<p>ಕೆಜಿಎಫ್: ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಪೇಪರ್ ಉಪಯೋಗ ಕಡಿಮೆ ಮಾಡಲು ಇ–ಸೇವೆಯನ್ನು ಹೆಚ್ಚು ಬಳಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಸೇವೆಯನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಸಾರಿಗೆ ಆಯುಕ್ತ ( ಇ ಗವರ್ನನ್ಸ್) ಜ್ಞಾನೇಂದ್ರ ಹೇಳಿದರು.</p>.<p>ಬೆಮಲ್ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಶನಿವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಬ್ಬಂದಿ ಕೊರತೆ ನಿವಾರಿಸಲು ಇ ಸೇವೆಯನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಸೇವೆ ಪಡೆಯಬಹುದು. ಚಾಲನಾ ತರಬೇತಿಯಿಂದ ಹಿಡಿದು ಹಲವು ಸೇವೆಗಳನ್ನು ಈಗ ಇ–ಸೇವೆಯಲ್ಲಿ ಮಾಡುತ್ತಿದ್ದೇವೆ ಎಂದರು.</p>.<p>ಸಾರಿಗೆ ಇಲಾಖೆಯ ಕಟ್ಟಡ ಇರುವ ಜಾಗದಲ್ಲಿ ವಿದ್ಯುತ್ ಉಳಿತಾಯ ಯೋಜನೆ ರೂಪಿಸಲಾಗಿದೆ. ಅಲ್ಲಿ ವಿದ್ಯುತ್ ಪರ್ಯಾಯವಾಗಿ ಸೋಲಾರ್ ಶಕ್ತಿಯನ್ನು ಬಳಸಿಕೊಳ್ಳಬೇಕಾಗಿದೆ. ಕೆಜಿಎಫ್ ಕಟ್ಟಡದಲ್ಲಿ ಕೂಡ ಶೀಘ್ರದಲ್ಲಿಯೇ ಸೋಲಾರ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.</p>.<p>ಎಆರ್ಟಿಒ ಕಚೇರಿಯಲ್ಲಿ ಸ್ವಯಂಚಾಲಿತ ವಾಹನ ತರಬೇತಿ ಪರೀಕ್ಷಾರ್ಥ ಪಥ ಈಗ ಮ್ಯಾನುವೆಲ್ ಆಗಿ ನಡೆಯುತ್ತಿದೆ. ಸ್ವಯಂಚಾಲಿತ ವ್ಯವಸ್ಥೆಗೆ ಸೆನ್ಸಾರ್ ಅಳವಡಿಸಬೇಕಾಗಿದೆ. ಸೆನ್ಸಾರ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಅತಿ ಶೀಘ್ರದಲ್ಲಿಯೇ ಸೆನ್ಸಾರ್ ಅಳವಡಿಸಲಾಗುವುದು ಎಂದು ಹೇಳಿದರು.</p>.<p>ಗಜೇಂದ್ರ ಬಾಬು, ಇನ್ಸ್ಪೆಕ್ಟರ್ಗಳಾದ ಶ್ರೀನಿವಾಸ್, ಮುನಿಕೃಷ್ಣ, ಪೂಜಾ, ಸಿಬ್ಬಂದಿಗಳಾದ ಪ್ರಕಾಶ್, ಆನಂದಕುಮಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-18-1641487727</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಪೇಪರ್ ಉಪಯೋಗ ಕಡಿಮೆ ಮಾಡಲು ಇ–ಸೇವೆಯನ್ನು ಹೆಚ್ಚು ಬಳಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಸೇವೆಯನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದು ಸಾರಿಗೆ ಆಯುಕ್ತ ( ಇ ಗವರ್ನನ್ಸ್) ಜ್ಞಾನೇಂದ್ರ ಹೇಳಿದರು.</p>.<p>ಬೆಮಲ್ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಗೆ ಶನಿವಾರ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಿಬ್ಬಂದಿ ಕೊರತೆ ನಿವಾರಿಸಲು ಇ ಸೇವೆಯನ್ನು ಬಳಸಲಾಗುತ್ತಿದೆ. ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ಸೇವೆ ಪಡೆಯಬಹುದು. ಚಾಲನಾ ತರಬೇತಿಯಿಂದ ಹಿಡಿದು ಹಲವು ಸೇವೆಗಳನ್ನು ಈಗ ಇ–ಸೇವೆಯಲ್ಲಿ ಮಾಡುತ್ತಿದ್ದೇವೆ ಎಂದರು.</p>.<p>ಸಾರಿಗೆ ಇಲಾಖೆಯ ಕಟ್ಟಡ ಇರುವ ಜಾಗದಲ್ಲಿ ವಿದ್ಯುತ್ ಉಳಿತಾಯ ಯೋಜನೆ ರೂಪಿಸಲಾಗಿದೆ. ಅಲ್ಲಿ ವಿದ್ಯುತ್ ಪರ್ಯಾಯವಾಗಿ ಸೋಲಾರ್ ಶಕ್ತಿಯನ್ನು ಬಳಸಿಕೊಳ್ಳಬೇಕಾಗಿದೆ. ಕೆಜಿಎಫ್ ಕಟ್ಟಡದಲ್ಲಿ ಕೂಡ ಶೀಘ್ರದಲ್ಲಿಯೇ ಸೋಲಾರ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.</p>.<p>ಎಆರ್ಟಿಒ ಕಚೇರಿಯಲ್ಲಿ ಸ್ವಯಂಚಾಲಿತ ವಾಹನ ತರಬೇತಿ ಪರೀಕ್ಷಾರ್ಥ ಪಥ ಈಗ ಮ್ಯಾನುವೆಲ್ ಆಗಿ ನಡೆಯುತ್ತಿದೆ. ಸ್ವಯಂಚಾಲಿತ ವ್ಯವಸ್ಥೆಗೆ ಸೆನ್ಸಾರ್ ಅಳವಡಿಸಬೇಕಾಗಿದೆ. ಸೆನ್ಸಾರ್ ಅಳವಡಿಸಲು ಟೆಂಡರ್ ಕರೆಯಲಾಗಿದೆ. ಅತಿ ಶೀಘ್ರದಲ್ಲಿಯೇ ಸೆನ್ಸಾರ್ ಅಳವಡಿಸಲಾಗುವುದು ಎಂದು ಹೇಳಿದರು.</p>.<p>ಗಜೇಂದ್ರ ಬಾಬು, ಇನ್ಸ್ಪೆಕ್ಟರ್ಗಳಾದ ಶ್ರೀನಿವಾಸ್, ಮುನಿಕೃಷ್ಣ, ಪೂಜಾ, ಸಿಬ್ಬಂದಿಗಳಾದ ಪ್ರಕಾಶ್, ಆನಂದಕುಮಾರ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-18-1641487727</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>