<p><strong>ಕೋಲಾರ</strong>: ‘ಜಿಲ್ಲೆಯ ಬಹುತೇಕ ಜನರ ಜೀವನಾಧಾರ ಹೈನುಗಾರಿಕೆಯಾಗಿದ್ದು, ಮಹಿಳೆಯರು ಮತ್ತು ರೈತರ ಬೆವರು ಅಡಗಿದೆ. ಹಾಲಿನ ಹಣ ತಿಂದವರು ಯಾವುದೇ ಕಾರಣಕ್ಕೂ ಉದ್ದಾರ ಆಗಲ್ಲ’ ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ತಿಳಿಸಿದರು.</p>.<p>ತಾಲ್ಲೂಕಿನ ಚಂಜಿಮಲೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಹಾಲನ್ನು ಕಲಬೆರಕೆ ಮಾಡಬೇಡಿ. ಯಾವುದಾದರೂ ತಪ್ಪು ಕಂಡುಬಂದರೆ ಕೂಡಲೇ ಪ್ರಶ್ನೆ ಮಾಡಬೇಕು. ಹಾಲಿನ ದುಡ್ಡು ತಿಂದವರಿಗೆ ರೈತರು ಮಹಿಳೆಯರ ಶಾಪ ತಟ್ಟುತ್ತದೆ. ಹಾಲಿನ ದುಡ್ಡು ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಚಂಜಿಮಲೆ ಡೇರಿಯಲ್ಲಿ ಈ ಸಾಲಿನಲ್ಲಿ ₹ 13 ಲಕ್ಷ ವ್ಯಾಪಾರ ಆಗಿದ್ದು, ಅದರಲ್ಲಿ ₹ 7.46 ಲಕ್ಷದಷ್ಟು ನಿವ್ವಳ ಲಾಭ ಬಂದಿದೆ ಎಂದು ಹೇಳಿದರು.</p>.<p>ನಿರ್ದೇಶಕ ಮುನೇಶ್ ಮಾತನಾಡಿ, ‘ಒಕ್ಕೂಟಕ್ಕೆ ಸಂಘಗಳು ಆಧಾರಸ್ಥಂಭವಾಗಿದೆ. ಯಾವುದೇ ಕಾರಣಕ್ಕೂ ಒಕ್ಕೂಟದಲ್ಲಿ ಹಣ ಪೋಲು ಆಗದಂತೆ ಚಂಜಿಮಲೆ ಡೇರಿಯಿಂದ ಪ್ರತಿನಿಧಿಸಿ ಆಯ್ಕೆಯಾದ ಕೋಮುಲ್ ನೂತನ ನಿರ್ದೇಶಕರು ಕ್ರಮ ವಹಿಸಬೇಕಾಗಿದೆ’ ಎಂದರು.</p>.<p>ಚಂಜಿಮಲೆ ಡೇರಿ ಉಪಾಧ್ಯಕ್ಷ ಎನ್.ಶ್ರೀರಾಮಪ್ಪ, ನಿರ್ದೇಶಕರಾದ ಇ ಚಂದ್ರಪ್ಪ, ನರಸಿಂಹಪ್ಪ, ಪ್ರಸನ್ನ, ಅಲ್ಲಾಭಕಾಷ್, ದೇವರಾಜ್, ರಾಜಪ್ಪ, ಪುಷ್ಪ, ಗೌರಮ್ಮ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಸಿ.ಎನ್ ಪಾಪಣ್ಣ, ಹಾಲು ಪರೀಕ್ಷಕ ಶ್ರೀನಿವಾಸಯ್ಯ, ಸಹಾಯಕ ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಜಿಲ್ಲೆಯ ಬಹುತೇಕ ಜನರ ಜೀವನಾಧಾರ ಹೈನುಗಾರಿಕೆಯಾಗಿದ್ದು, ಮಹಿಳೆಯರು ಮತ್ತು ರೈತರ ಬೆವರು ಅಡಗಿದೆ. ಹಾಲಿನ ಹಣ ತಿಂದವರು ಯಾವುದೇ ಕಾರಣಕ್ಕೂ ಉದ್ದಾರ ಆಗಲ್ಲ’ ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ತಿಳಿಸಿದರು.</p>.<p>ತಾಲ್ಲೂಕಿನ ಚಂಜಿಮಲೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಹಾಲನ್ನು ಕಲಬೆರಕೆ ಮಾಡಬೇಡಿ. ಯಾವುದಾದರೂ ತಪ್ಪು ಕಂಡುಬಂದರೆ ಕೂಡಲೇ ಪ್ರಶ್ನೆ ಮಾಡಬೇಕು. ಹಾಲಿನ ದುಡ್ಡು ತಿಂದವರಿಗೆ ರೈತರು ಮಹಿಳೆಯರ ಶಾಪ ತಟ್ಟುತ್ತದೆ. ಹಾಲಿನ ದುಡ್ಡು ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು’ ಎಂದರು.</p>.<p>ಚಂಜಿಮಲೆ ಡೇರಿಯಲ್ಲಿ ಈ ಸಾಲಿನಲ್ಲಿ ₹ 13 ಲಕ್ಷ ವ್ಯಾಪಾರ ಆಗಿದ್ದು, ಅದರಲ್ಲಿ ₹ 7.46 ಲಕ್ಷದಷ್ಟು ನಿವ್ವಳ ಲಾಭ ಬಂದಿದೆ ಎಂದು ಹೇಳಿದರು.</p>.<p>ನಿರ್ದೇಶಕ ಮುನೇಶ್ ಮಾತನಾಡಿ, ‘ಒಕ್ಕೂಟಕ್ಕೆ ಸಂಘಗಳು ಆಧಾರಸ್ಥಂಭವಾಗಿದೆ. ಯಾವುದೇ ಕಾರಣಕ್ಕೂ ಒಕ್ಕೂಟದಲ್ಲಿ ಹಣ ಪೋಲು ಆಗದಂತೆ ಚಂಜಿಮಲೆ ಡೇರಿಯಿಂದ ಪ್ರತಿನಿಧಿಸಿ ಆಯ್ಕೆಯಾದ ಕೋಮುಲ್ ನೂತನ ನಿರ್ದೇಶಕರು ಕ್ರಮ ವಹಿಸಬೇಕಾಗಿದೆ’ ಎಂದರು.</p>.<p>ಚಂಜಿಮಲೆ ಡೇರಿ ಉಪಾಧ್ಯಕ್ಷ ಎನ್.ಶ್ರೀರಾಮಪ್ಪ, ನಿರ್ದೇಶಕರಾದ ಇ ಚಂದ್ರಪ್ಪ, ನರಸಿಂಹಪ್ಪ, ಪ್ರಸನ್ನ, ಅಲ್ಲಾಭಕಾಷ್, ದೇವರಾಜ್, ರಾಜಪ್ಪ, ಪುಷ್ಪ, ಗೌರಮ್ಮ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಸಿ.ಎನ್ ಪಾಪಣ್ಣ, ಹಾಲು ಪರೀಕ್ಷಕ ಶ್ರೀನಿವಾಸಯ್ಯ, ಸಹಾಯಕ ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>