗಾರ್ಜುನ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘವನ್ನು ಪಕ್ಷಾತೀತವಾಗಿ ಮುನ್ನಡೆಸಲಾಗುವುದು. ಸಂಘದ ಅಭಿವೃದ್ಧಿ ಹಾಗೂ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು. ಸಂಘದ ಎಲ್ಲ ನಿರ್ದೇಶಕರೂ ಪೂರ್ಣ ಸಹಕಾರ ನೀಡಬೇಕು ಎಂದು ಅವರು ಹೇಳಿದರು.</p>.<p>ಚುನಾವಣಾಧಿಕಾರಿಯಾಗಿ ಮುಸ್ತಾಕ್ ಅಹ್ಮದ್, ಉಪ ಚುನಾವಣಾಧಿಕಾರಿಯಾಗಿ ವೀರಭದ್ರಪ್ಪ ಕಾರ್ಯನಿರ್ವಹಿಸಿದರು. ಸಂಘದ ಕಾರ್ಯದರ್ಶಿ ಟಿ.ವಿ.ನಾರಾಯಣಸ್ವಾಮಿ, ನಿರ್ದೇಶಕರಾದ ಟಿ.ವಿ.ಚಿನ್ನಪ್ಪರೆಡ್ಡಿ, ಟಿ.ಬಿ.ವೆಂಕಟರಾಮರೆಡ್ಡಿ, ಟಿ.ವಿ.ವೆಂಕಟರಾಮರೆಡ್ಡಿ, ಟಿ.ಜಿ.ಮಂಜುನಾಥರೆಡ್ಡಿ, ಕೆ.ವಿ.ಶ್ರೀನಿವಾಸರೆಡ್ಡಿ, ಟಿ.ವಿ.ರುಕ್ಮಣಿಯಮ್ಮ, ಮುನಿವೆಂಕಟಮ್ಮ ಹಾಗೂ ಗ್ರಾಮಸ್ಥರು ಇದ್ದರು.</p>.<p>ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚನೆ</p>.<p>ಕೋಲಾರ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿಶ್ರಾಂತಿ ನೀಡುವುದು ಗುತ್ತಿಗೆದಾರರು ಹಾಗೂ ಮಾಲೀಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.</p>.<p>ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಹಾಗೂ ಕಾರ್ಮಿಕರ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಕೆಲವು ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದ್ದಾರೆ.</p>.<p>ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಬೇಕು. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು, ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ವಕ್ಕಲೇರಿಯಲ್ಲಿ ಹೆರಿಗೆ ವಾರ್ಡ್ ನಿರ್ಮಾಣ</p>.<p>ಕೋಲಾರ: ತಾಲ್ಲೂಕಿನ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟಾಟಾ ಕಂಪನಿಯ ಸಿಎಸ್ಆರ್ ಯೋಜನೆಯಡಿಯಲ್ಲಿ ಸುಮಾರು ₹ 35 ಲಕ್ಷದಲ್ಲಿ ಮಾದರಿ ಹೆರಿಗೆ ವಾರ್ಡ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.</p>.<p>ಶಾಸಕ ಕೊತ್ತೂರು ಮಂಜುನಾಥ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ಭೂಮಿಪೂಜೆ ನಡೆಯಿತು.</p>.<p>ಮುಖಂಡರಾದ ವಕ್ಕಲೇರಿ ಲೋಕೇಶ್, ಬೊಟ್ಟು ರಾಜಪ್ಪ, ಮನೋಹರ್ ಗೌಡ, ಪೀಸ್ ಮಂಜು, ನಾಗೇಂದ್ರ, ಓಬಣ್ಣ, ಆಸ್ಪತ್ರೆಯ ವೈದ್ಯರು ಸಿಬ್ಬಂದಿ, ಕಂಪನಿಯ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-610594596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ತಾಲ್ಲೂಕಿನ ಆರ್.ತಿಮ್ಮಸಂದ್ರ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಟಿ.ಎಸ್.ನಾಗಾರ್ಜುನ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಸಂಘದ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಸಂಘದಲ್ಲಿ 10 ನಿರ್ದೇಶಕರಿದ್ದು, ಒಂದು ನಾಮಪತ್ರವನ್ನು ಮಾತ್ರ ಸಲ್ಲಿಕೆ ಆಯಿತು. ಹೀಗಾಗಿ, ನಾಗಾರ್ಜುನ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘವನ್ನು ಪಕ್ಷಾತೀತವಾಗಿ ಮುನ್ನಡೆಸಲಾಗುವುದು. ಸಂಘದ ಅಭಿವೃದ್ಧಿ ಹಾಗೂ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಾಗುವುದು. ಸಂಘದ ಎಲ್ಲ ನಿರ್ದೇಶಕರೂ ಪೂರ್ಣ ಸಹಕಾರ ನೀಡಬೇಕು ಎಂದು ಅವರು ಹೇಳಿದರು.</p>.<p>ಚುನಾವಣಾಧಿಕಾರಿಯಾಗಿ ಮುಸ್ತಾಕ್ ಅಹ್ಮದ್, ಉಪ ಚುನಾವಣಾಧಿಕಾರಿಯಾಗಿ ವೀರಭದ್ರಪ್ಪ ಕಾರ್ಯನಿರ್ವಹಿಸಿದರು. ಸಂಘದ ಕಾರ್ಯದರ್ಶಿ ಟಿ.ವಿ.ನಾರಾಯಣಸ್ವಾಮಿ, ನಿರ್ದೇಶಕರಾದ ಟಿ.ವಿ.ಚಿನ್ನಪ್ಪರೆಡ್ಡಿ, ಟಿ.ಬಿ.ವೆಂಕಟರಾಮರೆಡ್ಡಿ, ಟಿ.ವಿ.ವೆಂಕಟರಾಮರೆಡ್ಡಿ, ಟಿ.ಜಿ.ಮಂಜುನಾಥರೆಡ್ಡಿ, ಕೆ.ವಿ.ಶ್ರೀನಿವಾಸರೆಡ್ಡಿ, ಟಿ.ವಿ.ರುಕ್ಮಣಿಯಮ್ಮ, ಮುನಿವೆಂಕಟಮ್ಮ ಹಾಗೂ ಗ್ರಾಮಸ್ಥರು ಇದ್ದರು.</p>.<p>ಕಟ್ಟಡ ಕಾರ್ಮಿಕರಿಗೆ ವಿಶ್ರಾಂತಿ ನೀಡಲು ಸೂಚನೆ</p>.<p>ಕೋಲಾರ: ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನ 1 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿಶ್ರಾಂತಿ ನೀಡುವುದು ಗುತ್ತಿಗೆದಾರರು ಹಾಗೂ ಮಾಲೀಕರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ತಿಳಿಸಿದ್ದಾರೆ.</p>.<p>ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನೆಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಹಾಗೂ ಕಾರ್ಮಿಕರ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಕೆಲವು ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದ್ದಾರೆ.</p>.<p>ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮತ್ತು ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ವ್ಯವಸ್ಥೆ ಮಾಡಬೇಕು. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು, ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ವಕ್ಕಲೇರಿಯಲ್ಲಿ ಹೆರಿಗೆ ವಾರ್ಡ್ ನಿರ್ಮಾಣ</p>.<p>ಕೋಲಾರ: ತಾಲ್ಲೂಕಿನ ವಕ್ಕಲೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಟಾಟಾ ಕಂಪನಿಯ ಸಿಎಸ್ಆರ್ ಯೋಜನೆಯಡಿಯಲ್ಲಿ ಸುಮಾರು ₹ 35 ಲಕ್ಷದಲ್ಲಿ ಮಾದರಿ ಹೆರಿಗೆ ವಾರ್ಡ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು.</p>.<p>ಶಾಸಕ ಕೊತ್ತೂರು ಮಂಜುನಾಥ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವಕ್ಕಲೇರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ನೇತೃತ್ವದಲ್ಲಿ ಭೂಮಿಪೂಜೆ ನಡೆಯಿತು.</p>.<p>ಮುಖಂಡರಾದ ವಕ್ಕಲೇರಿ ಲೋಕೇಶ್, ಬೊಟ್ಟು ರಾಜಪ್ಪ, ಮನೋಹರ್ ಗೌಡ, ಪೀಸ್ ಮಂಜು, ನಾಗೇಂದ್ರ, ಓಬಣ್ಣ, ಆಸ್ಪತ್ರೆಯ ವೈದ್ಯರು ಸಿಬ್ಬಂದಿ, ಕಂಪನಿಯ ಅಧಿಕಾರಿಗಳು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-610594596</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>